370ನೇ ವಿಧಿ ರದ್ದುಗೊಂಡ 3 ತಿಂಗಳ ಬಳಿಕ ಕಾಶ್ಮೀರದಲ್ಲಿ ವ್ಯಾಪಾರ-ವಹಿವಾಟು ಆರಂಭ
Team Udayavani, Nov 19, 2019, 3:35 PM IST
ಶ್ರೀನಗರ್: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಆಗಸ್ಟ್ 5ರಂದು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ ಕಾಶ್ಮೀರದಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವಹಿವಾಟು ಆರಂಭಿಸಿದೆ ಎಂದು ವರದಿ ತಿಳಿಸಿದೆ.
370ನೇ ವಿಧಿ ರದ್ದುಪಡಿಸಿದ ನಂತರ ಆಗಸ್ಟ್ 5ರಿಂದ ಕಾಶ್ಮೀರದಲ್ಲಿ ಅಂಗಡಿಗಳು ಕೇವಲ ಬೆಳಗ್ಗೆ ಮತ್ತು ಸಾಯಂಕಾಲ ಕೆಲ ಗಂಟೆಗಳ ಕಾಲ ತೆರೆಯಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಕಳೆದ ಮೂರು ತಿಂಗಳ ಬಳಿಕ ಇದೀಗ ಮೊದಲ ಬಾರಿಗೆ ಹಗಲು ಹೊತ್ತಿನಲ್ಲಿ ಅಂಗಡಿ ತೆರೆದಿರುವುದಾಗಿ ಮಾಲೀಕರು ತಿಳಿಸಿದ್ದಾರೆ.
ಇದರಿಂದಾಗಿ ಕಳೆದ ಕೆಲವು ತಿಂಗಳಿನಿಂದ ಅನುಭವಿಸಿದ್ದ ನಷ್ಟವನ್ನು ಸರಿದೂಗಿಸಿಕೊಳ್ಳಬೇಕಾಗಿದೆ ಎಂದು ಶ್ರೀನಗರ್ ನೌಪೋರಾದ ಅಂಗಡಿ ಮಾಲೀಕ ಮುಝಾಫರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.
ಇಂಟರ್ನೆಟ್ ಸ್ಥಗಿತದಿಂದ ನಾವು ಹಿಂದಕ್ಕೆ ತಳ್ಳಲ್ಪಟ್ಟಿದ್ದೇವೆ ಎಂದು ಜಮ್ಮು ಕಾಶ್ಮೀರ್ ಪ್ಯಾಂಥರ್ಸ್ ಪಾರ್ಟಿ ಮುಖಂಡ ದೇವ್ ಸಿಂಗ್ ಐಎಎನ್ ಎಸ್ ಗೆ ತಿಳಿಸಿದ್ದಾರೆ. ಶ್ರೀನಗರ್ ಹಾಗೂ ದಕ್ಷಿಣ ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಸಾರಿಗೆ ಸಂಚಾರ ಇನ್ನೂ ಆರಂಭಗೊಂಡಿಲ್ಲ.
ಏತನ್ಮಧ್ಯೆ ಕಳೆದ ವಾರ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಶಾಲೆಗಳನ್ನು ತೆರೆಯಲು ಆದೇಶ ನೀಡಿತ್ತು. ಆದರೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದ ಪರಿಣಾಮ ಅದು ಕಾರ್ಯಗತವಾಗಿರಲಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್