ಬೈಕ್‌ ರಕ್ಷಿಸಿದ ಪೊಲೀಸರ ಮೇಲೇ ಕಳವು ಆರೋಪ!


Team Udayavani, Nov 24, 2019, 3:07 AM IST

byke-rakshi

ಬೆಂಗಳೂರು: ರಾಜಾಜಿನಗರದ ಒರಾಯನ್‌ ಮಾಲ್‌ ಸಮಿಪದ ಮನೆ ಒಂದರ ಮಂದೆ ಕೀ ಸಮೇತ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಂಡ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು, ಯಾರಾದರೂ ಕದ್ದೊಯ್ಯಬಹುದೆಂದು ಭಾವಿಸಿ ತಾವೇ ಠಾಣೆಗೆ ಕೊಂಡೊಯ್ದ ಘಟನೆ ಶುಕ್ರವಾರ ತಾತ್ರಿ ನಡೆದಿದೆ.

ಆದರೆ, ಶನಿವಾರ ಬೆಳಗ್ಗೆ ಎದ್ದು ಸಿಸಿ ಕ್ಯಾಮೆರಾ ದೃಶ್ಯಾವಳಿ ಚೆಕ್‌ ಮಾಡಿದ ಬೈಕ್‌ ಮಾಲೀಕ, ಪೊಲೀಸರೇ ಬೈಕ್‌ ಕದ್ದಿದ್ದಾರೆ ಎಂದು ಆರೋಪಿಸಿ ದೂರು ನೀಡಲು ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಗೆ ಹೋಗಿ, ಅಲ್ಲಿ ತಮ್ಮ ಬೈಕ್‌ ಕಂಡು ಶಾಕ್‌ ಆಗಿದ್ದಾರೆ. ಶುಕ್ರವಾರ ರಾತ್ರಿ ದ್ವಿಚಕ್ರವಾಹನವನ್ನು ಠಾಣೆಗೆ ಕೊಂಡೊಯ್ದ ಪೊಲೀಸರು, ಮರುದಿನ ಪ್ರಕರಣ ದಾಖಲಿಸಿಕೊಂಡು, ಶನಿವಾರ ಠಾಣೆಗೆ ಬಂದ ಮಾಲೀಕರಿಗೆ ವಾಹನ ಹಸ್ತಾಂತರಿಸಿದ್ದಾರೆ.

ಇತ್ತೀಚೆಗೆ ರಾಜಾಜಿನಗರ ಒರಾಯನ್‌ ಮಾಲ್‌ ಹಾಗೂ ಸ್ವಾಮಿ ವಿವೇಕಾನಂದ ಕಾಲೇಜು ಸುತ್ತಮುತ್ತ ದ್ವಿಚಕ್ರ ವಾಹನಗಳ ಕಳವು ಪ್ರಕರಣಗಳು ಹೆಚ್ಚಾಗಿದ್ದವು. ಅಲ್ಲದೆ, ಕೆಲವರು ಬೀಗವನ್ನು ಬೈಕ್‌ನಲ್ಲೇ ಬಿಟ್ಟು ಹೋಗುತ್ತಿದ್ದರು. ಇಂತಹ ವಕಾಶಕ್ಕಾಗಿ ಕಾದು ಕುಳಿತಿರುತ್ತಿದ್ದ ಕಳ್ಳರು, ಕೀ ಬಿಟ್ಟು ಹೋದ ಬೈಕ್‌ಗಳನ್ನು ಪತ್ತೆಹಚ್ಚಿ, ನಾಯಾಸವಾಗಿ ಬೈಕ್‌ ಕಳವು ಮಾಡಿ ಪರಾರಿಯಾಗುತ್ತಿದ್ದರು. ಹೀಗಾಗಿ ಕೆಲ ತಿಂಗಳಿಂದ ಈ ವ್ಯಾಪ್ತಿಯಲ್ಲಿ ಸಿಬ್ಬಂದಿ ನಿಯೋಜಿಸಿ ಕಳ್ಳರ ಮೇಲೆ ನಿಗಾ ಇರಿಸಲಾಗಿತ್ತು.

ಈ ಮಧ್ಯೆ ಶುಕ್ರವಾರ ರಾತ್ರಿ ಪಾಳಿಯಲ್ಲಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿ, ಒರಾಯನ್‌ ಮಾಲ್‌ ಪಕ್ಕದ ಆರ್‌.ಪಿ.ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಕೀ ಸಮೇತ ಬೈಕ್‌ವೊಂದು ಮನೆ ಮುಂಭಾಗ ನಿಂತಿತ್ತು. ಕಳ್ಳರ ಕಣ್ಣಿಗೆ ಬೀಳುವ ಮುನ್ನವೇ ಬೈಕನ್ನು ಠಾಣೆಗೆ ಕೊಂಡೊಯ್ದ ಸಿಬ್ಬಂದಿ, ಠಾಣೆಯ ಹಿರಿಯ ಸಿಬ್ಬಂದಿಗೆ ಮಾಹಿತಿ ನೀಡಿ ಮನೆಗೆ ತೆರಳಿದ್ದರು.

ಶನಿವಾರ ಬೆಳಗ್ಗೆ ಮನೆಯಿಂದ ಹೊರಬಂದ ಬೈಕ್‌ ಮಾಲೀಕ, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಇಲ್ಲದಿರುವುದನ್ನು ಕಂಡು ಗಾಬರಿಗೊಂಡಿದ್ದಾರೆ. ಬಳಿಕ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪೊಲೀಸ್‌ ಸಿಬ್ಬಂದಿ ಬೈಕ್‌ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿತ್ತು. ಈ ಸಂಬಂಧ ದೂರು ನೀಡಲು ಠಾಣೆಗೆ ಬಂದ ಬೈಕ್‌ ಮಾಲೀಕನಿಗೆ ಅಚ್ಚರಿ ಕಾದಿತ್ತು. ಏಕೆಂದರೆ, ಅವರ ಬೈಕ್‌ ಠಾಣೆಯ ಆವರಣದಲ್ಲೇ ನಿಂತಿತ್ತು.

ಬಳಿಕ ಪ್ರಕರಣ ದಾಖಲಿಸಿಕೊಂಡು ಕೀ ಸಮೇತ ಬೈಕ್‌ ನಿಲ್ಲಿಸದಂತೆ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಕೀ ಬೈಕ್‌ನಲ್ಲೇ ಇದ್ದಿದ್ದರಿಂದ ಕಳ್ಳರು ಅದನ್ನು ಸುಲಭವಾಗಿ ಕದ್ದೊಯ್ಯಬಹುದೆಂಬ ಕಾರಣಕ್ಕೆ ಮುಂಜಾಗ್ರತೆ ವಹಿಸಿದ ಪೊಲೀಸ್‌ ಸಿಬ್ಬಂದಿ, ದ್ವಿಚಕ್ರವಾಹನವನ್ನು ಪೊಲೀಸ್‌ ಠಾಣೆಗೆ ತಂದು ನಿಲ್ಲಿಸಿದ್ದಾರೆ. ಅವರು ಬೈಕ್‌ ಕಳವು ಮಾಡಿಲ್ಲ ಎಂದು ಸುಬ್ರಹ್ಮಣ್ಯನಗರ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.