ಪ್ರತಿಯೊಬ್ಬರ ಕೈಯಲ್ಲಿ ಕ್ಯಾಮೆರಾ ಇದೆ : ಆದರೆ ಸಿನಿಮಾ ಇಲ್ಲ !

ಗೋವಾ ಚಿತ್ರೋತ್ಸವದಲ್ಲಿ ಪ್ರಿಯದರ್ಶನ್ ಅಭಿಪ್ರಾಯ

Team Udayavani, Nov 22, 2019, 9:37 AM IST

priya

ಪಣಜಿ: ಚಿತ್ರಕಥೆ, ಸಿನೆ ಛಾಯಾಗ್ರಹಣ ಹಾಗೂ ವಿನ್ಯಾಸವೇ ಸಿನಿಮಾದ ಅಂತಃಸತ್ತ್ವ. ಅದೇ ಇಂದಿನ ಸಿನಿಮಾಗಳಲ್ಲಿ ಕಾಣೆಯಾಗುತ್ತಿದೆ !
ಇದನ್ನು ಹುಡುಕುವುದೇ ಸವಾಲಿನ ಕೆಲಸವಾಗಿದೆ ಎಂದವರು ಭಾರತೀಯ ಪನೋರಮಾ ವಿಭಾಗದ ಆಯ್ಕೆ ಸಮಿತಿ. ಇದರ ಅಧ್ಯಕ್ಷರಾದ ಪ್ರಿಯದರ್ಶನ್ ಸಿನಿಮಾ ಆಯ್ಕೆ ಕುರಿತು ವಿವರಿಸುವಾಗ ಆತಂಕ ವ್ಯಕ್ತಪಡಿಸಿದ್ದು ಇದೇ ನೆಲೆಯಲ್ಲಿ.

‘ಭಾರತೀಯ ರಿಯಲಿಸ್ಟಿಕ್ ಸಿನಿಮಾಗಳು ತಮ್ಮ ಬಣ್ಣ ಕಳೆದುಕೊಳ್ಳುತ್ತಿವೆ. ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಇದು ಸಮಿತಿಗೆ ಈ ಬಾರಿಯ ಆಯ್ಕೆಗೆ ಬಂದ ಸಿನಿಮಾಗಳು ಕಂಡು ಬಂದಾಗ ಅನಿಸಿದ್ದು’ ಎಂದರು ಪ್ರಿಯದರ್ಶನ್.

ಒಂದು ಸಿನಿಮಾದ ಗುಣಮಟ್ಟವನ್ನು ನೋಡುವುದೇ ಅದರ ಚಿತ್ರಕಥೆ, ಸಿನೆ ಛಾಯಾಗ್ರಹಣ ಹಾಗೂ ವಿನ್ಯಾಸದಿಂದ. ಅವುಗಳೇ ಇಂದಿನ ಹಲವು ಸಿನಿಮಾಗಳಲ್ಲಿ ಕಾಣೆಯಾಗಿವೆ. ಹಾಗಾದರೆ ಒಳ್ಳೆಯ ಸಿನಿಮಾ ಎಂದರೆ ಏನು ಎಂಬುದು ಅವರ ಪ್ರಶ್ನೆಯಾಗಿತ್ತು.

ಬಹಳ ಕಷ್ಟವಾಗಲಿಲ್ಲ
ಒಟ್ಟು 314 ಸಿನಿಮಾಗಳನ್ನು ವೀಕ್ಷಿಸುವ ಮೊದಲು ಸಂಖ್ಯೆಯನ್ನು ಕಂಡು ಕಷ್ಟವೆಂದಕೊಂಡಿದ್ದೆವು. ಸೀಮಿತ ಅವಧಿಯಲ್ಲಿ ಎಲ್ಲವನ್ನೂ ವೀಕ್ಷಿಸಿ, ಅಭಿಪ್ರಾಯ ಸಂಗ್ರಹಿಸಿ ನಿರ್ಧರಿಸುವುದು ಕಷ್ಟ. ಆದರೆ, ಸಿನಿಮಾಗಳ ಗುಣಮಟ್ಟ ಕಂಡ ಬಳಿಕ ಆಯ್ಕೆ ಬಹಳ ಕಷ್ಟವೆನಿಸಲಿಲ್ಲ ಎಂದರು ಪ್ರಿಯದರ್ಶನ್ ಮತ್ತು ಹರೀಶ್ ಬಿಮಾನಿ.

ಇಂದು ಎಲ್ಲರ ಕೈಯಲ್ಲೂ ಕ್ಯಾಮರಾ ಬಂದಿದೆ. ಎಲ್ಲರೂ ವಿಡಿಯೋ ಚಿತ್ರೀಕರಿಸುತ್ತಾರೆ. ಆದರೆ ಅದಕ್ಕೊಂದು ವಿನ್ಯಾಸ ಮತ್ತು ಕಥೆ ಕಟ್ಟುವಿಕೆ ಇರುವುದಿಲ್ಲ. ಹಾಗಾಗಿಯೇ ಸಿನಿಮಾಗಳೆನಿಸುವುದಿಲ್ಲ ಎಂಬುದು ಸಮಿತಿಯ ಅಭಿಪ್ರಾಯ.

ಎಲ್ಲರೂ ತಮ್ಮ ಮನಸ್ಸಿನೊಳಗಿರುವುದನ್ನು ಕಟ್ಟಿಕೊಡಲು ಪ್ರಯತ್ನಿಸುತ್ತಿದ್ದಾರೆ. ಅದು ಸರಿಯೇ. ಆದರೆ ಅದಕ್ಕೊಂದು ತರಬೇತಿ ಅವಶ್ಯವಿದೆ ಎಂಬುದು ಪ್ರಿಯದರ್ಶನ್ ಅಭಿಪ್ರಾಯ.
ಈ ಬಾರಿ ಭಾರತೀಯ ಪನೋರಮಾ ವಿಭಾಗದ ಕಥಾ ವಿಭಾಗದಲ್ಲಿ 26 ಸಿನಿಮಾಗಳು ಹಾಗೂ ಕಥೇತರ ವಿಭಾಗದಲ್ಲಿ 15 ಸಿನಿಮಾಗಳು ಪ್ರದರ್ಶಿತವಾಗುತ್ತಿವೆ. ಕನ್ನಡದ ರಂಗನಾಯಕಿ ಘದಯಾಳ್ ಪದ್ಮನಾಭನ್ ನಿರ್ದೇಶನ] ಇದೇ ವಿಭಾಗದಲ್ಲಿ ಪ್ರದರ್ಶಿತವಾಗುತ್ತಿದೆ.

ಕಾಶ್ಮೀರಿ ಭಾಷೆಯ ನೂರೆ, ಮರಾಠಿಯ ಫೋಟೋ ಫ್ರೇಮ್, ಬೋಗ್ರಾ ಅಲ್ಲದೇ ಮಲಯಾಳಂ, ಬಂಗಾಳಿ, ಖಾಸಿ ಮತ್ತಿತರ ಭಾರತೀಯ ಭಾಷಾ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.