ಗಮನ ಸೆಳೆಯುತ್ತಿದೆ ಸಾಲಭಾವಿ ಶಾಲೆ


Team Udayavani, Nov 22, 2019, 12:59 PM IST

kopala-tdy-2

ಯಲಬುರ್ಗಾ: ತಾಲೂಕಿನ ಸಾಲಭಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರೈಲ್ವೆ ಮಾದರಿಯಲ್ಲಿ ಕಂಗೊಳಿಸುತ್ತಿದೆ. ಶಿಕ್ಷಣಕ್ಕೆ ಪೂರಕವಾಗಿರುವ ಮಕ್ಕಳ ಮನಸ್ಸನ್ನು ಶಾಲೆಗಳತ್ತ ಸೆಳೆಯಲು ತಮ್ಮದೇ ಆದ ಪ್ರಯತ್ನ ನಡೆಸುತ್ತಿವೆ. ಅಂತಹ ಪ್ರಯತ್ನದಲ್ಲಿ ಸಾಲಭಾವಿ ಶಾಲಾ ಕಟ್ಟಡವನ್ನು ಭಾರತೀಯ ರೈಲ್ವೆ ಮಾದರಿ ಅಲಂಕರಿಸಿ ಕಲಿಕೆಯಲ್ಲಿ ಮಕ್ಕಳ ಆಸಕ್ತಿ ಹೆಚ್ಚಿಸಲು ಮುಂದಾಗಿದ್ದಾರೆ.

ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 174 ವಿದ್ಯಾರ್ಥಿಗಳಿದ್ದಾರೆ. ಒಟ್ಟು ಎಂಟು ಕೊಠಡಿ ಸೇರಿದಂತೆ ಕಾಂಪೌಂಡ್‌ ಬಣ್ಣ ಮಾಸಿ ಹೋಗಿ ದುರಸ್ತಿಗೆ ಬಂದಿತ್ತು. ಗ್ರಾಪಂ ಸದಸ್ಯರು, ಎಸ್‌ಡಿಎಂಸಿ ಪದಾಧಿಕಾರಿಗಳು, ಮಕ್ಕಳ ಪಾಲಕರು, ಯುವಕರು, ಶಾಲಾ ಶಿಕ್ಷಕರು ಸಭೆ ನಡೆಸಿ ವೈಯಕ್ತಿಕ 30 ಸಾವಿರ ರೂ. ದೇಣಿಗೆ ಸಂಗ್ರಹಿಸಿದ್ದು, ಆ ಹಣದಲ್ಲಿ ಶಾಲಾಕಟ್ಟಡ ಅಲಂಕರಿಸಲಾಗಿದೆ. ಶಾಲೆಯಲ್ಲಿ ಮೂವರು ಖಾಯಂ ಶಿಕ್ಷಕರು, ಮೂವರು ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಈ ವಿನೂತನ ಪ್ರಯೋಗಕ್ಕೆ ಮುಂದಾಗಲಾಗಿದೆ.

ಮಕ್ಕಳಲ್ಲಿ ಕಲಿಕಾ ಆಸಕ್ತಿ, ಕ್ರಿಯಾಶೀಲತೆ ಹೆಚ್ಚುತ್ತದೆ, ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಶಾಲೆಯತ್ತ ಬರುತ್ತಿದ್ದಾರೆ. ಇದರಿಂದ ದಾಖಲಾತಿ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಇತ್ತೀಚಿಗೆ ಇಂತಹ ನೂತನ ಪ್ರಯೋಗ ಮಾಡುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಸರಕಾರದ ಅನುದಾನ ನೆಚ್ಚಿ ಕುಳಿತುಕೊಳ್ಳದೇ ಗ್ರಾಮಸ್ಥರು ವೈಯಕ್ತಿಕ ದೇಣಿಗೆ ಸಂಗ್ರಹಿಸಿ ಈ ಕಾರ್ಯ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

