ಆರ್.ವಿ.ರಸ್ತೆ-ಯಲಚೇನಹಳ್ಳಿ ಮೆಟ್ರೋ ಸೇವೆ ಪುನರಾಂಭ
Team Udayavani, Nov 18, 2019, 3:00 AM IST
ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಆರ್.ವಿ.ರಸ್ತೆ-ಯಲಚೇನಹಳ್ಳಿ ನಡುವೆ ಸ್ಥಗಿತಗೊಂಡಿದ್ದ ಮೆಟ್ರೋ ಸೇವೆ ಸೋಮವಾರದಿಂದ ಪುನರಾರಂಭಗೊಳ್ಳಲಿದ್ದು, 24 ಕಿ.ಮೀ. ಉದ್ದದ ಇಡೀ ಹಸಿರು ಮಾರ್ಗದಲ್ಲಿ ಎಂದಿನಂತೆ “ನಮ್ಮ ಮೆಟ್ರೋ’ ಕಾರ್ಯಾಚರಣೆ ಮಾಡಲಿದೆ.
ಎರಡನೇ ಹಂತದ ಎತ್ತರಿಸಿದ ಮಾರ್ಗದಲ್ಲಿ ಬರುವ ಬೊಮ್ಮಸಂದ್ರದಲ್ಲಿ ವಯಾಡಕ್ಟ್ ಅಳವಡಿಕೆ ಕಾರ್ಯ ಮುಗಿದಿದೆ. ಹಾಗಾಗಿ, ನ. 18ರ ಬೆಳಿಗ್ಗೆ 5ರಿಂದ ಎರಡೂ ತುದಿಗಳಿಂದ ಅಂದರೆ ನಾಗಸಂದ್ರ ಹಾಗೂ ಯಲಚೇನಹಳ್ಳಿಯಿಂದ ಮೆಟ್ರೋ ರೈಲುಗಳು ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವಾಣ್ ಸ್ಪಷ್ಟಪಡಿಸಿದರು.
ಬೊಮ್ಮಸಂದ್ರದಲ್ಲಿ ವಯಾಡಕ್ಟ್ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ನ. 14ರಿಂದ 17ರವರೆಗೆ ಆರ್.ವಿ. ರಸ್ತೆ-ಯಲಚೇನಹಳ್ಳಿ ನಡುವೆ ರೈಲು ಸಂಚಾರ ಸ್ಥಗಿತಗೊಂಡಿತ್ತು. ಇದಕ್ಕೆ ಪರ್ಯಾಯವಾಗಿ ಬಿಎಂಟಿಸಿ ಬಸ್ಗಳ ಉಚಿತ ಸೇವೆ ಕಲ್ಪಿಸಲಾಗಿತ್ತು. ಆದರೂ ನಿಗದಿತ ಸಮಯದಲ್ಲಿ ನಿಗದಿತ ಸ್ಥಳ ತಲುಪಲು ಪರದಾಡುವಂತಾಗಿತ್ತು. ಸಂಚಾರದಟ್ಟಣೆ ಕಿರಿಕಿರಿ ಕೂಡ ಇಲ್ಲಿ ಉಂಟಾಗಿತ್ತು. ಈಗ ಜನ ನಿಟ್ಟುಸಿರುಬಿಟ್ಟಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು