3 ಕಾಲೇಜಿಗೆ ಹೊಸ ಪರೀಕ್ಷಾ ಕೇಂದ್ರ ಅನುಮತಿ


Team Udayavani, Nov 24, 2019, 12:06 PM IST

bg-tdy-1

ಬೆಳಗಾವಿ: ಮೂರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಬೆಳಗಾವಿ ಜಿಲ್ಲೆಯ ಮೂರು ಕಾಲೇಜುಗಳಿಗೆ ಹೊಸದಾಗಿ ಪರೀಕ್ಷಾ ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ ಎಂದು ಕುಲಪತಿ ಪ್ರೊ| ಎಂ. ರಾಮಚಂದ್ರಗೌಡ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಲ್‌ಇ ಸಂಸ್ಥೆ ಚಿಕ್ಕೋಡಿ ತಾಲೂಕಿನ ಅಂಕಲಿ, ಜೊಲ್ಲೆ ಶಿಕ್ಷಣ ಸಂಸ್ಥೆಯ ನಿಪ್ಪಾಣಿ ಹಾಗೂ ಗೋಕಾಕದ ಎನ್‌ಎಸ್‌ಎಫ್‌ನ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಹೊಸದಾಗಿ ಪರೀಕ್ಷಾ ಕೇಂದ್ರಗಳಿಗೆ ಅನುಮತಿ ನೀಡಲಾಗಿದೆ ಎಂದರು. ಕಾಲೇಜಿನ ಪ್ರಾಚಾರ್ಯರು ಹಾಗೂ ವಿಶ್ವವಿದ್ಯಾಲಯದ ಪ್ರತಿನಿಧಿಗಳು ಪರೀಕ್ಷೆಗಳಲ್ಲಿ ನಕಲು ಮಾಡುವ ವಿವಿ ವ್ಯಾಪ್ತಿಯಲ್ಲಿನ 40ಕ್ಕೂ ಅಧಿಕ ಕಾಲೇಜುಗಳನ್ನು ಈಗಾಗಲೇ ಗುರುತಿಸಿದ್ದಾರೆ. ಇದಲ್ಲದೆ ಐದಾರು ಕಾಲೇಜುಗಳಿಗೆ ತಾವು ಹಾಗೂ ಕುಲಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಪರೀಕ್ಷಾ ಕೇಂದ್ರಗಳಲ್ಲಿ ನಕಲು ಮಾಡಲು ಸಹಕರಿಸುವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ವಿವಿಗೆ ಶಾಶ್ವತ ಜಾಗದ ಸಮಸ್ಯೆ: ಒಂದು ವಿಶ್ವವಿದ್ಯಾಲಯವು ಸಮರ್ಥವಾಗಿ ಕಾರ್ಯನಿರ್ವಹಿಸಲು ಕನಿಷ್ಠ 500 ಎಕರೆ ಜಾಗಬೇಕು. ಆದರೆ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿವಿಗೆ 100 ಎಕರೆ ಮಾತ್ರ ಜಾಗವಿದೆ. ಅದೂ ಸಹ ಕೇಂದ್ರ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವುದರಿಂದ ವಿವಿಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಯಾವುದೇ ಒಂದು ಕಾಮಗಾರಿ ಆರಂಭಿಸಲು ಅರಣ್ಯ ಇಲಾಖೆಯ ಅನುಮತಿ ಬೇಕು. ಈ ಹಿನ್ನೆಲೆಯಲ್ಲಿ ಬೇರೆ ಕಡೆಗೆ ವಿವಿಗೆ ಭೂಮಿ ಗುರುತಿಸಲಾಗಿದೆ.  ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಬಳಿ 127 ಸರ್ಕಾರಿ ಭೂಮಿ ಇದೆ. ಇದಲ್ಲದೆ ಅಲ್ಲಿನ ರೈತರು 90 ಎಕರೆ ಭೂಮಿ ನೀಡಲು ಮುಚ್ಚಳಿಕೆ ಪತ್ರ ನೀಡಿದ್ದಾರೆ ಎಂದು ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಜಾಗದ ಕೊರತೆಯಿಂದ ಸದ್ಯ 19 ವಿವಿಧ ವಿಭಾಗಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. 50ಕ್ಕೂ ಅಧಿಕ ವಿವಿಧ ವಿಷಯಗಳ ಕುರಿತು ವಿಭಾಗಗಳನ್ನು ಆರಂಭಿಸುವ ಕುರಿತು ಚಿಂತನೆ ನಡೆದಿದೆ ಎಂದರು.

ವಿವಿ ಸ್ಥಳಾಂತರದ ಬಗ್ಗೆ ಸಿಂಡಿಕೇಟ್‌ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕುಲಪತಿಗಳು, ವಿವಿ ಸ್ಥಳಾಂತರ ವಿಚಾರವಾಗಿ ಜಿಲ್ಲಾಧಿಕಾರಿಗಳು ಸ್ಥಳ ಗುರುತಿಸುವಂತೆ ಹೇಳಿದ್ದರು. ಅದರಂತೆ ನಾವು ಜಾಗ ಗುರುತಿಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದೇವೆ. ಸರ್ಕಾರಕ್ಕೆ ಜಾಗದ ಕುರಿತು ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ರೈತರ ಜಮೀನು ಪಡೆದ ಬಳಿಕ ಅವರಿಗೆ ವಿವಿಯಿಂದ ಹಣ ನೀಡಬೇಕಾಗುತ್ತದೆ. ಈ ಬಗ್ಗೆ ಸಿಂಡಿಕೇಟ್‌ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಕುಲಸಚಿವ ಪ್ರೊ| ಬಸವರಾಜ ಪದ್ಮಶಾಲಿ, ಪ್ರೊ| ಎಸ್‌.ಎಂ. ಗಂಗಾಧರಯ್ಯ, ಡಾ| ಶೋಭಾ ನಾಯಕ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.