ಸತ್ಯಸಾಯಿ ಗ್ರಾಮದಲ್ಲಿ ಐದು ದಿನಗಳ ಜಾಗತಿಕ ಯುವ ಸಮಾವೇಶ
Team Udayavani, Nov 19, 2019, 12:29 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದ ಪ್ರೇಮಾಮೃತ ಸಭಾಂಗಣದಲ್ಲಿ ಮಂಗಳವಾರ ಭಗವಾನ್ ಶ್ರೀ ಸತ್ಯಸಾಯಿ ಬಾಬಾರ 94 ನೇ ಹುಟ್ಟು ಹಬ್ಬದ ಪ್ರಯುಕ್ತ ಸಮಾವೇಶಗೊಂಡಿವ ಐದು ದಿನಗಳ ಜಾಗತಿಕ ಯುವ ಸಮಾವೇಶಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮಿ ಚಾಲನೆ ನೀಡಿದರು.
ಸೇವಕತ್ವದಿಂದ ನಾಯಕತ್ವದಡೆಗೆ ಎಂಬ ಘೋಷಣೆಯಡಿ ಆಯೋಜಿಸಿರುವ ಯುವ ಸಮಾವೇಶದಲ್ಲಿ ಜಗತ್ತಿನ 32 ಕ್ಕೂ ಹೆಚ್ವು ರಾಷ್ಟ್ರಗಳಿಂದ 2000 ಕ್ಕೂ ಅಧಿಕ ಸಂಖ್ಯೆಯಲ್ಲಿ ಯುವಕ, ಯುವತಿಯರು ಪಾಲ್ಗೊಂಡಿದ್ದು ಇಡೀ ಪ್ರೇಮಾಮೃತಮ್ ಸಭಾಂಗಣದಲ್ಲಿ ಸಾಯಿಬಾಬಾ ಭಕ್ತರು ಕಿಕ್ಕಿರಿದು ತುಂಬಿದ್ದಾರೆ.
ಭಾವೈಕ್ಯ ಮೆರೆದ ಸಮ್ಮೇಳನ
ಸತ್ಯಸಾಯಿ ಗ್ರಾಮದಲ್ಲಿ ಆರಂಭಗೊಂಡಿರುವ ಜಾಗತಿಕ ಯುವ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ರಾಷ್ಟ್ರಗಳ ಶ್ವೇತಪಾತಕೆಗಳನ್ನು ಹಿಡಿದು ಸಾಯಿ ಭಕ್ತರು ಮೆರವಣಿಗೆ ನಡೆಸಿ ಭಾವೈಕ್ಯತೆ ಮೆರೆದರು. ಆರಂಭದಲ್ಲಿ ಸರ್ವಧರ್ಮಗಳ ಪ್ರಾರ್ಥನೆ ಸಲ್ಲಿಸಲಾಯಿತು.
ಅಮೇರಿಕಾ ಆಸ್ಟ್ರೇಲಿಯಾ, ಜಪಾನ್, ಸಿಂಗಪುರ್, ನೇಪಾಳ್ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಸಾಯಿ ಭಕ್ತರು ಭಾಗವಹಿಸಿದ್ದಾರೆ. ವಿದೇಶಿ ಮಹಿಳೆಯರು ದೇಶದ ಉಡುಗೆಗಳನ್ನು ತೊಟ್ಟು ಗಮನ ಸೆಳೆದರು.
ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವನ್ನು ಸದ್ಗುರು ಶ್ರೀ ಸಾಯಿ ಮಧುಸೂದನ್ ವಹಿಸಿದ್ದು, ವೇದಿಕೆಯಲ್ಲಿ ಬನರಾಸದ ಹಿಂದೂ ವಿಶ್ವವಿದ್ಯಾಲಯ ರಾಕೇಶ್ ಉಪಾಧ್ಯಾಯ, ಅಮೇರಿಕಾ ಖ್ಯಾತ ಉದ್ಯಮಿ ಐಸಾಕ್, ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಾಧಿಪತಿ ಬಿ.ಎನ್. ನರಸಿಂಹಮೂರ್ತಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಸಾಯಿ ಬಾಬಾ ಭಕ್ತರು ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
MUST WATCH
ಹೊಸ ಸೇರ್ಪಡೆ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