ವಾಹನ ಉಪಕರ ಭರಿಸಲು ಸಜ್ಜಾಗಿ!

ವಾಹನಗಳ ಮಾಲೀಕರಿಂದ ವರ್ಷಕ್ಕೊಮ್ಮೆ ಸಂಗ್ರಹಹಳೆ ಪದ್ಧತಿಗೆ ಹೊಸ ಚಾಲನೆ

Team Udayavani, Nov 21, 2019, 12:51 PM IST

21-November-8

„ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ವಸತಿ ತೆರಿಗೆ, ಕುಡಿವ ನೀರು, ಶೌಚಾಲಯ ಸೇರಿ ಬಳ್ಳಾರಿ ಮಹಾನಗರ ಪಾಲಿಕೆ ವಿಧಿಸುವ ಹಲವು ಬಗೆಯ ತೆರಿಗೆಗಳನ್ನು ಪಾವತಿಸುತ್ತಿರುವ ಸಾರ್ವಜನಿಕರು ಇದೀಗ ವಾಹನಗಳ ಮೇಲೂ ವಿಧಿಸುವ ಮೂಲಸೌಕರ್ಯ ತೆರಿಗೆಯನ್ನು ಭರಿಸಲು ಸಜ್ಜಾಗಬೇಕಿದೆ.

ಹೌದು….! ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಷ್ಟು ವರ್ಷಗಳ ಕಾಲ ಇಲ್ಲದ ವಾಹನಗಳ ಮೂಲಸೌಕರ್ಯ ಉಪಕರವನ್ನು ಇದೀಗ ಹೊಸದಾಗಿ ವಿಧಿಸಲಾಗುತ್ತಿದ್ದು, ವರ್ಷಕ್ಕೊಮ್ಮೆ ವಾಹನಗಳ ಮಾಲೀಕರ ಜೇಬಿಗೆ ಕತ್ತರಿ ಬೀಳಲಿದೆ. ವಾಹನಗಳ ಮೇಲೆ ಮೂಲಸೌಕರ್ಯ ಉಪಕರವನ್ನು ವಿಧಿಸುವಂತೆ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸೂಚನೆ ಮೇರೆಗೆ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರು ನ. 13ರಂದು ಆದೇಶ ಹೊರಡಿಸಿದ್ದಾರೆ.

ಅದರಂತೆ ಪಾಲಿಕೆ ವ್ಯಾಪ್ತಿಯಲ್ಲಿರುವ ದ್ವಿಚಕ್ರ, ತ್ರಿಚಕ್ರ ವಾಹನ, ಲಘು ವಾಹನ, ಸಾರಿಗೆ, ಸರಕು ಸಾಗಾಣಿಕಾ ವಾಹನಗಳ ಮೇಲೆ ಮೂಲಸೌಕರ್ಯ ಉಪಕರವನ್ನು ನೇರವಾಗಿ ವಸೂಲಿ ಮಾಡಲು ಕರವಸೂಲಿಗಾರರು ಇನ್ನು ಮುಂದೆ ಮಾಲೀಕರ ಮನೆಬಾಗಿಲು ತಟ್ಟಲಿದ್ದಾರೆ.

ಏತಕ್ಕಾಗಿ ವಾಹನಗಳ ಉಪಕರ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ರಸ್ತೆ ನಿರ್ಮಾಣ, ಬೀದಿ ಬದಿ ವಿದ್ಯುತ್‌ ದೀಪಗಳ ಅಳವಡಿಕೆ, ರಸ್ತೆಗಳ ದುರಸ್ತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ. ಅದಕ್ಕಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲಿನಿಂದಲೂ ಮೋಟಾರ್‌ ವಾಹನಗಳ ಮೂಲಸೌಕರ್ಯ ಉಪಕರವನ್ನು ನೇರವಾಗಿ ಮಾಲೀಕರಿಂದ ಸಂಗ್ರಹಿಸಲಾಗುತ್ತದೆ.

ಬಳ್ಳಾರಿ ಪಾಲಿಕೆಯಲ್ಲೂ ಕಳೆದ 2014-2015ರ ವರೆಗೂ ವಿಸ್ತರಿಸಲಾಗಿದೆ. ನಂತರದ ದಿನಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಉಪಕರ ಪಾವತಿ ಸ್ಥಗಿತಗೊಂಡಿದೆ. ಇದೀಗ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರೇ ವಾಹನಗಳ ಮೂಲಸೌಕರ್ಯ ಉಪಕರವನ್ನು ವಸೂಲಿ ಮಾಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇದೀಗ ಆದೇಶ ಹೊರಡಿಸಲಾಗಿದ್ದು, ವರ್ಷಕ್ಕೊಮ್ಮೆ ವಾಹನಗಳ ಮಾಲೀಕರಿಂದ ಉಪಕರವನ್ನು ಸಂಗ್ರಹಿಸಲಾಗುತ್ತದೆ. ಕರವಸೂಲಿಗಾರರೇ ಮಾಲೀಕರ ಮನೆ ಬಾಗಿಲಿಗೆ ತೆರಳಿ, ಕರವನ್ನು ಸಂಗ್ರಹಿಸಿ, ರಶೀದಿ ನೀಡಲಿದ್ದಾರೆ ಎಂದು ಪಾಲಿಕೆ ಉಪ ಆಯುಕ್ತ ಭೀಮಪ್ಪ ಸ್ಪಷ್ಟಪಡಿಸಿದ್ದಾರೆ.

