ವರ್ಷದ ಹಿಂದೆ ಹೂತಿದ್ದ ಶವ ಮರುಪರೀಕ್ಷೆ


Team Udayavani, Nov 24, 2019, 10:32 AM IST

huballi-tdy-1

ನವಲಗುಂದ: ವರ್ಷದ ಹಿಂದೆ ಹೂಳಿದ್ದ ಅಪರಿಚಿತ ಯುವಕನ ಶವವನ್ನು ಕೊಲೆ ಪ್ರಕರಣ ಸಂಬಂಧ ಮೇಲಕ್ಕೆತ್ತಿ ಮರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವಿದ್ಯಮಾನ ಪಟ್ಟಣದ ರುದ್ರಭೂಮಿಯಲ್ಲಿ ಶನಿವಾರ ನಡೆದಿದೆ.

2018ರ ಡಿ. 4ರಂದು ಇಬ್ರಾಹಿಂಪುರ ಬಳಿ ಮಲಪ್ರಭಾ ಕಾಲುವೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿತ್ತು. ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಪಂಚನಾಮೆ ಮಾಡಿ, ಮರಣೋತ್ತರ ಪರೀಕ್ಷೆ ನಡೆಸಿ ಪಟ್ಟಣದ ರುದ್ರಭೂಮಿಯಲ್ಲಿ ಶವಸಂಸ್ಕಾರ ನಡೆಸಿದ್ದರು. ಯುವಕನ ಪೋಟೋವನ್ನು ರಾಜ್ಯಾದ್ಯಂತ ಎಲ್ಲ ಠಾಣೆಗಳಿಗೆ ಕಳುಹಿಸಿಕೊಡಲಾಗಿತ್ತು.

ಸಾಮ್ಯತೆ: ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದೊಡ್ಡವಾಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಕಟ್ಟಿಯ ಶಿವಪ್ಪ ಬಸಪ್ಪ ಬಿಜ್ಜಣ್ಣವರ(26) ಎಂಬಾತ ಕೊಲೆಯಾದ ಪ್ರಕರಣ ದಾಖಲಾಗಿತ್ತು. ಈತನ ಫೋಟೋಕ್ಕೂ, ಕಾಲುವೆಯಲ್ಲಿ ಶವವಾಗಿ ದೊರೆತಿದ್ದವನ ಫೋಟೋಕ್ಕೂ ಸಾಮ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಹೂಳಿದ್ದ ಶವ ಮೇಲಕ್ಕೆತ್ತಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಹೈದ್ರಾಬಾದ್‌ಗೆ ಸ್ಯಾಂಪಲ್‌: ಹುಬ್ಬಳ್ಳಿ ಕಿಮ್ಸ್‌ ಪ್ರಯೋಗಾಲಯ ತಜ್ಞ ವೈದ್ಯರಾದ ಡಾ| ತಲಯವಾಡು ತಂಡದವರು, ಉಪವಿಭಾಗಾಧಿಕಾರಿ ಮಹಮ್ಮದ್‌ ಜುಬೇರ್‌, ತಹಶೀಲ್ದಾರ್‌ ನವೀನ ಹುಲ್ಲೂರು ನೇತೃತ್ವದಲ್ಲಿ ಮೂರು ತಾಸುಗಳ ಕಾರ್ಯಾಚರಣೆ ಬಳಿಕ ಶವದ ಪಳೆಯುಳಿಕೆ ಹೊರ ತೆಗೆಯಲಾಯಿತು. ಡಿಎನ್‌ಎ ಪರೀಕ್ಷೆಗೆ ಬೇಕಾದ ಮಾದರಿಗಳನ್ನು ಸಂಗ್ರಹಿಸಿ ಹೈದರಾಬಾದ್‌ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು. ಸ್ಥಳದಲ್ಲಿ ಪಿಎಸ್‌ಐ ಜಯಪಾಲ ಪಾಟೀಲ, ಪೊಲೀಸ್‌ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ಮನೆಯವರಿಂದ್ಲೇ ಕೊಲೆಯಾದನೇ!:  ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಕಟ್ಟಿಯ ಶಿವಪ್ಪ ಬಿಜ್ಜಣ್ಣವರ ಕೊಲೆ ಪ್ರಕರಣದಲ್ಲಿ ಆತನ ಕುಟುಂಬದವರೇ ಐವರು ಆರೋಪಿತರಾಗಿದ್ದು, ಬಂಧನಕ್ಕೊಳಗಾಗಿದ್ದಾರೆ. ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮಲಪ್ರಭಾ ಕಾಲುವೆಗೆ ನೂಕಿ ಕೊಲೆ ಮಾಡಿದ್ದಾಗಿ ಅವರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಸಿಪಿಐ ಶ್ರೀಕಾಂತ ತೋಟಗಿ ಅವರಿಗೆ, ನವಲಗುಂದ ಠಾಣೆಯಿಂದ ಬಂದಿದ್ದ ಅಪರಿಚಿತ ಯುವಕನ ಶವದ ಪೋಟೋದೊಂದಿಗೆ ಸಾಮ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ವರ್ಷದ ಹಿಂದೆ ಮಲಪ್ರಭಾ ಕಾಲುವೆಯಲ್ಲಿ ಇಬ್ರಾಹಿಂಪುರ ಬಳಿ ದೊರೆತಿದ್ದ ಶವವನ್ನು ರುದ್ರಭೂಮಿಯಿಂದ ಮೇಲಕ್ಕೆತ್ತಿ ಮರು ಪರೀಕ್ಷೆಗೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.