ಹೆಡ್ಲೈಟ್ ಬೆಳಕಲ್ಲೇ ನಡೆಯಿತು ನಿಶ್ಚಿತಾರ್ಥ!
Team Udayavani, Nov 24, 2019, 3:04 AM IST
ಕಕ್ಕೇರಾ: ಮೂರು ತಿಂಗಳಿಂದಲೂ ವಿದ್ಯುತ್ ಇಲ್ಲದೆ ಪರದಾಡುತ್ತಿರುವ ನೀಲಕಂಠರಾಯನ ಗಡ್ಡಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹೆಡ್ಲೈಟ್ ಬೆಳಕಿ ನಲ್ಲಿಯೇ ಶುಕ್ರವಾರ ರಾತ್ರಿ ನಿಶ್ಚಿತಾರ್ಥ ಕಾರ್ಯ ಕ್ರಮ ನಡೆದಿದೆ. ಗ್ರಾಮದಲ್ಲಿ ಮಾದಮ್ಮ-ಸೋಮಣ್ಣ ಇಬ್ಬರಿಗೂ ಶುಕ್ರವಾರ ನಿಶ್ಚಿತಾರ್ಥ ನಿಗದಿಯಾಗಿತ್ತು. ಆದರೆ, ವಿದ್ಯುತ್ ಬೆಳಕಿನ ಸಮಸ್ಯೆ ಎದುರಾಗಿದ್ದರಿಂದ ಗ್ರಾಮಸ್ಥರು ಟ್ರ್ಯಾಕ್ಟರ್ ಲೈಟ್ ಬಳಸಿ, ನಿಶ್ಚಿತಾರ್ಥ ಮಾಡಿದ್ದಾರೆ. ಕೃಷ್ಣಾ ನದಿ ಕವಲುಗಳ ನಡುವೆ ನೀಲಕಂಠ ರಾಯನ ಗಡ್ಡಿ ಗ್ರಾಮವಿದೆ.
ಇತ್ತೀಚೆಗೆ ಕೃಷ್ಣಾ ನದಿಗೆ ನಾರಾಯಣಪುರ ಜಲಾಶಯದ ನೀರು ಹರಿಸಿದಾಗ ಪ್ರವಾಹದಿಂದಾಗಿ ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ನೀಲಕಂಠರಾಯನ ಗಡ್ಡಿಗೆ ಸಂಪರ್ಕ ಹೊಂದಿದ ವಿದ್ಯುತ್ ಲೈನ್ ಜೆಸ್ಕಾಂ ಅಧಿಕಾರಿಗಳು ಕಡಿತಗೊಳಿಸಿದ್ದರು. ಮೂರು ತಿಂಗಳಾದರೂ ಇದುವರೆಗೂ ವಿದ್ಯುತ್ ಸಂಪರ್ಕ ಪುನಃ ಕಲ್ಪಿಸಿಲ್ಲ. ಇದರಿಂದ ಗ್ರಾಮಸ್ಥರು ಕತ್ತಲೆಯಲ್ಲಿಯೇ ಜೀವನ ಸಾಗಿಸುವಂತಾಗಿದೆ. ಸೋಲಾರ್ ವಿದ್ಯುತ್ ಇದ್ದರೂ ತಾಂತ್ರಿಕ ದೋಷದಿಂದ ಕೆಟ್ಟಿವೆ.
ಮೊಬೈಲ್ ಸ್ವಿಚ್ಡ್ ಆಫ್: ವಿದ್ಯುತ್ ಇಲ್ಲದ್ದರಿಂದ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದ್ದು, ಸಂವಹನಕ್ಕೆ ಜನರು ಪರದಾಡುವಂತಾಗಿದೆ. ಪ್ರವಾಹ ಅಬ್ಬರಕ್ಕೆ ಇದ್ದ ಪುಟ್ಟ ಸೇತುವೆ ಕೊಚ್ಚಿಕೊಂಡು ಹೋಗಿ ಸಂಚಾರಕ್ಕೂ ತೊಂದರೆಯಾಗಿದೆ. ರಾತ್ರಿ ವೇಳೆ ಸಮಸ್ಯೆಯಾದರೆ ಜೀವಕ್ಕೆ ಸಂಚಕಾರವಿದೆ. ಆದ್ದರಿಂದ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ ಗ್ರಾಮಸ್ಥರಾದ ಅಮರಪ್ಪ, ಕನಕಪ್ಪ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