ಆರ್‌ಟಿಒ ವಿಧಿಸಿಲ್ಲ: ವಾಹನಗಳನ್ನು ಹೊಸದಾಗಿ ಖರೀದಿಸಿದಾಗ ನೋಂದಣಿಗಾಗಿ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಇಲಾಖೆಗೆ ಕೊಂಡೊಯ್ದಾಗ ಅಲ್ಲಿಯೂ ಮೂಲಸೌಕರ್ಯ ಉಪಕರವನ್ನು ಮಾಲೀಕರಿಂದ ವಸೂಲಿ ಮಾಡಬೇಕಿತ್ತು. ಆದರೆ, ಇಲ್ಲಿನ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ವಾಹನಗಳ ಬೆಲೆಗಷ್ಟೇ ತೆರಿಗೆ ಪಡೆಯಲಾಗುತ್ತಿದೆ. ಉಪಕರವನ್ನು ಸಂಗ್ರಹಿಸುವ ಪದ್ಧತಿ ಅಲ್ಲಿಯೂ ಸ್ಥಗಿತಗೊಂಡಿದೆ. ಹೀಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಈ ಕುರಿತು ಸ್ಪಷ್ಟಪಡಿಸಿಕೊಂಡು ಈ ಆದೇಶವನ್ನು ಹೊರಡಿಸಲಾಗಿದೆ.

ಇನ್ನುಮುಂದೆ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲೂ ವಾಹನ ನೋಂದಣಿ ವೇಳೆ ಕರ ವಿಧಿಸುವಂತೆ ಸೂಚಿಸಲಾಗುವುದು. ಅಲ್ಲಿ ಪಾವತಿಸಿರುವ ಬಗ್ಗೆ ಬಿಲ್‌ಗ‌ಳನ್ನು ಮನೆಗೆ ಬರುವ ಕರವಸೂಲಿಗಾರರಿಗೆ ತೋರಿಸಬಹುದು.

ಯಾವ ವಾಹನಗಳಿಗೆ ಎಷ್ಟೆಷ್ಟು ಉಪಕರ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ದ್ವಿಚಕ್ರ ವಾಹನಕ್ಕೆ 50 ರೂ, ಮೂರು ಚಕ್ರ ವಾಹನ 100 ರೂ, ನಾಲ್ಕು ಚಕ್ರ ವಾಹನ 300 ರೂ, ಪ್ರಯಾಣಿಕರನ್ನು ಸಾಗಿಸುವ ವಾಹನಗಳಿಗೆ 400 ರೂ., ಸರಕು ಸಾಗಾಣಿಕಾ ವಾಹನಗಳಿಗೆ 500 ರೂ.ಗಳ ಉಪಕರವನ್ನು ನಿಗ ಪಡಿಸಲಾಗಿದೆ. ವರ್ಷಕ್ಕೊಮ್ಮೆ ವಾಹನಗಳ ಮೇಲೆ ಈ ಉಪಕರವನ್ನು ಮಾಲೀಕರು ಪಾವತಿಸಬೇಕಿದೆ. ಬಳ್ಳಾರಿ ಮಹಾನಗರ ಪಾಲಿಕೆಯು ಮನೆ ತೆರಿಗೆ, ಕುಡಿವ ನೀರಿನ ತೆರಿಗೆಯನ್ನೇ ಸಮರ್ಪಕವಾಗಿ
ವಸೂಲಿ ಮಾಡದ ಪಾಲಿಕೆ ಸಿಬ್ಬಂದಿ, ಇದೀಗ ಹೊಸದಾಗಿ ವಾಹನಗಳ ಮಾಲೀಕರಿಂದ ಉಪಕರ ವಸೂಲಿಯನ್ನು ಎಷ್ಟರ ಮಟ್ಟಿಗೆ ಯಶಸ್ವಿಗೊಳಿಸುತ್ತಾರೋ ಅಥವಾ ಉಪಕರವನ್ನು ಪಾವತಿಸದಿದ್ದಲ್ಲಿ ಅಂತಹ ವಾಹನಗಳ ಮಾಲೀಕರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ. ಹಾಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿ ಮಟ್ಟಿಗೆ ಈ ಉಪಕರ ಸಂಗ್ರಹ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.