ಗುಜರಿ ಸೇರುತ್ತಿವೆಯೇ ಪಪಂ ಯಂತ್ರೋಪಕರಣ?
Team Udayavani, Nov 20, 2019, 1:26 PM IST
ನರೇಗಲ್ಲ: ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ಅನುದಾನದಿಂದ ಖರೀದಿಸುವ ಯಂತ್ರಗಳು ಸಂರಕ್ಷಿಸದಿದ್ದರೆ ಹೇಗೆ ಹಾಳಾಗಿ ಹೋಗುತ್ತಿವೆ ಎನ್ನುವುದಕ್ಕೆ ನರೇಗಲ್ಲ ಪಟ್ಟಣ ಪಂಚಾಯಿತಿಯಲ್ಲಿರುವ ವಾಹನ ಹಾಗೂ ಇತರೆ ಸಾಮಗ್ರಿಗಳೇ ಸಾಕ್ಷಿ. ಕೇಂದ್ರ-ರಾಜ್ಯ ಸರ್ಕಾರದ ಅನುದಾನದಲ್ಲಿ ಪಟ್ಟಣದ ಅಭಿವೃದ್ಧಿಗಾಗಿ ಖರೀದಿ ಮಾಡಿರುವ ಯಂತ್ರೋಕರಣ-ವಾಹನಗಳು ಬಿರುಬಿಸಿಲು- ಮಳೆ-ಚಳಿಗೆ ಪಳಿಯುಳಿಕೆಯಂತಾಗಿವೆ.
ಪ.ಪಂ ಅಭಿವೃದ್ಧಿಗೆ ಬಳಸುತ್ತಿದ್ದ ವಾಹನ, ಯಂತ್ರೋಪಕರಣಗಳು ಮೂಲೆಗುಂಪಾಗಿ ಬಿದ್ದಿವೆ. ವಿಲೇವಾರಿ ಆಗಿಲ್ಲ. ಒಂದೆಡೆ ಪುನರ್ಬಳಕೆ ಮಾಡಿಲ್ಲ.ಮತ್ತೂಂದೆಡೆ ಹರಾಜು ಮೂಲಕ ಗುಜರಿಗೆ ಹಾಕುವ ಗೋಜಿಗೂ ಹೋಗಿಲ್ಲ. ಇದರಿಂದ ಕೆಲವೊಂದು ವಸ್ತುಗಳು ಕಳುವಾದ ನಿರ್ದರ್ಶನಗಳಿವೆ. ಈ ಪೈಕಿ ಜೆಸಿಬಿ, ಕಸ ವಿಲೇವಾರಿ ಕಂಟೇನರ್, ಟ್ರಾಕ್ಟರ್, ನೀರು ಸರಬರಾಜಿನ ಸಾಧನಗಳು ಸೇರಿದಂತೆ ಹಲವು ಸಲಕರಣೆಗಳು ವಿವಿಧೆಡೆ ತುಕ್ಕು ಹಿಡಿದು ಬಳಕೆಗೆ ಬಾರದೇ ದುಸ್ಥಿತಿಯಲ್ಲಿರುವುದು ಕಂಡುಬರುತ್ತಿವೆ. ಇವು ಪ.ಪಂ ಆವರಣದಲ್ಲಿ ಎಲ್ಲೆಂದರಲ್ಲಿ ಬಿದ್ದು ಹಾಳಾಗಿ ಹೋಗುತ್ತಿವೆ.
ಅಧಿಕಾರಿಗಳ ನಿರ್ಲಕ್ಷ್ಯ: ಸ್ಥಳೀಯ ಪಪಂ ಪಟ್ಟಣ ಪಂಚಾಯಿತಿಯಲ್ಲಿ ಬಳಕೆಗೆ ಇರಬೇಕಾದ ಯಂತ್ರೋಪಕರಣಗಳು ಕೆಟ್ಟು ನಿಂತು ವರ್ಷಗಳೇ ಕಳೆದರೂ ದುರಸ್ತಿಯತ್ತ ಅಧಿಕಾರಿಗಳು ಮಖ ಮಾಡುತ್ತಿಲ್ಲ. ಲಕ್ಷಾಂತರ ರೂ. ಬೆಲೆಬಾಳುವ ಜೆಸಿಬಿ, ಟ್ರಾಕ್ಟರ್, ಕಸದ ವಾಹನ, ಸೇರಿದಂತೆ ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದ ವಸ್ತುಗಳು ಇಂದು ನಿಷ್ಕ್ರಿಯವಾಗಿ ನಿಂತಿವೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಪಪಂ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಗೊಳ್ಳುತ್ತಿದ್ದರೂ ಅ ಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕೊಳ್ಳಿತ್ತುಕೊಂಡಿರುವುದು ನೋವಿನ ಸಂಗತಿ. ವಾಹನಗಳು ಗುಣಮಟ್ಟದಿಂದಲೇ ಇರುವಾಗ ಸಂರಕ್ಷಿಸಿಕೊಳ್ಳಬೇಕು. ಸರಕಾರದ ಬೊಕ್ಕಸಕ್ಕೆ ಹಾನಿ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. –ಕುಮಾರಸ್ವಾಮಿ ಕೋರಧ್ಯಾಮಠ, ಪಪಂ ಸದಸ್ಯ
-ಸಿಕಂದರ ಎಂ. ಆರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