ಬೆಳಂದೂರು: ವಿದ್ಯಾರ್ಥಿಗಳಿಗೆ ಭತ್ತ ಬೇಸಾಯದ ಪಾಠ

 ನಮ್ಮ ನಡೆ, ಬೇಸಾಯದ ಕಡೆ ಅಭಿಯಾನ: ಮಕ್ಕಳ ಮಧ್ಯಾಹ್ನದ ಊಟಕ್ಕೆ ಇದೇ ಅಕ್ಕಿ ಬಳಕೆ

Team Udayavani, Nov 23, 2019, 12:56 AM IST

tt-32

ಬೆಳಂದೂರು: ರೋಟರಿ ಕ್ಲಬ್‌ ಬೆಳ್ಳಾರೆ ಟೌನ್‌, ರೋಟರ್ಯಾಕ್ಟ್ ಕ್ಲಬ್‌ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇವುಗಳ ಸಹಭಾಗಿತ್ವದಲ್ಲಿ “ನಮ್ಮ ನಡೆ ಬೇಸಾಯದ ಕಡೆ’ ಅಭಿಯಾನದ ಮೂಲಕ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಣಿಯೂರು ಮಠದ ಗದ್ದೆಯಲ್ಲಿ ಬೆಳೆದ ಭತ್ತದ ಕೃಷಿಯಲ್ಲಿ ಪೈರು ಬೆಳೆದು ಭರಪೂರ ಬೆಳೆ ದೊರಕಿದೆ.

ಈ ಮೂಲಕ ವಿದ್ಯಾರ್ಥಿಗಳಿಗೆ ಜೀವನ ಪಾಠ ದೊರೆತಂತಾಗಿದೆ. ಕಾಲೇಜು ವಿದ್ಯಾರ್ಥಿಗಳ, ಪ್ರಾಚಾರ್ಯರ, ಉಪನ್ಯಾಸಕರ, ಆಡಳಿತ ಮಂಡಳಿಯ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆದ ಸಾರ್ಥಕತೆ. ಕಳೆದ ಆಗಸ್ಟ್‌ ತಿಂಗಳಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳೇ ನಾಟಿ ಮಾಡಿದ ಭತ್ತದ ನೇಜಿ ಬೆಳೆದು ಪೈರಿನಲ್ಲಿ ಭರಪೂರ ಬೆಳೆ ಬಂದಿದೆ. ನ. 19ರಂದು ಪೈರಿನ ಕಟಾವು ನಡೆಯಿತು.

ಈ ಪೈರನ್ನು ಕಾಲೇಜಿನ ವಿದ್ಯಾರ್ಥಿಗಳೇ ಕಟಾವು ಮಾಡಿದರೆ ಉಪನ್ಯಾಸಕರು ಭತ್ತ ಬೇರ್ಪಡಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಇದರಲ್ಲಿ ಪಡೆದ ಭತ್ತವನ್ನು ಕಾಲೇಜಿನ ಮಧ್ಯಾಹ್ನದ ಊಟಕ್ಕೆ ಬಳಸುವ ಯೋಜನೆಯಂತೆ ನಾಟಿ ಮಾಡಲಾಗಿತ್ತು. ಪಾಠ, ಪ್ರವಚನದೊಂದಿಗೆ ಬದುಕಿನ ಪಾಠದಲ್ಲೂ ತೊಡಗಿಸಿಕೊಂಡಿರುವ ಇಲ್ಲಿನ ವಿದ್ಯಾರ್ಥಿಗಳ ಸಾಧನೆಗೆ ಈಗ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು ಆಸಕ್ತಿಯಿಂದಲೇ ಕಟಾವು ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.

