ಮಹಿಳೆಯರಿಗೆ ಉಚಿತ ಕಾನೂನು ನೆರವು


Team Udayavani, Nov 24, 2019, 4:43 PM IST

bg-tdy-4

ಬೈಲಹೊಂಗಲ: ಮಹಿಳೆಯರಿಗಾಗಿ ಉಚಿತ ಕಾನೂನು ನೆರವು ನೀಡಲು ಪ್ರತಿ ತಾಲೂಕು ಹಂತಗಳಲ್ಲಿ ಕಾನೂನು ಸೇವಾ ಸಮಿತಿಗಳಿವೆ. ಇಲ್ಲಿ ಉಚಿತ ಕಾನೂನು ನೆರವು ನೀಡಿ ಮಹಿಳೆಯರಿಗೆ ಕಾನೂನು ಸಂಬಂಧಿ ಸಿದ ವ್ಯಾಜ್ಯ ಕಲಹ ಪರಿಹರಿಸಲು ಸಹಾಯ ನೀಡಲಾಗುವುದೆಂದು ಹಿರಿಯ ದಿವಾಣಿ ನ್ಯಾಯಾಧೀಶೆ ಕಾವೇರಿ ಕಲ್ಮಠ ಹೇಳಿದರು.

ಪಟ್ಟಣದ ಈರಮ್ಮ ಬಸಪ್ಪ ಗಣಾಚಾರಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಅಣಕು ಸಂಸತ್ತು ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಸೇವಾ ಸಮಿತಿಗೆ ಬೆರಳೆಣಿಕೆಯಷ್ಟು ಅರ್ಜಿ ಬರುತ್ತವೆ. ಮಹಿಳೆಯರು ಇದರ ಸದುಪಯೋಗ ಪಡೆಯುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಧಾನ ದಿವಾಣಿ ನ್ಯಾಯಾಧಿಧೀಶೆ ಚೈತ್ರಾ ಎ.ಎಂ ಮಾತನಾಡಿ, ಕಾನೂನು ತಿಳಿವಳಿಕೆ ಇಲ್ಲ ಎಂಬುದು ಕ್ಷಮಿಸಲು ಅರ್ಹ ಹೇಳಿಕೆ ಅಲ್ಲ. ಪ್ರತಿಯೊಬ್ಬರೂ ಅಗತ್ಯ ಕಾನೂನು ಅರಿವು ಹೊಂದಲೇಬೇಕು. ಮಹಿಳೆಯರಿಗೆ ಇರುವ ಉಚಿತ ಕಾನೂನು ನೆರವನ್ನು ಬಳಸಿಕೊಳ್ಳಬೇಕು. ಅಣುಕು ಸಂಸತ್ತು ಸ್ಪರ್ಧೆ ಮೂಲಕ ವಿದ್ಯಾರ್ಥಿಗಳಲ್ಲಿ ಸಂಸದೀಯ ವ್ಯವಸ್ಥೆ ಮಹತ್ವ ಹಾಗೂ ಶಾಸಕಾಂಗದ ಪ್ರಾಮುಖ್ಯತೆ ತಿಳಿಸುವುದು ಸಾಧ್ಯವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸದಸ್ಯ ಡಾ| ಸಿ.ಬಿ. ಗಣಾಚಾರಿ ಮಾತನಾಡಿ, ನಮ್ಮ ಮನೆಯಿಂದಲೇ ಮಹಿಳಾ ಕಾನೂನು ಅರಿವು ಪ್ರಾರಂಭವಾಗಬೇಕು. ಸ್ತ್ರೀ-ಪುರುಷ ತಾರತಮ್ಯ ಮರೆತು ಮಹಿಳೆಯರು ಸಮಾನ ಅವಕಾಶ ಪಡೆಯುವಂತಾಗಬೇಕು. ಅಣಕು ಸಂಸತ್ತು ಕಾರ್ಯಕ್ರಮ ಯುವ ಜನತೆಯಲ್ಲಿ ಸಂಸತ್ತಿನ ಕಲಾಪಗಳ ಬಗ್ಗೆ ತಿಳಿವಳಿಕೆ ಮೂಡಿಸುತ್ತದೆ ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಆರ್‌. ಮೆಳವಂಕಿ, ಅಪರ ಸರಕಾರಿ ವಕೀಲ ರಮೇಶ ಕೋಲಕಾರ್‌, ಕಾರ್ಯದರ್ಶಿ ಡಿ.ವೈ. ಗರಗದ, ಉಪಪ್ರಾಚಾರ್ಯ ಎಸ್‌.ಆರ್‌. ಕಲಹಾಳ, ತಾಲೂಕಿನ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಸ್‌.ಐ. ವೆಂಕಟಪ್ಪನವರು ನಿರೂಪಿಸಿದರು. ಸಂಗಮೇಶ್ವರ ಕುಲಕರ್ಣಿ ವಂದಿಸಿದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.