ಗಾಂಧೀವಾದಿ, ಕೃಷಿ ಕ್ಷೇತ್ರದ ಭೀಷ್ಮ ಮುದ್ದಣ್ಣ ಶೆಟ್ರಾ ಮನೆಯಲ್ಲಿ ಪ್ರಾರಂಭಿಸಿದ ಶಾಲೆ

ಉಳಿಯಾರಗೋಳಿ ದಂಡತೀರ್ಥ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

Team Udayavani, Nov 18, 2019, 5:02 AM IST

1311KPE1A

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಕಾಪು: ಮಧ್ವಾಚಾರ್ಯರ ದಂಡದಿಂದ ಉದಿಸಿದ ಕ್ಷೇತ್ರ ದಂಡತೀರ್ಥ. ಉಡುಪಿ ಪರ್ಯಾಯ ಸರ್ವಜ್ಞ ಪೀಠವನ್ನೇರುವ ಮುನ್ನ ಪೀಠಾಧಿಪತಿಗಳು ದಂಡತೀರ್ಥ ಕೆರೆಯಲ್ಲಿ ಸ್ನಾನ ಮಾಡಿ ಬರುವುದು ಸಂಪ್ರದಾಯ. ಇಂತಹ ಧಾರ್ಮಿಕ ಮತ್ತು ಐತಿಹಾಸಿಕ ಪ್ರಸಿದ್ಧಿಗೆ ಕಾರಣವಾಗಿರುವ ಕಾಪು ಸಮೀಪದ ದಂಡತೀರ್ಥದಲ್ಲಿ ಹಿರಿಯ ಗಾಂಧೀವಾದಿ ದಿ| ಮುದ್ದಣ್ಣ ಶೆಟ್ಟಿ ಅವರು 1917ರಲ್ಲಿ ಸ್ಥಾಪಿಸಿದ ದಂಡತೀರ್ಥ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಪೂರೈಸಿದ ಸಂಭ್ರಮದಲ್ಲಿದೆ.

ಉಳಿಯಾರಗೋಳಿ ಮತ್ತು ಸುತ್ತಲಿನ ಭಾಗದ ಜನತೆಯ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಕೃಷಿ ಕ್ಷೇತ್ರದ ಭೀಷ್ಮ ಎಂದೇ ಖ್ಯಾತನಾಮರಾಗಿದ್ದ ಯು. ಮುದ್ದಣ್ಣ ಶೆಟ್ಟಿ ಅವರು ಪ್ರಾರಂಭದಲ್ಲಿ ತನ್ನ ಮನೆಯಲ್ಲಿಯೇ (ಪ್ರಸ್ತುತ ಕೆನರಾ ನರ್ಸರಿ ಇರುವ ಸ್ಥಳದಲ್ಲಿ) ದಂಡತೀರ್ಥ ಕನ್ನಡ ಮಾಧ್ಯಮ ಶಾಲೆಯ ತರಗತಿಯನ್ನು ಪ್ರಾರಂಭಿಸಿದ್ದರು. ನಂತರದ ವರ್ಷಗಳಲ್ಲಿ ಹಾಲಿ ಇರುವ ಇರುವ ಸ್ಥಳಕ್ಕೆ ಶಾಲೆ ಸ್ಥಳಾಂತರಗೊಂಡಿತು.

ಪ್ರಸ್ತುತ 52 ವಿದ್ಯಾರ್ಥಿಗಳು
1917ರಲ್ಲಿ ಪ್ರಾರಂಭಗೊಂಡಿದ್ದ ದಂಡತೀರ್ಥ ಕನ್ನಡ ಮಾಧ್ಯಮ ಶಾಲೆಯು ಸಾವಿರಾರು ಮಂದಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಕಾರಣವಾಗಿದ್ದು, 1954ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿತು. ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಆಂಗ್ಲ ಮಾ. ಪ್ರೌ. ಶಾಲೆ, ದಂಡತೀರ್ಥ ಪಿಯು ಕಾಲೇಜು ಮತ್ತು ಪ್ರಶಾಂತ್‌ ಪ್ಯಾರಾ ಮೆಡಿಕಲ್‌ ಕಾಲೇಜು ಕೂಡಾ ಇಲ್ಲಿ ತಲೆ ಎತ್ತಿದೆ.

ಹಿಂದೆ 700-800ರಷ್ಟು ವಿದ್ಯಾರ್ಥಿಗಳಿದ್ದ ಈ ಶಾಲೆಯಲ್ಲಿ 19-20 ಮಂದಿ ಶಿಕ್ಷಕ – ಶಿಕ್ಷಕಿಯರಿದ್ದರು. ಆದರೆ ಈಗ ವಿದ್ಯಾರ್ಥಿಗಳ ಸಂಖ್ಯೆ 52ಕ್ಕೆ ಕುಸಿದಿದ್ದು, ಮುಖ್ಯ ಶಿಕ್ಷಕಿ ಸೇರಿದಂತೆ ಇಬ್ಬರು ಸರಕಾರಿ ಶಿಕ್ಷಕಿಯರು ಮತ್ತು ಆಡಳಿತ ಮಂಡಳಿಯ ಸಹಕಾರದೊಂದಿಗೆ 4 ಮಂದಿ ಗೌರವ ಶಿಕ್ಷಕಿಯರು ಮಕ್ಕಳಿಗೆ ಶಿಕ್ಷಣಾಭ್ಯಾಸ ನೀಡುತ್ತಿದ್ದಾರೆ.

