ಸರಕಾರಿ ಶಾಲೆ: ಕ್ಷೀಣಿಸುತ್ತಲೇ ಇದೆ ದಾಖಲಾತಿ

ಶೈಕ್ಷಣಿಕ ವರ್ಷ 24,294 ಮಕ್ಕಳ ಕೊರತೆ; ಫ‌ಲಿಸುತ್ತಿಲ್ಲ ಸರಕಾರಿ ಯೋಜನೆಗಳು

Team Udayavani, Nov 22, 2019, 6:00 AM IST

pp-53

ಸಾಂದರ್ಭಿಕ ಚಿತ್ರ

ಮಂಗಳೂರು: ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೆಳೆಯಲು ಸರಕಾರವು ಹಲವು ಯೋಜನೆಗಳನ್ನು ಪರಿಚಯಿಸಿದ್ದರೂ ಅವು ಅಷ್ಟೊಂದು ಫಲಿಸುತ್ತಿಲ್ಲ ಎನ್ನುವುದು ವಾಸ್ತವ. ಮಕ್ಕಳ ದಾಖಲಾತಿ ಪ್ರತೀ ವರ್ಷವೂ ಇಳಿಕೆಯಾಗುತ್ತಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ಸೇರಿದ ಮಕ್ಕಳ ಸಂಖ್ಯೆ ಕಳೆದ ಬಾರಿಗಿಂತ 24 ಸಾವಿರದಷ್ಟು ಕಡಿಮೆಯಾಗಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಾದಂತೆ ಸರಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ನಿರಂತರವಾಗಿ ಕಡಿಮೆಯಾಗುತ್ತಾ ಬರುತ್ತಿದೆ. ದಾಖಲಾತಿ ಕೊರತೆಯಿಂದ ರಾಜ್ಯಾದ್ಯಂತ ಹಲವು ಶಾಲೆಗಳು ಮುಚ್ಚಿವೆ, ಅಂದಾಜು 715 ಶಾಲೆಗಳ ಒಂದನೇ ತರಗತಿಗೆ ದಾಖಲಾತಿ 10ಕ್ಕಿಂತ ಕಡಿಮೆಯಾಗಿದೆ. ಸರಕಾರ ಏನೇ ಕ್ರಮ ಕೈಗೊಂಡರೂ ಸಂಖ್ಯೆ ಇಳಿಕೆಯಾಗುತ್ತಲೇ ಇದೆ. 2017-18ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯವ್ಯಾಪಿಯಾಗಿ ಒಂದನೇ ತರಗತಿಗೆ 4,35,946 ಮಕ್ಕಳು ದಾಖಲಾದರೆ 2018-19ನೇ ಸಾಲಿನಲ್ಲಿ ಈ ಸಂಖ್ಯೆ 4,54,872ಕ್ಕೇರಿ ಆಶಾಭಾವನೆ ಉಂಟಾಗಿತ್ತು. ಆದರೆ 2019-20ನೇ ಸಾಲಿನಲ್ಲಿ ಇದು 4,30,578ಕ್ಕೆ ಕುಸಿದಿದೆ.

ಕಡಿಮೆ ದಾಖಲಾತಿಯ ಶಾಲೆಗಳು
ಮಕ್ಕಳ ಸಂಖ್ಯೆ ಕುಸಿದರೆ ಶಾಲೆಗಳು ಮುಚ್ಚುತ್ತವೆ. ಕೆಲವು ಶಾಲೆಗಳಲ್ಲಿ ಒಂದನೇ ತರಗತಿಗೆ ದಾಖಲಾತಿಯೇ ಆಗಿಲ್ಲ. ಶಿಕ್ಷಣ ಇಲಾಖೆಯ ಮಾಹಿತಿ ಪ್ರಕಾರ 2017-18ರಲ್ಲಿ 21,225 ಕಿ.ಪ್ರಾ. ಶಾಲೆಗಳು, 22,487 ಹಿ.ಪ್ರಾ. ಶಾಲೆಗಳಿದ್ದರೆ, 2018-19ರಲ್ಲಿ ಅವುಗಳ ಸಂಖ್ಯೆ ಕ್ರಮವಾಗಿ 21,009 ಮತ್ತು 22,483ಕ್ಕೆ ಇಳಿದಿತ್ತು. 2019-20ನೇ ಸಾಲಿನಲ್ಲಿ ಒಟ್ಟು 43,492 ಶಾಲೆಗಳಿದ್ದು, ಹಿ.ಪ್ರಾ. ಮತ್ತು ಕಿ.ಪ್ರಾ. ಶಾಲೆಗಳ ಲೆಕ್ಕ ಸಿಕ್ಕಿಲ್ಲ.

ಕಾರಣವೇನು?
ಸರಕಾರಿ ಶಾಲೆಗಳು ಬಡವಾಗಲು ಖಾಸಗಿ ಶಾಲೆಗಳತ್ತ ಆಕರ್ಷಣೆ, ಆಂಗ್ಲ ಮಾಧ್ಯಮ ವ್ಯಾಮೋಹ, ಪ್ರತಿಷ್ಠೆಯ ಪ್ರಶ್ನೆ ಇತ್ಯಾದಿ ಹಲವು ಕಾರಣಗಳು. ಮಕ್ಕಳನ್ನು ಸರಕಾರಿ ಶಾಲೆಗಳತ್ತ ಆಕರ್ಷಿಸಲು 2019-20ನೇ ಸಾಲಿನಲ್ಲಿ ರಾಜ್ಯದ ಆಯ್ದ ಒಂದು ಸಾವಿರ ಶಾಲೆಗಳಲ್ಲಿ ಒಂದನೇ ತರಗತಿಗೆ ಆಂಗ್ಲ ಮಾಧ್ಯಮವನ್ನು ಪರಿಚಯಿಸಿತ್ತು.

ಸರಕಾರಿ ಶಾಲೆಗಳ ಸಶಕ್ತೀಕರಣ ಕುರಿತು ಸಾಕಷ್ಟು ಚರ್ಚೆ ಮಾಡಲಾಗಿದೆ. ಮಕ್ಕಳ ಸಂಖ್ಯೆ ಹೆಚ್ಚು ಮಾಡುವುದು ಹೇಗೆ ಎಂಬ ಬಗ್ಗೆ ವಿಸ್ತೃತ ಮಾತುಕತೆ ನಡೆಯುತ್ತಿದೆ. ಈ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ವರದಿ ತಯಾರಿಸಿದ್ದು, ವರದಿಯ 21 ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಪರಿಶೀಲನೆಗಾಗಿ ನನ್ನ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಿದ್ದೇವೆ. ಮೂರು ತಿಂಗಳಿಗೊಮ್ಮೆ ಈ ಸಮಿತಿ ಚರ್ಚೆ ನಡೆಸಿ ಕಾರ್ಯೋನ್ಮುಖವಾಗುವುದು ಉದ್ದೇಶ.
-ಎಸ್‌. ಸುರೇಶ್‌ ಕುಮಾರ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು

– ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.