ಎಂಎಸ್‌ಎಂಇಗಳಿಗೆ ಉತ್ತೇಜನ: ಟೌನ್‌ಹಾಲ್‌ ಸಭೆ

ಆರ್‌ಬಿಐ-ಸಿಂಡ್‌ ಬ್ಯಾಂಕ್‌ ಆಯೋಜನೆ

Team Udayavani, Nov 20, 2019, 4:19 AM IST

hh-22

ಉಡುಪಿ: ಬೆಂಗಳೂರಿನ ಆರ್‌ಬಿಐಯ ವಿತ್ತೀಯ ಸೇರ್ಪಡೆ ಮತ್ತು ಅಭಿವೃದ್ಧಿ ಇಲಾಖೆಯು ಸಿಂಡಿಕೇಟ್‌ ಬ್ಯಾಂಕ್‌ನ ಉಡುಪಿ ಜಿಲ್ಲಾ ಲೀಡ್‌ ಬ್ಯಾಂಕ್‌ ಕಚೇರಿಯ ಸಹಯೋಗದಲ್ಲಿ ಮಂಗಳವಾರ ಓಶಿಯನ್‌ ಪರ್ಲ್ ಹೊಟೇಲ್‌ ಸಭಾಂಗಣದಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಶೀಲರಿಗಾಗಿ (ಎಂಎಸ್‌ಎಂಇ) ಆಯೋಜಿಸಿದ ಟೌನ್‌ಹಾಲ್‌ ಸಭೆಯಲ್ಲಿ ಸುಮಾರು 150 ಉದ್ಯಮಶೀಲರು ಮತ್ತು ಜಿಲ್ಲೆಯ ಎಲ್ಲ ಬ್ಯಾಂಕುಗಳ ಪ್ರತಿನಿಧಿಗಳು ಪಾಲ್ಗೊಂಡರು. ಬ್ಯಾಂಕ್‌ನಲ್ಲಿ ಲಭ್ಯವಿರುವ ಸೌಲಭ್ಯ ಗಳನ್ನು ಸಣ್ಣ ಮತ್ತು ಅತಿ ಸಣ್ಣ ಉದ್ಯಮಶೀಲರಿಗೆ ತಲುಪಿಸುವುದು, ಭಾಗೀದಾರರ ಪರಸ್ಪರ ಸಂವಹನ, ಎಂಎಸ್‌ಎಂಇಗೆ ಸಾಲದ ಸಂಪರ್ಕ ಸಭೆಯ ಉದ್ದೇಶವಾಗಿತ್ತು.

ಆರ್‌ಬಿಐ ವಿತ್ತೀಯ ಸೇರ್ಪಡೆ ವಿಭಾಗದ ಮಹಾಪ್ರಬಂಧಕ ಸಂಜೀವ ಸಿಂಗ್‌ ಮಾತನಾಡಿ, ಸರಕಾರ ಮತ್ತು ಆರ್‌ಬಿಐಗಳು ಎಂಎಸ್‌ಎಂಇಗಳಿಗೆ ಪ್ರಾಶಸ್ತ್ಯ ನೀಡುತ್ತಿದ್ದು, ಎಂಎಸ್‌ಎಂಇ ಎದುರಿಸುತ್ತಿರುವ ನಗದು ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ ಎಂದರು. ಸಣ್ಣ ಮತ್ತು ಅತಿ ಸಣ್ಣ ಉದ್ಯಮಶೀಲರು, ಕರಕುಶಲ ಉದ್ಯಮಿಗಳು, ಗ್ರಾಮೀಣ ಕೈಗಾರಿಕೆಗಳತ್ತ ಬ್ಯಾಂಕ್‌ಗಳು ಗಮನ ಕೇಂದ್ರೀಕರಿಸಬೇಕು ಎಂದು ಜಿ.ಪಂ. ಸಿಇಒ ಪ್ರೀತಿ ಗೆಹೊಲೊಟ್‌ ಕರೆ ನೀಡಿದರು.

1920ರಲ್ಲಿಯೇ ಸಿಂಡಿಕೇಟ್‌ ಬ್ಯಾಂಕ್‌ ನೇಕಾರರಿಗೆ ಸಾಲ ಸೌಲಭ್ಯ ನೀಡಲು ಯೋಜನೆಗಳನ್ನು ರೂಪಿಸಿತ್ತು. ಬ್ಯಾಂಕಿನ ಉದ್ದೇಶವೇ ಸಣ್ಣ ಮತ್ತು ಅತಿ ಸಣ್ಣ ಉದ್ಯಮಶೀಲರಿಗೆ ನೆರವಾಗುವುದು. ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳು ದೇಶದ ಆರ್ಥಿಕತೆಗೆ ಬಹಳಷ್ಟು ಕೊಡುಗೆ ನೀಡುತ್ತಿವೆ. ಶೇ.90 ಎಂಎಸ್‌ಎಂಇಗಳು ಅತಿ ಸಣ್ಣ ಘಟಕಗಳಾಗಿವೆ. ಆರು ಕೋಟಿ ಎಂಎಸ್‌ಎಂಇಗಳು 11 ಕೋಟಿ ಜನರಿಗೆ ಉದ್ಯೋಗಾವಕಾಶ ನೀಡಿವೆ. ಎಂಎಸ್‌ಎಂಇಗಳು 45 ಲ.ಕೋ. ರೂ. ಸಾಲ ನೀಡಬೇಕಾಗಿದ್ದು, ಇದು ಆಗಿರಲಿಲ್ಲ. ಇದನ್ನು ಆಗಗೊಳಿಸುವುದೇ ಬ್ಯಾಂಕ್‌ಗಳ ಮುಖ್ಯ ಕರ್ತವ್ಯ. ಬ್ಯಾಂಕುಗಳಿಂದ ಸಾಕಷ್ಟು ಕಾರ್ಯಕ್ರಮಗಳು ಇದಕ್ಕಾಗಿಯೇ ಇವೆ ಎಂದು ಸಿಂಡಿಕೇಟ್‌ ಬ್ಯಾಂಕ್‌ ವಲಯ ಪ್ರಬಂಧಕ ಭಾಸ್ಕರ ಹಂದೆ ಹೇಳಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿಯವರು ವಿವಿಧ ಯೋಜನೆಗಳನ್ನು ವಿವರಿಸಿದರು. ಉಡುಪಿ ಚೇಂಬರ್‌ ಆಫ್ ಕಾಮರ್ಸ್‌ ಅಧ್ಯಕ್ಷ ಶ್ರೀಕೃಷ್ಣ ರಾವ್‌ ಕೊಡಂಚ ಸಲಹೆಗಳನ್ನು ನೀಡಿದರು. ಸಿಂಡ್‌ಆರ್‌ಸೆಟಿಯಿಂದ ನೀಡಿದ ವಿವಿಧ ತರಬೇತಿಗಳ ಕುರಿತು ನಿರ್ದೇಶಕ ಮಂಜುನಾಥ ನಾಯಕ್‌ ವಿವರಿಸಿದರು. ಲೀಡ್‌ ಬ್ಯಾಂಕ್‌ ಮುಖ್ಯ ಪ್ರಬಂಧಕ ರುದ್ರೇಶ್‌ ಡಿ.ಸಿ. ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.