ಅವೈಜ್ಞಾನಿಕ ಪೈಪ್‌ಲೈನ್‌ ಕಾಮಗಾರಿಗೆ 19 ಲಕ್ಷ ರೂ.!

ಸಾಲಿಗ್ರಾಮ: ಮುಖ್ಯ ರಸ್ತೆಯೊಳಗಿದ್ದ ನೀರಿನ ಪೈಪ್‌ಲೈನ್‌ ಸರ್ವಿಸ್‌ ರಸ್ತೆಯೊಳಕ್ಕೆ

Team Udayavani, Nov 22, 2019, 5:26 AM IST

2111KOTA1EA

ಕೋಟ: ಕೋಟ ಗೋ ಆಸ್ಪತ್ರೆ ಸಮೀಪ ವಿರುವ ಸರಕಾರಿ ಬಾವಿಯಿಂದ ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಹಲವು ಭಾಗಕ್ಕೆ ನೀರು ಸರಬರಾಜಾ ಗುತ್ತಿದ್ದು, ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹತ್ತಾರು ವರ್ಷದ ಹಿಂದೆ ಪೈಪ್‌ಲೈನ್‌ ಮಾಡಲಾಗಿತ್ತು. ಆದರೆ ಚತುಷ್ಪಥ ಕಾಮಗಾರಿಯ ಸಂದರ್ಭ ರಸ್ತೆ ವಿಸ್ತರಣೆಗೊಂಡಿದ್ದರಿಂದ ಕುಂದಾಪುರ-ಉಡುಪಿ ಕಡೆಯ ಮುಖ್ಯ ರಸ್ತೆಯ ಮಧ್ಯದಲ್ಲಿ ಪೈಪ್‌ಲೈನ್‌ ಸೇರಿಕೊಂಡಿದೆ.

ಹೀಗಾಗಿ ಆಗಾಗ ಪೈಪಿಗೆ ಹಾನಿಯಾಗುತ್ತಿದ್ದು ದುರಸ್ತಿ ನಡೆಸಲು ಸಾಧ್ಯ ವಾಗುತ್ತಿಲ್ಲ. ಈ ಸಮಸ್ಯೆ ಬಗೆಹರಿಸಲು ಪ.ಪಂ. 14ನೇ ಹಣಕಾಸು ನಿಧಿಯಿಂದ ಇದೀಗ 19.35ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ಪೈಪ್‌ಲೈನ್‌ ಕಾಮಗಾರಿ ಕೈಗೆತ್ತಿಕೊಂಡಿದೆ. ಆದರೆ ವಿಚಿತ್ರವೆಂಬಂತೆ ಮತ್ತೆ ಪುನಃ ಸರ್ವೀಸ್‌ ರಸ್ತೆಗೆ ಮೀಸಲಿಟ್ಟಿರುವ ಜಾಗದಲ್ಲೇ ಹೊಸ ಕಾಮಗಾರಿ ನಡೆಸಲಾಗುತ್ತಿದೆ.

ಸರ್ವಿಸ್‌ ರಸ್ತೆಯೊಳಗೆ ಪೈಪ್‌ಲೈನ್‌
ಇದೀಗ ಕಾಮಗಾರಿ ನಡೆಯುತ್ತಿರುವ ಸ್ಥಳ ಸರ್ವಿಸ್‌ ರಸ್ತೆಗೆ ಮೀಸಲಿರಿಸಿದ ಜಾಗವಾಗಿದೆ. ಸಾಲಿಗ್ರಾಮ ಗಿರಿಜಾ ಕಲ್ಯಾಣಮಂಟಪದಿಂದ ಮೀನು ಮಾರುಕಟ್ಟೆ ತನಕ ಎರಡೂ ಕಡೆಗಳಲ್ಲಿ 6ಮೀ. ಸರ್ವಿಸ್‌ರಸ್ತೆ ಹಾಗೂ 1 ಮೀ. ಚರಂಡಿ ಪ್ರಥಮ ಹಂತದಲ್ಲೇ ಮಂಜೂರಾಗಿದ್ದು ಶೀಘ್ರದಲ್ಲೇ ಕೆಲಸ ಆರಂಭವಾಗಲಿದೆ. ಕೋಟ ಹೈಸ್ಕೂಲ್‌ ಭಾಗದಲ್ಲೂ ಹೆಚ್ಚುವರಿಯಾಗಿ ಸರ್ವಿಸ್‌ ರಸ್ತೆಯ ಬೇಡಿಕೆ ಇದೆ. ಆದ್ದರಿಂದ ಈಗ ಹೊಸದಾಗಿ ನಿರ್ಮಿಸುತ್ತಿರುವ ಪೈಪ್‌ಲೈನ್‌ ಕೂಡ ಸರ್ವಿಸ್‌ ರಸ್ತೆ ಒಳಭಾಗಕ್ಕೆ ಸೇರುವುದು ಖಚಿತವಾಗಿದ್ದು ಲಕ್ಷಾಂತರ ರೂ. ವ್ಯರ್ಥವಾಗಲಿದೆ.

