ಮರ ತೆರವು ಪ್ರಕ್ರಿಯೆಗೆ ಹೊಸ ತಂತ್ರಾಂಶ


Team Udayavani, Nov 20, 2019, 10:34 AM IST

BNG-TDY-2

ಸಾಂಧರ್ಬಿಕ ಚಿತ್ರ

ಬೆಂಗಳೂರು: ವಾಣಿಜ್ಯೋದ್ದೇಶಕ್ಕಾಗಿ ಖಾಸಗಿ ಜಮೀನಿನಲ್ಲಿ ಬೆಳೆಸಿದ ಮರಗಳ ತೆರವು ಹಾಗೂ ಸಾಗಣೆ ಅನುಮತಿಗಾಗಿ ಅರಣ್ಯ ಇಲಾಖೆ ಕಚೇರಿಗೆ ಇನ್ನು ಅಲೆದಾಡಬೇಕಿಲ್ಲ. ಇದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳೇ ನಿಮ್ಮ ಬಳಿ ಬರಲಿದ್ದಾರೆ.

ಇದಕ್ಕಾಗಿ ನೀವು ಮಾಡಬೇಕಾಗಿರುವುದಿಷ್ಟೇ – ಮರದ ಚಿತ್ರವನ್ನು ಕ್ಲಿಕ್ಕಿಸಿ, ಅದಕ್ಕೆ ಪೂರಕ ದಾಖಲೆಗಳೊಂದಿಗೆ ಆನ್‌ ಲೈನ್‌ ಮೂಲಕ ಮನವಿ ಸಲ್ಲಿಸಿದರೆ ಸಾಕು. ಇಂತಹದೊಂದು ನೂತನ ತಂತ್ರಾಂಶ “ಈ ಫೆಲ್ಲಿಂಗ್‌ ಅಂಡ್‌ ಟ್ರಾನ್ಸಿ ಟ್‌ ಪರ್ಮಿಷನ್‌’ ಅನ್ನು ಅರಣ್ಯ ಇಲಾಖೆಯ ಮಾಹಿತಿ ತಂತ್ರಜ್ಞಾನ ಘಟಕವು ಸಿದ್ಧಪಡಿಸಿದೆ. ಈ ನೂತನ ತಂತ್ರಾಂಶವನ್ನು ಟೆಕ್‌ ಸಮ್ಮಿಟ್‌ ನಲ್ಲಿ ಸಾಧರ ಪಡಿಸಿದ್ದು, ಶೀಘ್ರದಲ್ಲಿಯೇ ಜಾರಿಗೆ ತರಲಿದೆ.

ಅನುಮತಿ ಪ್ರಕ್ರಿಯೆ ಸುಲಭ: ಯಾರೇ ಆಗಲಿ ಖಾಸಗಿ ಜಮೀನಿನಲ್ಲಿ ಬೆಳೆಸಿರುವ ಒಂದು ಮರವನ್ನು ಕಡಿಯಬೇಕಾದರೂ ಹಾಗೂ ಸಾಗಣೆ ಮಾಡಬೇಕಾದರೂ ಅರಣ್ಯ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂಬ ನಿಯಮವಿದೆ. ಆದರೆ, ಅನುಮತಿ ಪ್ರಕ್ರಿಯೆ ಸಾಕಷ್ಟು ತಡವಾಗುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಆದ್ಯತೆ ನೀಡುತ್ತದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಹೀಗಾಗಿ, ಅನುಮತಿ ಪ್ರಕ್ರಿಯೆಯನ್ನು ಸ್ಪತ್ಛ ಹಾಗೂ ಸುಲಭವಾಗಿಸಲು ತಂತ್ರಜ್ಞಾನ ಬಳಸಲು ಅರಣ್ಯ ಇಲಾಖೆ ಮುಂದಾಗಿದೆ. ಸಾಗಣೆ ಸಂದರ್ಭದಲ್ಲಿ ತಂತ್ರಾಂಶ ಮೂಲಕ ಎಲ್ಲಿಂದ- ಎಲ್ಲಿಗೆ, ಯಾವ ಮರ ಯಾರು ಎಲ್ಲಿ ತೆರವು ಮಾಡಿದ್ದು, ಎಂಬೆಲ್ಲಾ ಮಾಹಿತಿ ನೀಡಿ ಒಪ್ಪಿಗೆ ಪಡೆಯಬೇಕು. ಈ ಮೂಲಕ ಮೂಲಕ ಮರಗಳ ಕಳ್ಳತನ, ಅಕ್ರಮ ಸಾಗಾಟ, ತೆರವು ಹತೋಟಿಗೆ ಬರಲಿದೆ. ಜತೆಗೆ ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ ಎಂದು ಆರ್‌ಎಫ್ ಅಕ್ಷತಾ ತಿಳಿಸಿದರು.