ಈ ಹಿಂದೆ ಗ್ರಾಮ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿತ್ತು. ಬದಲಾದ ಕಾಲ ಘಟ್ಟದಲ್ಲಿ ಗ್ರಾಮಸ್ಥರ ಶೈಕ್ಷಣಿಕ ಪ್ರಜ್ಞೆ ಹೆಚ್ಚಾಗಿದ್ದು, ಶಾಲೆ ಅಭಿವೃದ್ಧಿ ಜೊತೆಗೆ ಮಕ್ಕಳ ಶೈಕ್ಷಣಿಕ ಮನೋವಿಕಾಸ ಬೆಳವಣಿಗೆಯಾಗುತ್ತಿದೆ. ಈ ಮೊದಲು ಶಾಲೆಯಲ್ಲಿ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಮಾತ್ರ ಇತ್ತು. ಇದೀಗ 2010ರಿಂದ ಉನ್ನತೀಕರಣಗೊಂಡು ಏಳನೇ ತರಗತಿವರೆಗೆ ಶಾಲೆ ಇದೆ.

ಗ್ರಾಮಸ್ಥರ ಕಾಳಜಿ: ಕೆಲ ದಿನಗಳಿಂದ ಗ್ರಾಮಸ್ಥರು ಶಾಲೆ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ. ವಾರಕ್ಕೊಮ್ಮೆ ಸಭೆ ನಡೆಸಿ ಶೈಕ್ಷಣಿಕ ಪ್ರಗತಿಗೆ ಮುಂದಾಗುತ್ತಿದ್ದಾರೆ. ಪ್ರೇರಣಾ ಕ್ಲಬ್‌, ಸಂಸತ್‌ ರಚನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ತಿಂಗಳಿಗೊಮ್ಮೆ ಪಾಲಕರ ಸಭೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಪಠ್ಯ ಅಷ್ಟೇ ಅಲ್ಲದೇ ಪಠ್ಯೇತರ ಚಟುವಟಿಕೆಯಲ್ಲಿಯೇ ಮುಂದುವರಿದಿದ್ದಾರೆ. ಗ್ರಾಮೀಣ ಪ್ರದೇಶಗಳ ಇತರೆ ಶಾಲೆಗಳಿಗೆ ಸಾಲಭಾವಿ ಶಾಲೆ ಬಹಳ ಮಾದರಿಯಾಗಿದೆ.

ಇಂತಹ ವಿನೂತನ ಪ್ರಯೋಗಗಳಿಂದ ಮಕ್ಕಳಲ್ಲಿ ಉತ್ಸಾಹ ತುಂಬಿ ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸುವಂತೆ ಮಾಡುತ್ತಿದೆ. ಶೈಕ್ಷಣಿಕ ಬೆಳವಣಿಗೆಯಲ್ಲಿ ಗ್ರಾಪಂ ಸದಸ್ಯರು, ಎಸ್‌ಡಿಎಂಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳ ಪಾಲಕರ ಪ್ರೋತ್ಸಾಹ ಇದೆ.-ಶಿವಾನಂದ ಬಾಗವಡಮಠ, ಮುಖ್ಯಶಿಕ್ಷಕ

 ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಲುಗ್ರಾಮಸ್ಥರ ಸಹಕಾರದ ಜೊತೆಗೆ ಶಾಲಾ ಶಿಕ್ಷಕರ ಪರಿಶ್ರಮವು ಸಾಕಷ್ಟಿದೆ. ನಮ್ಮೂರ ಶಾಲೆ ಶೈಕ್ಷಣಿಕವಾಗಿ ಅಭಿವೃದ್ಧಿಗೊಳ್ಳುತ್ತಿರುವುದು ಸಂತಸ ತಂದಿದೆ.ಮಾನಪ್ಪ ಸೂಳಿಕೇರಿ, ಎಸ್‌ಡಿಎಂಸಿ ಅಧ್ಯಕ್ಷ

 

-ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.