ಮುಂದಾಲೋಚನೆ ಕೊರತೆ
ಸಾಲಿಗ್ರಾಮದಲ್ಲಿ ಸರ್ವಿಸ್‌ ರಸ್ತೆಗೆ ಮಂಜೂರಾತಿ ದೊರೆತಿರುವುದು ಹಾಗೂ ಕೋಟ ಹೈಸ್ಕೂಲ್‌ ಆಸುಪಾಸಿನಲ್ಲಿ ಬೇಡಿಕೆ ಇರುವುದು ಸ್ಥಳೀಯಾಡಳಿತದ ಗಮನದಲ್ಲಿದೆ. ಇದನ್ನು ತಿಳಿದೂ ಕಾಮಗಾರಿಗೆ ಮುಂದಾಗಿರುವುದು ವಿಪರ್ಯಾಸ. ಚತುಷ್ಪಥ ಕಾಮಗಾರಿ ಸಂದರ್ಭ ರಸ್ತೆಯ ಅಕ್ಕ-ಪಕ್ಕದ 30ಮೀ. ಜಾಗವನ್ನು ವಶಪಡಿಸಿಕೊಳ್ಳಲಾಗಿತ್ತು. ಹೀಗಾಗಿ ಈ ಸ್ಥಳದಲ್ಲಿ ಪೈಪ್‌ಲೈನ್‌ ನಡೆಸಲು ಯಾವುದೇ ಸಮಸ್ಯೆ ಇಲ್ಲ. ಆದರೆ ಹೆದ್ದಾರಿ ಪ್ರಾಧಿಕಾರ ಮತ್ತು ನವಯುಗದವರು ಸೂಕ್ತ ಸಹಕಾರ ನೀಡಿಲ್ಲ ಎನ್ನುವ ಕಾರಣಕ್ಕೆ ಈ ರೀತಿ ಕಾಮಗಾರಿ ನಡೆಸಲಾಗುತ್ತಿದೆ.

ಕಾಮಗಾರಿ ಸ್ಥಗಿತಕ್ಕೆ ಆಗ್ರಹ
ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿ ಲಕ್ಷಾಂತರ ರೂ. ವ್ಯರ್ಥ ಮಾಡುತ್ತಿರುವ ಪ.ಪಂ.ನ ಕಾರ್ಯ ವೈಖರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಮತ್ತು ಕಾಮಗಾರಿಯನ್ನು ತತ್‌ಕ್ಷಣ ಸ್ಥಗಿತಗೊಳಿಸಬೇಕಾಗಿ ಆಗ್ರಹಿಸಿದ್ದಾರೆ.

