ಪುತ್ತೂರಿನಲ್ಲಿ ಒಂದೇ ಕುಟುಂಬದ ಇಬ್ಬರ ಕೊಲೆ: ಮಹಿಳೆ ಗಂಭೀರ
Team Udayavani, Nov 19, 2019, 11:45 AM IST
ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದ್ದು, ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕುರಿಯ ಗ್ರಾಮದ ಅಜಲಾಡಿ ಹೊಸಮಾರಿನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ಮೂವರ ಮೇಲೂ ಕೊಲೆಯತ್ನ ನಡೆದಿದೆ.
ಕುಗ್ಗು ಸಾಹೇಬ್ ( 60 ವ) ಮತ್ತು ಅವರ ಮೊಮ್ಮಗಳು ಸಮೀಹ (16 ವ) ಕೊಲೆಯಾದವರು.
ಕುಗ್ಗು ಸಾಹೇಬ್ ಅವರ ಪತ್ನಿ ಖತೀಜಮ್ಮ ( 55 ವ) ಅವರ ಮೇಲೂ ಮಾರಣಾಂತಿಕ ಹಲ್ಲೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರಿನ ಬಾಡಿಗೆ ಮನೆಯಲ್ಲಿರುವ ಕೊಗ್ಗು ಸಾಹೇಬರ ಪುತ್ರ ರಝಾಕ್ ಅವರು ಮಂಗಳವಾರ ಬೆಳಿಗ್ಗೆ ಮನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಇತರರಿಗೆ ಮಾಹಿತಿ ನೀಡಿದ್ದಾರೆ.
ಮನೆಯಲ್ಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೂವರೇ ವಾಸವಾಗಿದ್ದರು.
ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಸಂಪ್ಯ ಠಾಣಾ ಎಸ್ ಐ ಶಕ್ತಿವೇಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು