ಸತ್ತವನ ಹೆಸರಲ್ಲಿ ನಕಲಿ ಗುರುತಿನ ಚೀಟಿ


Team Udayavani, Nov 24, 2019, 5:10 PM IST

Udayavani Kannada Newspaper

ಮಂಡ್ಯ: ಸತ್ತವನ ಹೆಸರಲ್ಲಿ ನಕಲಿ ಚುನಾವಣಾ ಗುರುತಿನ ಚೀಟಿ ಸೃಷ್ಟಿಸಿ ಆತನಿಗೆ ಸೇರಿದ ಎರಡು ಎಕರೆ ಜಮೀನನ್ನು ಹಲವರು ಕಬಳಿಸಿರುವ ಸಂಗತಿ ನಾಗಮಂಗಲ ತಾಲೂಕು ಹೊಣಕೆರೆ ಹೋಬಳಿ ಪಡುವಲಪಟ್ಟಣ ಗ್ರಾಮದಲ್ಲಿ ನಡೆದಿದೆ.

ಈ ಸಂಬಂಧ 11 ಮಂದಿ ಆರೋಪಿಗಳ ವಿರುದ್ಧ ಗೊಲ್ಲರಹಳ್ಳಿ ಗ್ರಾಮದ ಚಿನ್ನೇಗೌಡರ ಪತ್ನಿ ಸರೋಜಮ್ಮ ಅವರು ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ಮಾರುತಿ ಸ್ಟೋನ್‌ ಕ್ರಷರ್‌ ಪಾಲುದಾರರಾದ ಕೆ.ಎಂ. ರವಿ, ಎಚ್‌.ಬಿ.ಪ್ರಕಾಶ್‌, ಎಸ್‌.ನಂಜಪ್ಪ, ಚನ್ನರಾಯಪಟ್ಟಣದ ಡಿ.ಆರ್‌. ರವಿಕುಮಾರ್‌, ಪಡುವಲಪಟ್ಟಣದ

ಎಚ್‌.ಪಿ.ಕೃಷ್ಣಪ್ಪ, ಬಂಕಾಪುರ ಗ್ರಾಮದ ಲಕ್ಷ್ಮಮ್ಮ, ಮಕ್ಕಳಾದ ಬಿ.ಕೆ.ಬೋರೇಗೌಡ, ಬಿ.ಕೆ.ಮರೀಗೌಡ, ಬಿ.ಕೆ.ನಂಜೇಗೌಡ, ಲಕ್ಷ್ಮಮ್ಮ ಸೊಸೆಯಂದಿರಾದ ಕಾಮಾಕ್ಷಮ್ಮ, ಭಾಗ್ಯಮ್ಮ, ಕಲಾವತಿ ವಿರುದ್ಧ ಸರೋಜಮ್ಮ ದೂರು ದಾಖಲಿಸಿದ್ದಾರೆ.

ಏನಿದು ಪ್ರಕರಣ?:  ನಾಗಮಂಗಲ ತಾಲೂಕಿನ ಗೊಲ್ಲರಹಳ್ಳಿ ಗ್ರಾಮದ ಹಳೇ ಸ.ನಂ.5ರ (ಹೊಸ ಸರ್ವೆ ನಂ.34) ಪಡುವಲಪಟ್ಟಣ ಗ್ರಾಮದ ವಾಸಿ ಹೊನ್ನೇಗೌಡರಿಗೆ ದರಖಾಸ್ತು ಆಧಾರದ ಮೇಲೆ 1961ನೇ ಸಾಲಿನಲ್ಲಿ ಸರ್ಕಾರದಿಂದ ಷರತ್ತಿಗೊಳಪಟ್ಟು ಎರಡು ಎಕರೆ ಜಮೀನು ಮಂಜೂರಾಗಿತ್ತು. ನಂತರ ಈ ಜಮೀನನ್ನು ಹೊನ್ನೇಗೌಡರು ಬಂಕಾಪುರ ಗ್ರಾಮದ ವಾಸಿ ನಂಜೇಗೌಡರಿಗೆ 1973ರಲ್ಲಿ ಆಧಾರ ಮಾಡಿದ್ದು, ನಂತರ 1974ರಲ್ಲಿ ಕ್ರಯ ಮಾಡಿಕೊಡಲಾಗಿದೆ. ಆದರೆ, ಸರ್ಕಾರದ ದರಖಾಸ್ತು ಷರತ್ತನ್ನು ಪಾಲಿಸದೆ ಮುಂಗಡವಾಗಿ ಜಮೀನನ್ನು ಮಾರಾಟ ಮಾಡಿದ್ದರಿಂದ ನಂಜೇಗೌಡರಿಗೆ ಇದುವರೆಗೂ ಖಾತೆಯಾಗದೆ ಆರ್‌ ಟಿಸಿಯು ಹೊನ್ನೇಗೌಡರ ಹೆಸರಿನಲ್ಲೇ ಮುಂದುವರಿದಿದೆ.

