ಕಮಲ್ – ರಜನಿ ಜುಗಲ್ಬಂದಿ?
Team Udayavani, Nov 20, 2019, 6:47 AM IST
ಚೆನ್ನೈ: 2021ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸೂಪರ್ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಕೈಜೋಡಿಸಿಕೊಂಡೇ ಅಖಾಡಕ್ಕಿಳಿಯಲಿದ್ದಾರೆಯೇ?
ರಜನಿ ಆಡಿರುವ ಮಾತುಗಳು ಇಂಥದ್ದೊಂದು ಅನುಮಾನ ಮೂಡಿಸಿದೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯ ಪಕ್ಷ ಸ್ಥಾಪಿಸುವ ಘೋಷಣೆ ಮಾಡಿರುವ ರಜನಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ‘ತಮಿಳುನಾಡಿನ ಜನರ ಕ್ಷೇಮಾಭಿವೃದ್ಧಿಗಾಗಿ ನಾನು ಮತ್ತು ಕಮಲ್ ಹಾಸನ್ ಕೈಜೋಡಿಸಬೇಕಾದ ಪರಿಸ್ಥಿತಿ ಉದ್ಭವಿಸಿದ್ದೇ ಆದಲ್ಲಿ ಅದಕ್ಕೆ ನಾನು ಸಿದ್ಧನಿದ್ದೇನೆ’ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಕಮಲ್ ಕೂಡ ಇಂಥದ್ದೇ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದರು.
ಇನ್ನೊಂದೆಡೆ, ತಮಿಳುನಾಡಿನಲ್ಲಿ ಪಳನಿ ಸ್ವಾಮಿ ಸಿಎಂ ಆಗಿದ್ದೇ ಪವಾಡ ಎಂದು ಛೇಡಿಸಿದ್ದ ಸೂಪರ್ಸ್ಟಾರ್ ರಜನಿಕಾಂತ್ಗೆ ಎಐಎಡಿಎಂಕೆ ಪಕ್ಷ ತಿರುಗೇಟು ನೀಡಿದೆ. ತನ್ನ ಮುಖವಾಣಿ ‘ನಮದು ಅಮ್ಮ’ ನಿಯತಕಾಲಿಕೆಯಲ್ಲಿ ತಿರುಗೇಟು ನೀಡಿರುವ ಎಐಎಡಿಎಂಕೆ, ‘ಬಸ್ ಕಂಡಕ್ಟರ್ ಆಗಿದ್ದ ನೀವೂ (ರಜನಿ) ಸೂಪರ್ಸ್ಟಾರ್ ಆಗುತ್ತೀರಿ ಎಂದು ಭಾವಿಸಿರಲಿಲ್ಲ’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!