ಕುಡಿದ ಮತ್ತಿನಲ್ಲಿ ಸಹೋದರಿ, ತಾಯಿ ಮೇಲೆ ಅತ್ಯಾಚಾರ ಎಸಗುತ್ತಿದ್ದ ಪುತ್ರನ ಹತ್ಯೆ
Team Udayavani, Nov 19, 2019, 2:07 PM IST
ಮಧ್ಯಪ್ರದೇಶ:ಕುಡಿದ ಮತ್ತಿನಲ್ಲಿ ತಾಯಿ, ಸಹೋದರಿ ಹಾಗೂ ತಮ್ಮನ ಪತ್ನಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಮಗನನ್ನು ಪೋಷಕರೇ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ಡಾಟಿಯಾ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ದಿನಂಪ್ರತಿ ಕಂಠಪೂರ್ತಿ ಕುಡಿದು ಬರುತ್ತಿದ್ದ ಮಗ ತಾಯಿ, ತಂಗಿ ಎನ್ನದೇ ಅತ್ಯಾಚಾರ ಎಸಗುತ್ತಿದ್ದ. ನವೆಂಬರ್ 11ರಂದು ರಾತ್ರಿ ಕುಡಿದು ಬಂದಿದ್ದ ಮಗ ತನ್ನ ಕಿರಿಯ ಸಹೋದರನ ಪತ್ನಿಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದ. ಈ ಸಂದರ್ಭದಲ್ಲಿ ಆತನ ಉಸಿರುಗಟ್ಟಿಸಿ ಸಾಯಿಸಿರುವುದಾಗಿ ತಂದೆ ಪೊಲೀಸರ ತನಿಖೆಯಲ್ಲಿ ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ.
ಈ ಹಿಂದೆ ಹಲವು ಬಾರಿ ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿದ್ದ, ಈ ಬಾರಿ ಆತನನ್ನು ಕೊಂದು ಶವವನ್ನು ಗೋಪಾಲ್ ದಾಸ್ ಗುಡ್ಡದ ಸಮೀಪ ಎಸೆದಿರುವುದಾಗಿ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ನವೆಂಬರ್ 12ರಂದು 24ರ ಹರೆಯದ ಪುತ್ರನ ಬಗ್ಗೆ ಪೊಲೀಸರು ವಿಚಾರಿಸಿದಾಗ ಈ ವಿಷಯ ಬೆಳಕಿಗೆ ಬಂದಿರುವುದಾಗಿ ಡಾಟಿಯಾ ಸಬ್ ಡಿವಿಶನಲ್ ಆಫ್ ಪೊಲೀಸ್ ಗೀತಾ ಭಾರದ್ವಾಜ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಆತನ ಪತ್ನಿ, ಕಿರಿಯ ಸಹೋದರ, ಕಿರಿಯ ಸಹೋದರನ ಪತ್ನಿ ಸೇರಿ ನಾಲ್ವರನ್ನು ಬಂಧಿಸಿದ್ದು, ಸೋಮವಾರ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