ಅರಿವು ಮೂಡಿಸುವ ಕಾರ್ಯ
ಯುವಜನತೆಗೆ ಭತ್ತದ ಬೇಸಾಯದ ಕುರಿತು ಅರಿವು ಕಡಿಮೆ. ಅಂಗಡಿ, ಮುಂಗಟ್ಟುಗಳಿಂದ ಅಕ್ಕಿಯನ್ನು ತರಿಸಿ ಊಟ ಮಾಡಲಾಗುತ್ತದೆ ಎಂಬುದಷ್ಟೇ ತಿಳಿದಿದೆ. ಕಾಲೇಜಿನ ವತಿಯಿಂದ ನೇಜಿ ನಾಟಿಯಿಂದ ಹಿಡಿದು ಪೈರು ಕಟಾವಿನ ವರೆಗೆ ಯಾವ ರೀತಿ ಜತನದಿಂದ ಭತ್ತದ ಬೆಳೆ ಬೆಳೆಯಬೇಕೆಂಬ ನಿಟ್ಟಿನಲ್ಲಿ ಈ ಗದ್ದೆ ಬೇಸಾಯ ಅರಿವು ಮೂಡಿಸಿದೆ.
 - ವಿಶ್ವನಾಥ ಮಾರ್ಕಜೆ, ಅಧ್ಯಕ್ಷರು, ರಕ್ಷಕ-ಶಿಕ್ಷಕ ಸಂಘ, ಸ.ಪ್ರ.ದ. ಕಾಲೇಜು, ಬೆಳಂದೂರು

ಬೆಳೆಯಿಂದ ಉತ್ತಮ ಫ‌ಸಲು
ಕಾಣಿಯೂರು ಮಠದ ಗದ್ದೆಯಲ್ಲಿ ವಿದ್ಯಾರ್ಥಿಗಳೇ ಸ್ವತಃ ನಾಟಿ ಮಾಡಿದ ನೇಜಿ ಉತ್ತಮ ಫ‌ಸಲು ನೀಡಿದೆ. ವಿದ್ಯಾರ್ಥಿಗಳೇ ಪೈರು ಕಟಾವು ಮಾಡಿದ್ದಾರೆ. ವಿದ್ಯಾರ್ಥಿಗಳಿಗೂ ನಮಗೂ ಇದೊಂದು ಸಾರ್ಥಕ ಕ್ಷಣ. ವಿದ್ಯಾರ್ಥಿಗಳು ಕಟಾವು ಮಾಡಿದರೆ, ಉಪನ್ಯಾಸಕರು ಭತ್ತ ಬೇರ್ಪಡಿಸಿದರು. ಈ ಮೂಲಕ ಬದುಕಿನ ಶಿಕ್ಷಣ ದೊರೆದಂತಾಗಿದೆ. ಭತ್ತದಿಂದ ಪಡೆದ ಅಕ್ಕಿಯನ್ನು ಕಾಲೇಜಿನಲ್ಲಿ ನಡೆಯುವ ಮಧ್ಯಾಹ್ನದ ಊಟಕ್ಕೆ ಬಳಸಿಕೊಳ್ಳಲಾಗುತ್ತದೆ. ಕಾಲೇಜಿನ ಆವರಣದಲ್ಲಿ ತರಕಾರಿಯನ್ನೂ ಬೆಳೆಸಲಾಗುತ್ತದೆ. ಗದ್ದೆ ನೀಡಿದ ಕಾಣಿಯೂರು ಮಠದವರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.
 - ಪ್ರೊ| ಪದ್ಮನಾಭ ಕೆ. ಪ್ರಾಚಾರ್ಯರು, ಸ.ಪ್ರ.ದ. ಕಾಲೇಜು, ಬೆಳಂದೂರು

ತಿಳಿಹೇಳುವ ಕಾರ್ಯ
ಬೇಸಾಯ ಎಂದರೆ ಏನು, ಅಕ್ಕಿಯನ್ನು ಯಾವ ರೀತಿ ಶ್ರಮ ವಹಿಸಿ ಮಾಡಲಾಗುತ್ತದೆ ಎಂಬು ದನ್ನು ತಿಳಿ ಹೇಳುವುದಕ್ಕಾಗಿ ಮತ್ತು ಮುಂದಿನ ಪೀಳಿಗೆ ಭತ್ತದ ಬೇಸಾಯವನ್ನು ಮುಂದುವರಿ ಸಲು ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಈ ಕಾರ್ಯ ಮಾಡಲಾಗಿದೆ.
– ಶ್ರೀಧರ ರೈ ಮಾದೋಡಿ, ಸದಸ್ಯರು ಕಾಲೇಜು ಅಭಿವೃದ್ಧಿ ಸಮಿತಿ, ಬೆಳಂದೂರು

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.