ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ!


Team Udayavani, Nov 18, 2019, 12:42 PM IST

18-November-8

ಸಿರುಗುಪ್ಪ: ತಾಲೂಕಿನ ತಾಳೂರು, ಉತ್ತನೂರು, ಹೆಚ್‌.ಹೊಸಳ್ಳಿ, ಶಾನವಾಸಪುರ, ಕರೂರು, ಭೆ„ರಾಪುರ, ಬಲಕುಂದಿ, ಉಪ್ಪಾರಹೊಸಳ್ಳಿ, ಬಾಗೇವಾಡಿ ಮುಂತಾದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೆಟ್‌ ವರ್ಕ್‌ ಸಮಸ್ಯೆ ತಲೆದೋರಿದ್ದು, ಇದರಿಂದ ಸಾರ್ವಜನಿಕರಿಗೆ ಕಚೇರಿ ಕೆಲಸ ನಿರ್ವಹಿಸಲು ಅಡ್ಡಿಯಾಗಿದೆ.  ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಸರಿಪಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅನೇಕ ವರ್ಷಗಳಿಂದ ಇಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದ ಈ ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಇಲ್ಲಿನ ಕಚೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳಾಗದೇ ಕಚೇರಿಗಳಿಗೆ ಅಲೆಯುತ್ತಿರುವುದು ಸಾಮಾನ್ಯವಾಗಿದೆ. ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬ್ಯಾಂಕ್‌ಗಳು, ಅಂಚೆ ಕಚೇರಿ, ಹಾಲು ಮಾರಾಟಗಾರರ ಸೊಸೈಟಿ, ಶಾಲೆ, ಗ್ರಾಪಂ ಕಚೇರಿಗಳು, ಗ್ರಾಮಲೆಕ್ಕಾಧಿಕಾರಿಗಳ ಕಚೇರಿ, ನಾಡಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯುತ್‌ ಕಡಿತಗೊಂಡರೆ, ಗುಡುಗು ಬಂದರೆ ನೆಟ್‌ವರ್ಕ್‌ ಕಡಿತಗೊಳ್ಳುತ್ತದೆ. ಒಂದೊಂದು ಸಲ ಕರೆಂಟ್‌ ಇದ್ದರೂ ಆಪರೇಟರ್‌ ಇಲ್ಲದೆ ಸಮಸ್ಯೆಯಾಗುತ್ತಿದೆ. ಇದರಿಂದಾಗಿ ಬ್ಯಾಂಕ್‌, ಅಂಚೆಕಚೇರಿ, ಗ್ರಾಪಂ ಕಚೇರಿ, ನಾಡಕಚೇರಿ ಸೇರಿದಂತೆ ವಿವಿಧ ಕಚೇರಿಗಳಲ್ಲಿ ನಡೆಯುವ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ನಡೆಯುತ್ತಿರುತ್ತವೆ.

ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮೊಬೆ„ಲ್‌ ಮೂಲಕ ಮಾತನಾಡುವವರಿಗೆ ನೆಟ್‌ವರ್ಕ್‌ ಸಮಸ್ಯೆ ಅಷ್ಟಾಗಿ ಇರುವುದಿಲ್ಲ. ಆದರೆ ಸರ್ಕಾರಿ ಕಛೇರಿಗಳು, ಬ್ಯಾಂಕ್‌ ಗಳಲ್ಲಿ ಬಿ.ಎಸ್‌.ಎನ್‌.ಎಲ್‌. ನೆಟ್‌ ವರ್ಕ್‌ ಸಂಪರ್ಕವಿದ್ದು, ಈ ನೆಟ್‌ವರ್ಕ್‌ ಸಮಸ್ಯೆಯಿಂದ ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳಿಗಾಗಿ ಕಛೇರಿಗಳಿಗೆ ಪದೇ ಪದೇ ಅಲೆಯುವುದು ಸಾಮಾನ್ಯವಾಗಿದೆ.