ತಂತ್ರಾಂಶ ಕಾರ್ಯನಿರ್ವಹಣೆ ಹೇಗೆ?: ಮುಂದಿನ ದಿನಗಳಲ್ಲಿ ಇ-ಫೆಲ್ಲಿಂಗ್‌ ಅಂಡ್‌ ಟ್ರಾನ್ಸಿಟ್‌ ಪರ್ಮಿಷನ್‌ ತಂತ್ರಾಂಶದ ಲಿಂಕ್‌ ಅನ್ನು ಅರಣ್ಯ ಇಲಾಖೆ ವೆಬ್‌ಸೈಟ್‌ನಲ್ಲಿ ನೀಡಲಾಗುತ್ತದೆ. ಈ ತಂತ್ರಾಂಶಕ್ಕೆ ಭೇಟಿ ನೀಡಿದರೆ ಅಲ್ಲಿ ಮೊದಲು ಕಡಿಯಲು ಉದ್ದೇಶಿಸಿರುವ ಮರದ ವಿಧವನ್ನು ಆಯ್ಕೆ ಮಾಡಬೇಕು. ನಂತರ ಮರದ ಛಾಯಾಚಿತ್ರ, ಸ್ಥಳ, ಭೂಮಿಯ ದಾಖಲೆ ಪತ್ರ ಸೇರಿದಂತೆ ಇತರೆ ಮಾಹಿತಿ ದಾಖಲಿಸಬೇಕು. ಜತೆಗೆ ಯಾಕೆ ಮರವನ್ನು ಕಡಿಯಲು ಬಯಸುತ್ತೀರಾ ಎಂದು ವಿವರ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಇನ್ನು ತೆರವುಗೊಳಿಸುತ್ತಿರುವ ಪ್ರದೇಶದಲ್ಲಿ ಮರ ತೆರವಿಗೆ ಅನುಮತಿ ನೀಡದಿಲ್ಲಲ್ಲಿ ಅಥವಾ ಮರವು ಅತ್ಯಂತ ಸೂಕ್ಷ್ಮವಾಗಿದ್ದಲ್ಲಿ ಆಯ್ಕೆ ಮಾಡುವ ಸಮಯದಲ್ಲಿಯೇ ತೆರವು ಸಾಧ್ಯವಿಲ್ಲ ಎಂದು ತಂತ್ರಾಂಶವು ತೋರಿಸಲಿದೆ. ಅರ್ಜಿ ಸಲ್ಲಿಸಿದ ಕೂಡಲೇ ತಮ್ಮ ಮರ ಅಧಿಕಾರಿ ಯಾರು ಎಂಬುದನ್ನು ಆ ತಂತ್ರಾಂಶ ತೋರಿಸುತ್ತದೆ. ಜತೆಗೆ ಅರ್ಜಿ ಸಂಖ್ಯೆಯನ್ನು ನೀಡಲಿದೆ. ಈ ಅರ್ಜಿ ಸಂಖ್ಯೆಯನ್ನಿಟ್ಟುಕೊಂಡು ರೈತರು ಅಥವಾ ಜಮೀನು ಮಾಲೀಕರು ಆರ್‌ಎಫ್ಒ ಬಳಿ ಹೋಗಿ, ಮೂಲ ದಾಖಲೆಗಳನ್ನು ಪ್ರಸ್ತುತಪಡಿಸಿದರೆ, ಅಧಿಕಾರಿಗಳು ಜಮೀನುಗಳಿಗೆ ತೆರಳಿ ಪರಿಶೀಲನೆ ನಡೆಸಿ ಆನಂತರ ವಲಯ ಅರಣ್ಯಾಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ. ಆ ಬಳಿಕ ವಲಯ ಅರಣ್ಯಾಧಿಕಾರಿ ಸಮಾಧಾನ ಎನಿಸಿದರೆ ಮರ ಕಡಿಯಲು ಅನುಮತಿಯನ್ನು ಅನುಮೋದಿಸುತ್ತಾರೆ. ಅನುಮಾನ ವ್ಯಕ್ತವಾದರೆ ಸ್ಥಳ ಪರಿಶೀಲನೆ ನಡೆಸುತ್ತಾರೆ.

 

-ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

MOdi (3)

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

jairam ramesh

By-election ಮೂಲಕವೂ ಪ್ರಿಯಾಂಕಾ ಸಂಸತ್‌ ಪ್ರವೇಶ: ಜೈರಾಮ್‌ ರಮೇಶ್‌

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

hemanth-soren

E.D. ಬಂಧನ ಪ್ರಶ್ನಿಸಿದ್ದ ಸೊರೇನ್‌ ಅರ್ಜಿ ತಿರಸ್ಕಾರ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.