ಯೂ ಟರ್ನ್ ಹೊಡೆದ ಎನ್ ಸಿಪಿ ಶಾಸಕರು: ಅಜಿತ್ ಬಣದಲ್ಲಿರುವ ಶಾಸಕರೆಷ್ಟು?
Team Udayavani, Nov 23, 2019, 1:33 PM IST
ಮುಂಬೈ: ಶನಿವಾರ ಬೆಳ್ಳಂಬೆಳಗ್ಗೆ ನಡೆದ ಮಹತ್ವದ ಬೆಳವಣಿಗೆಯಲ್ಲಿ ತನ್ನ ಬೆಂಬಲಿಗರೊಂದಿಗೆ ಬಿಜೆಪಿಗೆ ನಿಷ್ಠೆ ತೋರಿ ಉಪಮುಖ್ಯಮಂತ್ರಿ ಪಟ್ಟಕ್ಕೇರಿದ ಅಜಿತ್ ಪವಾರ್ ಗೆ ಹೊಸ ಸಂಕಷ್ಟ ಎದುರಾಗಿದೆ.
ಇಂದು ಬೆಳಿಗ್ಗೆ ರಾಜಭವನದಲ್ಲಿ ನಡೆದಿದ್ದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಎನ್ ಸಿಪಿ ಶಾಸಕರು ಮಧ್ಯಾಹ್ನದ ಸುದ್ದಿಗೋಷ್ಠಿಯಲ್ಲಿ ಶರದ್ ಪವಾರ್ ಅವರ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು.
‘’ಅಜಿತ್ ಪವಾರ್ ಅವರು ರಾಜಭವನಕ್ಕೆ ಬರಲು ಹೇಳಿದ್ದರು. ಹಾಗಾಗಿ ನಾವು ಹೋಗಿದ್ದೆವು. ನಮಗೆ ಯಾವುದೇ ಮಾಹಿತಿ ಇರಲಿಲ್ಲ. ಶರದ್ ಪವಾರ್ ಅವರೇ ನಮ್ಮ ನಾಯಕ’’ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.
ಶಿವಸೇನೆ- ಎನ್ ಸಿಪಿ- ಕಾಂಗ್ರೆಸ್ ಗೆ ಈಗಲೂ 170 ಶಾಸಕರ ಬೆಂಬಲವಿದೆ. ಬಿಜೆಪಿ ಮತ್ತು ಅಜಿತ್ ಬೆಂಬಲಿತ ಎನ್ ಸಿಪಿಗೆ ಬಹುಮತವಿಲ್ಲ. ಅಜಿತ್ ಜೊತೆ 10 ರಿಂದ 12 ಶಾಸಕರಿರಬಹುದು ಎಂದು ಶರದ್ ಪವಾರ್ ಹೇಳಿದರು.
288 ಸಂಖ್ಯಾಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 105 ಶಾಸಕರನ್ನು ಹೊಂದಿದೆ. ಸರಳ ಬಹುಮತಕ್ಕೆ ಇನ್ನೂ ಕನಿಷ್ಟ 40 ಶಾಸಕರ ಬೆಂಬಲ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!