ಜಾಗತಿಕ ಸಮಸ್ಯೆಗಳಿಗೆ ಗಾಂಧಿ ಮಾರ್ಗ ಪರಿಹಾರ


Team Udayavani, Nov 19, 2019, 12:13 PM IST

huballi-tdy-2

ಧಾರವಾಡ: ಮಹಾತ್ಮಾ ಗಾಂಧಿಧೀಜಿಯವರ ಸನಾತನ ಸಂಸ್ಕೃತಿಯಲ್ಲಿ ಸುಸ್ಥಿರ ಅಭಿವೃದ್ಧಿಯ ಮಾರ್ಗಗಳಿದ್ದು, ಈ ಗಾಂಧಿ ಮಾರ್ಗದಲ್ಲಿ ಜಾಗತಿಕ ತಾಪಮಾನ ಏರಿಕೆ ಸಮಸ್ಯೆಗೂ ಪರಿಹಾರಗಳಿವೆ. ಅವುಗಳನ್ನು ಮನಪೂರ್ವಕವಾಗಿ ಅನುಷ್ಠಾನ ಮಾಡುವ ಸಂಕಲ್ಪ, ಮನೋಭಾವನೆ ನಮ್ಮೆಲ್ಲರಲ್ಲಿ ಬರಬೇಕಾಗಿದೆ ಎಂದು ಜಲತಜ್ಞ ಡಾ| ರಾಜೇಂದ್ರ ಸಿಂಗ್‌ ಹೇಳಿದರು.

ನಗರದ ಆಲೂರು ಭವನದಲ್ಲಿ ವಾರ್ತಾ ಇಲಾಖೆ ಹಾಗೂ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಸಮಾರೋಪ, 151ನೇ ಜಯಂತಿ ಅಂಗವಾಗಿ “ಗಾಂಧಿ  ಮಾರ್ಗ’ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ನದಿ, ಭೂಮಿಗೆ ನಾವು ತಾಯಿಯ ಸ್ಥಾನ ನೀಡಿದ್ದೇವೆ. ತಾಯಿಗೆ ತೋರುವ ಪ್ರೀತಿ ಗೌರವಗಳ ಜೊತೆಗೆ ನದಿ, ಭೂಮಿ, ನಿಸರ್ಗಗಳಿಗೆ ಚಿಕಿತ್ಸೆಯ ಅಗತ್ಯವೂ ಇದೆ. ನೀರು ಎಂದರೆ ಜೀವನ, ನಿಸರ್ಗ ಎಂದರೆ ಜನನಿ, ಗಾಂಧಿ ಮಾರ್ಗ ಎಂದರೆ ಅದೊಂದು ಪ್ರವಾಹವಾಗಿ ಪಂಚಭೂತಗಳನ್ನು ರಕ್ಷಿಸುವ ಕಾರ್ಯವಾಗಿದೆ. ಗಾಂಧೀಜಿಯವರ ಮಾರ್ಗವು ಜಡವಲ್ಲ. ಅದು ಸದಾಚಲನಶೀಲವಾಗಿ ಹರಿಯುವ ಸಂಸ್ಕೃತಿಯಾಗಿದೆ. ನೀರು, ನಿಸರ್ಗ, ಆರ್ಥಿಕತೆ, ಪ್ರಗತಿ ಸೇರಿದಂತೆ ಎಲ್ಲ ವಿಷಯಗಳಲ್ಲಿಯೂ ಗಾಂಧೀಜಿ ಬೆಳಕು ಚೆಲ್ಲಿದ್ದಾರೆ ಎಂದರು.

ಬಡ ರೈತರು ನಿಜವಾಗಿಯೂ ಗಾಂಧಿ  ಮಾರ್ಗದಲ್ಲಿ ಸಾಗುತ್ತಿದ್ದಾರೆ. ನಿಸರ್ಗವನ್ನು ಅತಿಕ್ರಮಿಸಿ, ಮಾಲಿನ್ಯಗೊಳಿಸಿ ಗ್ರಾಮ, ನಗರಗಳನ್ನು ರೋಗಗ್ರಸ್ತ ಮಾಡುತ್ತಿರುವವರು ಉಳ್ಳವರ ವರ್ಗವೇ ಆಗಿವೆ. ಬಾಪು, ಕಸ್ತೂರಬಾ ಮತ್ತು ಅವರ ಕೋಟ್ಯಂತರ ಅನುಯಾಯಿಗಳು ತಮ್ಮ ಜೀವನದುದ್ದಕ್ಕೂ ನೀರು, ನಿಸರ್ಗಕ್ಕಾಗಿ ಬದುಕು ಸವೆಸಿದ್ದಾರೆ. ಬತ್ತಿ ಹೋದ ನದಿ, ನೀರಿನ ಮೂಲಗಳನ್ನು ಪುನರುಜ್ಜೀವನಗೊಳಿಸಲು ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಪ್ರತಿಯೊಬ್ಬರೂ ನಿಸರ್ಗ ಉಳಿಸಲು ಸಂಕಲ್ಪ ಮಾಡಿ, ಪ್ರಾಯೋಗಿಕವಾಗಿ ಜಾರಿಗೊಳಿಸಬೇಕು. ಇಲ್ಲವಾದರೆ ಮುಂದೊಂದು ದಿನ ನೀರನ್ನೂ ಸಹ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ರೇಷನ್‌ ಕಾರ್ಡಿನ ಮೂಲಕ ಪಡೆಯುವ ಕಾಲ ಬರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ  ನಿರ್ದೇಶಕ ಡಾ| ರಾಜೇಂದ್ರ ಪೋದ್ದಾರ ಮಾತನಾಡಿ, ಅಹಿಂಸಾತ್ಮಕಬದುಕಿನ ಮೂಲಕ ಗಾಂಧಿಧೀಜಿಯವರನ್ನು ಅನುಸರಿಸಿದಾಗ ಮಾತ್ರ ನೀರು, ನಿಸರ್ಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಡಿಸಿ ದೀಪಾ ಚೋಳನ್‌, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಅಮಲಾತಾಯಿ ಕಡಗದ ಮಾತನಾಡಿದರು. ಡಾ|ಅರುಣಾ ಹಳ್ಳಿಕೇರಿ, ಕವಿವಿ ವಿಶ್ರಾಂತ ಕುಲಪತಿ ಡಾ| ಪ್ರಮೋದ ಗಾಯಿ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ಇದ್ದರು. ರೈತರು, ವಿದ್ಯಾರ್ಥಿಗಳು ಹಾಗೂಸಾರ್ವಜನಿಕರು ಜಲ ಪ್ರತಿಜ್ಞೆ ಸ್ವೀಕರಿಸಿದರು.

ಅನಿಲ ಮೇತ್ರಿ ಮತ್ತು ತಂಡ, ಬಾಲಬಳಗದ ಶಾಲಾ ಮಕ್ಕಳು ಗಾಂಧಿ ಭಜನೆಗಳನ್ನು ಪ್ರಸ್ತುತ ಪಡಿಸಿದರು. ಮಹದೇವಗೌಡ ಹುತ್ತನಗೌಡ್ರ ಹಾಗೂ ಆರತಿ ದೇವಶಿಖಾಮಣಿ ನಿರೂಪಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.