ಶೌಚಗೃಹ ಬಳಕೆಗೆ ಹೂ ನೀಡಿ ಜಾಗೃತಿ


Team Udayavani, Nov 20, 2019, 4:31 PM IST

mysuru-tdy-1

ಮೈಸೂರು: ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಕೆಎಂಪಿಕೆ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಸಾರ್ವಜನಿಕರಿಗೆ ಶೌಚಾಲಯ ಬಳಸಿ, ಪರಿಸರ ಸಂರಕ್ಷಿಸಿ ಎಂದು ಗುಲಾಬಿ ಹೂ ನೀಡಿ ವಿನೂತನವಾಗಿ ಅರಿವು ಮೂಡಿಸಲಾಯಿತು.

ಮಂಗಳವಾರ ನಗರದ ಸಿಟಿ ಬಸ್‌ ನಿಲ್ದಾಣದ ಶೌಚಾಲಯದ ಮುಂಭಾಗ ಅರಿವು ಮೂಡಿಸುವ ಫ‌ಲಕಗಳನ್ನು ಪ್ರದರ್ಶಿಸಿ ಅರಿವು ಮೂಡಿಸಿದರು. ಈ ವೇಳೆ ಮಾತ ನಾಡಿದ ಹಿರಿಯ ಸಮಾಜ ಸೇವಕ ಕೆ. ರಘುರಾಂ ವಾಜಪೇಯಿ, ಮೈಸೂರು ಸ್ವಚ್ಛ ನಗರಿ ಎಂದು ಈಗಾಗಲೇ ಖ್ಯಾತಿ ಪಡೆದಿದೆ. ನಗರಪಾಲಿಕೆ ವತಿಯಿಂದ ಸಾರ್ವಜನಿಕ ಶೌಚಾಲಯ ನಿರ್ಮಿಸಿದರೂ ಕೂಡ ಎಲ್ಲ ನಾಗರಿಕರು ಬಯಲಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ.  ಇದನ್ನು ಮನಗಂಡು ಕೆಎಂಪಿಕೆ ಚಾರಿಟಬಲ್‌ ಟ್ರಸ್ಟ್‌ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಕಾರ್ಯ. ನಗರಪಾಲಿಕೆ ಹೆಚ್ಚು ಹೆಚ್ಚು ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲಿ ಎಂದು ಮನವಿ ಮಾಡಿದರು.

ದುಬಾರಿ ದಂಡ ವಿಧಿಸಿ: ಗೂಗಲ್‌ ಮ್ಯಾಪ್‌ ನಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಸೇರಿಸಬೇಕು ಮಾಡಬೇಕು. ಬೇಡದೆ ಇರುವ ಫ‌ಲಕಗಳನ್ನು ಹಾಕುವ ಬದಲು ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ದಾರಿಗಳ ಫ‌ಲಕಗಳನ್ನು ಹಾಕುವುದು ಮುಖ್ಯ. ಸ್ವಚ್ಛತೆ ಕಾಪಾಡಬೇಕು ಇಷ್ಟೆಲ್ಲಾ ಮಾಡಿದ ಮೇಲೆಯೂ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಿದರೆ ಅವರಿಗೆ ಐದು ಸಾವಿರ ದಂಡ ಹಾಗೂ ಒಂದು ದಿನ ಶೌಚಾಲಯ ಕ್ಲೀನ್‌ ಮಾಡುವ ಕೆಲಸ ನೀಡಬೇಕು ಎಂದು ಹೇಳಿದರು.

ಮಲಮೂತ್ರದಿಂದ ಗೊಬ್ಬರ: ಕೆಎಂಪಿಕೆ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ವಿಕ್ರಮ್‌ ಅಯ್ಯಂಗಾರ್‌ ಮಾತನಾಡಿ, ಮಾನವ ತ್ಯಾಜ್ಯವನ್ನು ಗೊಬ್ಬರವಾಗಿ ಬಳಸಿದರೆ ಸ್ವಚ್ಛ ಪರಿಸರ ಹೊಂದುವುದು ಸಾಧ್ಯವಾಗಲಿದೆ. ವಿದೇಶಗಳಲ್ಲಿ ಮಾನವ ಮಲಮೂತ್ರದಿಂದ ಗೊಬ್ಬರ ತಯಾರಿಸಲಾಗುತ್ತಿದೆ. ಇದು ನಮ್ಮಲ್ಲೂ ಪ್ರಯೋಗವಾಗಬೇಕು. ಇದರಿಂದ ಕೃಷಿ ಚಟುವಟಿಕೆಗೂ ಪ್ರೋತ್ಸಾಹ ಸಿಕ್ಕಂತಾಗಲಿದೆ. ಈ ಪ್ರಯತ್ನ ಎಚ್‌.ಡಿ.ಕೋಟೆ ತಾಲೂಕಿನಲ್ಲಿ 600ಕ್ಕೂ ಹೆಚ್ಚು ಶೌಚಾ ಲಯಗಳಲ್ಲಿ ನಡೆದಿದೆ. ಹೊಸಹಳ್ಳಿ ಗ್ರಾಮಸ್ಥರು ಮನೆ ಮನೆಗಳಲ್ಲೂ ಗೊಬ್ಬರ ತಯಾರು ಮಾಡುತ್ತಿದ್ದಾರೆ. ನಗರಗಳಿಗಿಂತ ಹಳ್ಳಿಗಳಲ್ಲಿ ಶೌಚಾಲಯಕ್ಕೆ ನೀರನ್ನು ಕಡಿಮೆ ಬಳಸುತ್ತಾರೆ. ಇದು ನಗರಗಳಲ್ಲೂ ಪಾಲನೆಯಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮಾಜಿ ನಗರಪಾಲಿಕೆ ಸದಸ್ಯ ಎಂ.ಡಿ. ಪಾರ್ಥಸಾರಥಿ, ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಕುಮಾರ್‌ ಗೌಡ , ಪದಾಧಿಕಾರಿಗಳಾದ ರಾಕೇಶ್‌ ಶ್ರೀನಿವಾಸ್‌, ಸುಚೀಂದ್ರ, ಚಕ್ರಪಾಣಿ, ಎಸ್‌.ಎನ್‌.ರಾಜೇಶ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.