ಎಸ್‌ಸಿ, ಎಸ್‌ಟಿ ಹೊಯ್ಗೆ ದೋಣಿ ಕಾರ್ಮಿಕರ ಸಂಘದ ಪ್ರತಿಭಟನೆ

ಮರಳು ಪರವಾನಿಗೆಯಲ್ಲಿ ವಂಚನೆ

Team Udayavani, Nov 21, 2019, 5:08 AM IST

MARALU

ಉಡುಪಿ: ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯ ಮರಳು ದಿಬ್ಬಗಳನ್ನು ಸಾಂಪ್ರದಾಯಿಕ ರೀತಿಯಲ್ಲಿ ತೆರವುಗೊಳಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕಾದಿರಿಸಿದ 16 ಪರವಾನಿಗೆಗಳನ್ನು ಪ.ಜಾ. ಮತ್ತು ಪಂಗಡದ ಹೆಸರಿನಲ್ಲಿ ಮೇಲ್ವರ್ಗದ ದುರ್ಬಳಕೆ ಮಾಡಿಕೊಂಡು ದಲಿತರನ್ನು ವಂಚಿಸುತ್ತಿರುವ ಬಗ್ಗೆ ಎಸಿಬಿಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಉಡುಪಿ ಜಿಲ್ಲಾ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೊಯ್ಗೆ ದೋಣಿ ಕಾರ್ಮಿಕರ ಸಂಘ ಮಂಗಳವಾರ ಪ್ರತಿಭಟನೆ ನಡೆಸಿತು.

ಜಿಲ್ಲೆಯ ನದಿ ದಂಡೆಗಳಲ್ಲಿ ವಾಸ ಮಾಡಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮರಳು ತೆಗೆಯುವ ಕಾರ್ಮಿಕರು ಸಾಂಪ್ರದಾಯಿಕ ರೀತಿಯಲ್ಲಿ ತಲೆತಲಾಂತರಗಳಿಂದ ಮರಳು ದಿಬ್ಬಗಳನ್ನು ತೆರವುಗೊಳಿಸುವ ಕೆಲಸಮಾಡಿಕೊಂಡು ಬಂದಿದ್ದಾರೆ. ದಸಂಸದ ಹೋರಾಟದ ಫ‌ಲವಾಗಿ ಮೀಸಲಾತಿ ಅಡಿಯಲ್ಲಿ 2016-17ನೇ ಸಾಲಿನಿಂದಒಟ್ಟು 17 ಪರವಾನಿಗೆಗಳನ್ನು ಇವರಿಗೆ ಮರಳು ಉಸ್ತುವಾರಿ ಸಮಿತಿ ಮಂಜೂರು ಮಾಡಲಾಗಿದೆ.

ಆದರೆ ಉಡುಪಿ ಹೊಯಿಗೆ ದೋಣಿ ಕಾರ್ಮಿಕರ ಸಂಘವು ಈ ಪರವಾನಿಗೆಯನ್ನು ತನಗೆ ಬೇಕಾದ ಮರಳು ಕಾರ್ಮಿಕರಲ್ಲದ ಪರಿಶಿಷ್ಟ ಜಾತಿ ವ್ಯಕ್ತಿಯನ್ನು ಬಳಸಿಕೊಂಡು ಮೇಲ್ವರ್ಗದವರಿಗೆ ನೀಡಿ ಪರವಾನಿಗೆಯ ದುರ್ಬಳಕೆ ಮಾಡಿಕೊಂಡು ಅರ್ಹರನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಸಂಘದ ಗೌರವಾಧ್ಯಕ್ಷ ಉದಯಕುಮಾರ್‌ ತಲ್ಲೂರ್‌ ಆರೋಪಿಸಿದರು.

ಸತತ ಮೂರು ವರ್ಷಗಳಿಂದ ಹೋರಾಟ ನಡೆಸಿ ತನಿಖೆಮಾಡಲು ದಾಖಲೆ ಸಹಿತ ಮನವಿ ನೀಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ನಿರ್ಲಕ್ಷ್ಯ ವಹಿಸಿದೆ. ಇಂಥ ಪ್ರಕರಣ ನಮ್ಮಲ್ಲಿ ನಡೆದಿಲ್ಲ ಎಂದು ಮಂಗಳೂರಿನ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಹಿಂಬರಹ ನೀಡಿದೆ ಎಂದು ಉದಯಕುಮಾರ್‌ ತಲ್ಲೂರು ದೂರಿದರು.

ಐರೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕೃಷ್ಣ ಬಾಳುRದ್ರು ಅವರ ಮರಳು ಪರವಾನಿಗೆಯನ್ನು ದಲಿತೇತರರಾದ ಡ್ಯಾನಿಸ್‌ ಡಿ’ಸೋಜ ಹಾಗೂ ಥಾಮಸ್‌ ಡಿ’ಸೋಜ ಅವರು ಮರಳು ದಂಧೆ ನಡೆಸುತ್ತಿರುವುದು ಸಾಬೀತಾಗಿದೆ ಎಂದರು.

ಕೃಷ್ಣ ಬಾಳುRದ್ರು ಕೋಟ ಠಾಣೆಯಲ್ಲಿ ದಲಿತ ದೌರ್ಜನ್ಯದ ಪ್ರಕರಣವನ್ನು ದಾಖಲಿಸಿದ್ದಾರೆ. ಆದರೂ ಈವರೆಗೆ ಯಾವುದೇ ಕ್ರಮ ತೆಗೆದುಕೊಳ್ಳಲು ಜಿಲ್ಲಾಡಳಿತ ವಿಫ‌ಲವಾಗಿದೆ. ಹೀಗಾಗಿ ಕೂಡಲೇ ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕೆಂದು ಸಂಘ ಪ್ರತಿಭಟನೆ ನಡೆಸಿದೆ ಎಂದರು. ಪ್ರತಿಭಟನಕಾರರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ವಿಜಯ್‌ ಕೆ.ಎಸ್‌., ಉಪಾಧ್ಯಕ್ಷ ಪ್ರಶಾಂತ್‌ ತೊಟ್ಟಂ, ಪ್ರಧಾನ ಕಾರ್ಯದರ್ಶಿ ಶೇಖರ ಹೆಜಮಾಡಿ, ಸುರೇಶ್‌ ಬಂಟಕಲ್‌, ಕೃಷ್ಣ ಅಲ್ತಾರ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.