ಪೇಟೆ ವಾರ್ಡ್‌ನಲ್ಲಿ ಕಾಮಗಾರಿಗೆ ಅವಕಾಶವಿಲ್ಲ
ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು 14ನೇ ಹಣಕಾಸು ನಿಧಿಯ 19.35ಲಕ್ಷ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆ. ಈ ಕುರಿತು ನಮಗೆ ಯಾವುದೇ ಮಾಹಿತಿ ನೀಡಿಲ್ಲ. ಪೇಟೆ ವಾರ್ಡ್‌ನಲ್ಲಿ ಸರ್ವಿಸ್‌ ರಸ್ತೆ ಜಾಗದಲ್ಲಿ ಪೈಪ್‌ಲೈನ್‌ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ.
-ರತ್ನಾ ನಾಗರಾಜ್‌,ಪೇಟೆ ವಾರ್ಡ್‌ ಸದಸ್ಯರು

ಕಾಮಗಾರಿ ಸ್ಥಳದ ಮಾಹಿತಿ ಇಲ್ಲ
ತುರ್ತು ಕುಡಿಯುವ ನೀರಿನ ಕಾಮಗಾರಿ ಎನ್ನುವ ಕಾರಣಕ್ಕೆ ಅನುಮತಿ ನೀಡಿದ್ದೇನೆ. ಆದರೆ ಸರ್ವಿಸ್‌ ರಸ್ತೆ ಜಾಗದಲ್ಲಿ ಪೈಪ್‌ಲೈನ್‌ ಮಾಡಲಾಗುತ್ತಿದೆ ಎನ್ನುವುದು ತಿಳಿದಿಲ್ಲ. ಈ ಕುರಿತು ಪರಿಶೀಲನೆ ನಡೆಸುತ್ತೇನೆ.
-ಕಿರಣ್‌ ಗೋರಯ್ಯ,
ಕಾರ್ಯನಿರ್ವಹಣಾಧಿಕಾರಿ ಪ.ಪಂ.

ಎನ್‌.ಎಚ್‌.ಎ.ಐ. ಅನುಮತಿ ಪಡೆಯಲಾಗಿದೆ
ಹೆದ್ದಾರಿ ಪ್ರಾಧಿಕಾರ ಹಾಗೂ ನವಯುಗ ಸ್ಥಳಪರಿಶೀಲಿಸಿ ಕಾಮಗಾರಿ ನಡೆಸಲು ಅನುಮತಿ ನೀಡಿದ್ದಾರೆ ಮತ್ತು ಸರ್ವಿಸ್‌ ರಸ್ತೆ ನಿರ್ಮಾಣವಾದರೂ ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡಿದ್ದಾರೆ.
-ಅರುಣ್‌ ಕುಮಾರ್‌,ಮುಖ್ಯಾಧಿಕಾರಿ ಪ.ಪಂ.

-ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

HDD LARGE

Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

Team India ಮುಖ್ಯ ಕೋಚ್ ಆಫರ್ ತಿರಸ್ಕರಿಸಿದ ರಿಕಿ ಪಾಂಟಿಂಗ್

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

9-exams

Exams: ಪರೀಕ್ಷೆ ಸವಾಲುಗಳು ಮಾತ್ರ ಬದುಕು ಅಲ್ಲ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

24 ಗಂಟೆಯೊಳಗೆ ರಘುಪತಿ ಭಟ್ ಕಣದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ: ಸುನಿಲ್ ಕುಮಾರ್

5-doddanagudde

ನಾಳೆ ದೊಡ್ಡಣ್ಣಗುಡ್ಡೆ ಕ್ಷೇತ್ರದಲ್ಲಿ ಶತಬ್ರಹ್ಮಕುಂಭಾಭಿಷೇಕ,ಕಲಶಸೇವೆ ಸಹಿತ ಹಲವು ಕಾರ್ಯಕ್ರಮ

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

Udupi ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

Kannada Cinema; ಮೂಲ ನಂಬಿಕೆ-  ಮೂಢನಂಬಿಕೆಯ ಸುತ್ತ ‘ಕೌಮುದಿ’

SMVITM; Crop Disease Web Application Development

SMVITM; ಬೆಳೆ ರೋಗದ ವೆಬ್‌ ಅಪ್ಲಿಕೇಶನ್‌ ಅಭಿವೃದ್ಧಿ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Kutyaru Muldottu: ವರ್ಷಕ್ಕೊಮ್ಮೆ ತಂಪೆರೆಯುವ ನಾಗಬನದಲ್ಲಿ ವಾರ್ಷಿಕ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.