ಟ್ರಸ್ಟ್‌ನ ಪೂರ್ಣ ಬೆಂಬಲ
ಸಂಸ್ಥೆಯ ಸಂಸ್ಥಾಪಕ ದಿ| ಮುದ್ದಣ್ಣ ಶೆಟ್ಟಿ ಅವರ ನಿಧನಾನಂತರ ಅವರ ಪತ್ನಿ ಗಿರಿಜಾ ಎಂ. ಶೆಟ್ಟಿ, ಅಳಿಯ ಗೋವಿಂದ ಶೆಟ್ಟಿ, ನಂತರ ಗೋವಿಂದ ಶೆಟ್ರ ಪತ್ನಿ ವಸಂತಿ ಜಿ. ಶೆಟ್ಟಿ ಶಾಲಾ ಸಂಚಾಲಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ಅವರ ಅಳಿಯ ಡಾ| ಕೆ. ಪ್ರಭಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಉಳಿಯಾರಗೋಳಿ ಪದ್ದಕ್ಕ ಕೋಟಿ ಶೆಟ್ಟಿ ಮೆಮೋರಿಯಲ್‌ ಟ್ರಸ್ಟ್‌ನ ಮೂಲಕ ಸಂಸ್ಥೆಯು ಪ್ರಬಲವಾಗಿ ಮುನ್ನಡೆದಿದೆ. ಪ್ರಸ್ತುತ ಅವರ ಮಗ ಡಾ| ಕೆ. ಪ್ರಶಾಂತ್‌ ಶೆಟ್ಟಿ ಸಂಸ್ಥೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಹೆಮ್ಮೆಯ ಶಿಕ್ಷಕರು
ಅಗಳಿ ರಾಮರಾವ್‌ ಇಲ್ಲಿನ ಪ್ರಥಮ ಮುಖ್ಯೋಪಾಧ್ಯಾಯರಾಗಿದ್ದು, ಉಳಿದಂತೆ ಸಹದೇವ ಅಮಣ್ಣ, ಯು. ಗೋವಿಂದ, ಪಾಂಗಾಳ ಸುಬ್ಟಾ ರಾಬ್‌ ಮತ್ತು ಜಯಾ ಬಾೖ ಅವರು ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಗುರುತಿಸಲ್ಪಡುವಂತಹ ಸಾಧನೆಗೈದಿದ್ದಾರೆ. ಇವರಲ್ಲಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಜಯಾ ಬಾೖ, ಪ್ರಸ್ತುತ ಮಖ್ಯೋಪಾಧ್ಯಾಯಿನಿ ವಾರಿಜಾ ಟೀಚರ್‌ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯೂ ದೊರಕಿದೆ.

ಹೆಮ್ಮೆಯ ಹಳೇ ವಿದ್ಯಾರ್ಥಿಗಳು
ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ನಿವೃತ್ತ ಡೀನ್‌ ಡಾ| ಕೆ. ಆರ್‌. ಶೆಟ್ಟಿ, ಅಂತಾರಾಷ್ಟ್ರೀಯ ಖ್ಯಾತಿಯ ಮೂಳೆರೋಗ ತಜ್ಞ ಡಾ| ವಿಜಯ್‌, ಅಮೆರಿಕಾದ ವೈದ್ಯ ಡಾ| ಸೀತಾರಾಮ ಭಟ್‌, ಬೆಂಗಳೂರು ವಿವಿ ಪ್ರೊಫೆಸರ್‌ ಡಾ| ಜಯ ಶೆಟ್ಟಿ, ಕರ್ನಾಟಕ ಹಾಲು ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಸಹಿತ ಹಲವು ಮಂದಿ ರಾಜಕೀಯ, ಶೈಕ್ಷಣಿಕ, ವೈದ್ಯಕೀಯ ಕ್ಷೇತ್ರದ ಸಾಧಕರುಗಳನ್ನು ಬೆಳೆಸಿರುವುದು ದಂಡತೀರ್ಥ ಶಾಲೆಯ ಹೆಗ್ಗಳಿಕೆಯಾಗಿದೆ.

ಆಡಳಿತ ಮಂಡಳಿ, ಸಂಚಾಲಕರ ಪ್ರೋತ್ಸಾಹ ದಿಂದಾಗಿ ಇಲ್ಲಿನ ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸಲು ಸಾಧ್ಯವಾಗಿದೆ. ಆಂಗ್ಲ ಮಾಧ್ಯಮ ಶಾಲೆಗೆ ಸಮಾನವಾಗಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ಜೋಡಿಸಲಾಗಿದ್ದು, ಸರಕಾರದ ಎಲ್ಲ ಸವಲತ್ತುಗಳು ನಮ್ಮ ಶಾಲಾ ಮಕ್ಕಳಿಗೂ ದೊರಕುವಂತಾಗಬೇಕು.
-ವಾರಿಜಾ ಟೀಚರ್‌, ಮುಖ್ಯೋಪಾಧ್ಯಾಯಿನಿ

ಶತಮಾನ ಪೂರೈಸಿದ ಕನ್ನಡ ಮಾಧ್ಯಮ ಶಾಲೆಗೆ ಶತಮಾನೋತ್ಸವದ ನೆನಪಿಗಾಗಿ 1.50 ಕೋಟಿ ರೂ. ವೆಚ್ಚದ ಸುಸಜ್ಜಿತ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಇಲ್ಲಿನ ದಂಡತೀರ್ಥ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಡೆಯುವ ರೀತಿಯದ್ದೇ ಎಲ್ಲಾ ಸವಲತ್ತುಗಳನ್ನು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೂ ಒದಗಿಸಿಕೊಡಲಾಗುತ್ತಿದೆ.
-ಶೋಭಾ ಪ್ರಭಾಕರ ಶೆಟ್ಟಿ,
ಹಳೇ ವಿದ್ಯಾರ್ಥಿನಿ

-ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.