ಸರ್ಕಾರಿ ಕಚೇರಿಗಳಿಗೆ, ಬ್ಯಾಂಕ್‌ ಗಳಿಗೆ ನೆಟ್‌ವರ್ಕ್‌ ಸಮಸ್ಯೆಯಿಂದ ಸಾರ್ವಜನಿಕರಿಗೆ ಸಿಗಬೇಕಾದ ಸೇವೆಗಳು ಸಕಾಲಕ್ಕೆ ದೊರೆಯುತ್ತಿಲ್ಲ. ಮಾಡಬೇಕಾದ ಕೆಲಸ ಕಾರ್ಯಗಳನ್ನು ಬಿಟ್ಟು ನೆಟ್‌ವರ್ಕ್‌ ಬಂದಾಗ ಕಚೇರಿಗೆ ಬಂದು ತಮ್ಮ ಕೆಲಸಗಳನ್ನು ಸಾರ್ವಜನಿಕರು ಮಾಡಿಸಿಕೊಳ್ಳಬೇಕಾದ ಸ್ಥಿತಿ ಇದೆ.

ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಪ್ರತಿಯೊಂದು ಕೆಲಸ ಕಾರ್ಯಗಳನ್ನು ಅನ್‌ ಲೈನ್‌ ಮೂಲಕವೇ ಮಾಡಬೇಕಾಗಿದ್ದು, ನೆಟ್‌ವರ್ಕ್‌ ಸಮಸ್ಯೆಯಿಂದ ಇಲ್ಲಿನ ಸಿಬ್ಬಂದಿ ತಪ್ಪಿಸಿಕೊಳ್ಳಲು ಬೇರೆ ನೆಟ್‌ ವರ್ಕ್‌ನ ಡಾಂಗಲ್‌ನ್ನು ಬಳಕೆ ಮಾಡಿಕೊಂಡು ಕಚೇರಿ ಕೆಲಸ ಕಾರ್ಯಗಳನ್ನು ನಿರ್ವಹಿಸುವುದು ಅನಿವಾರ್ಯವಾಗಿದೆ. ಇನ್ನೂ ಬ್ಯಾಂಕ್‌ ಮತ್ತು ಅಂಚೆ ಕಚೇರಿಗಳಲ್ಲಿ ನೆಟ್‌ವರ್ಕ್‌ ಸಮಸ್ಯೆ ಬಂದರೆ ಗ್ರಾಹಕರು ತೊಂದರೆ ಅನುಭವಿಸುವುದು ಸಾಮಾನ್ಯವಾಗಿದೆ. ರಾತ್ರಿವೇಳೆ ಮಾತ್ರ ಬಿಎಸ್‌ಎನ್‌ಎಲ್‌ ನೆಟ್‌ ವರ್ಕ್‌ ಸರಿಯಾಗಿ ಬರುತ್ತಿರುವುದರಿಂದ ಕೆಲವು ಬಾರಿ ಅನಿವಾರ್ಯ ಸಂದರ್ಭದಲ್ಲಿ ರಾತ್ರಿ ವೇಳೆ ನಾವು ಗ್ರಾಪಂ ಕಚೇರಿಯಲ್ಲಿ ಕೆಲಸ ಮಾಡುವಂತಾಗಿದೆ ಎಂದು ತಾಳೂರು ಗ್ರಾಪಂನ ಕಂಪ್ಯೂಟರ್‌ ಆಪರೇಟರ್‌ ಕುಮಾರಗೌಡ ತಿಳಿಸಿದ್ದಾರೆ.

ನಮ್ಮ ಕಚೇರಿಗೆ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಂಪರ್ಕವಿರುವುದರಿಂದ ಪದೇ ಪದೇ ಸಂಪರ್ಕ ಕಡಿತಗೊಳ್ಳುತ್ತದೆ. ಇದರಿಂದಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಖಾಸಗಿ ಕಂಪನಿಯ ಡಾಂಗಲ್‌ ಬಳಸುತ್ತಿದ್ದೇವೆ. ಆದ್ದರಿಂದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ ಪರಿಹರಿಸಲು ಅಧಿ ಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಪಿ.ಬಸವರಾಜ,
ಉಪ್ಪಾರ ಹೊಸಳ್ಳಿ ಗ್ರಾಪಂ ಪಿಡಿಒ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.