1988ರಲ್ಲಿ ಜಮೀನಿನ ಮಾಲೀಕ ಹೊನ್ನೇಗೌಡರು ನಿಧನರಾಗಿದ್ದಾರೆ. ಬಳಿಕ ಆರೋಪಿಗಳೆಲ್ಲರೂ ಜಮೀನನ್ನು ಕಬಳಿಸುವ ಉದ್ದೇಶದಿಂದ ಜಮೀನಿನ ವಾರಸುದಾರ ಹೊನ್ನೇಗೌಡರು ಮೃತರಾಗಿದ್ದರೂ ಪಡುವಲಪಟ್ಟಣ ಗ್ರಾಮದ ವಾಸಿ ದಾನಮ್ಮನ ಹಾರುವೇಗೌಡರ ಮಗ ಕೃಷ್ಣಪ್ಪ ಅವರನ್ನು ಮೃತ ಹೊನ್ನೇಗೌಡ ಎಂದು ಬಿಂಬಿಸಿ ನಕಲಿ ಚುನಾವಣಾ ಗುರುತಿನ ಚೀಟಿ ಮಾಡಿಸಿದ್ದಾರೆ. ಬಳಿಕ ಬಂಕಾಪುರ ಗ್ರಾಮದ ಕುಳ್ಳೇಗೌಡನ ಹೆಂಡತಿ ಲಕ್ಷ್ಮಮ್ಮ ಅವರಿಗೆ 2016ರ ಆಗಸ್ಟ್‌ ನಲ್ಲಿ ಬೋಗಸ್‌ ಕ್ರಯ ಮಾಡಿದ್ದಾರೆ. ನಂತರ ಅದೇ ವರ್ಷದ ಅಕ್ಟೋಬರ್‌ನಲ್ಲಿ ಲಕ್ಷ್ಮಮ್ಮರವರು ತಮ್ಮ ಮೂವರು ಗಂಡುಮಕ್ಕಳೊಂದಿಗೆ ಗೊಲ್ಲರಹಳ್ಳಿ ಗ್ರಾಮದ ನಂಜಪ್ಪರವರಿಗೆ ಭೋಗ್ಯಪತ್ರ ಮಾಡಿಕೊಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭೋಗ್ಯವಾಗಿ ಪಡೆದ ಜಮೀನನ್ನು ನಂಜಪ್ಪರವರು ಹೊಸೂರು ಗ್ರಾಮದ ಪ್ರಕಾಶ್‌ ಮತ್ತು ಬಂಕಾಪುರ ಗ್ರಾಮದ ಕೆ.ಎಂ.ರವಿ ಅವರೊಂದಿಗೆ ಪಾಲುದಾರಿಕೆ ಮಾಡಿ ಕೊಂಡು ಮಾರುತಿ ಸ್ಟೋನ್‌ ಕ್ರಷರ್‌ ಮತ್ತು ಎಂ-ಸ್ಯಾಂಡ್‌ ಕಂಪನಿಯನ್ನು ಯಾವುದೇ ಪರವಾನಗಿ ಪಡೆಯದೆ, ಹಾಗೂ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಲು ಭೂ ಪರಿವರ್ತನೆಯನ್ನು ಮಾಡಿಸದೆ ಆರೋಪಿಗಳು ಜಮೀನನ್ನು ಒತ್ತುವರಿ ಮಾಡಿಕೊಂಡು ತೊಂದರೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

2019ರಲ್ಲಿ ಬೋಗಸ್‌ ಕ್ರಯದ ರೂಪದಲ್ಲಿ ಪಡೆದಿದ್ದ ಜಮೀನನ್ನು ಲಕ್ಷ್ಮಮ್ಮ ಅವರು ತಮ್ಮ ಮೂವರು ಸೊಸೆಯಂದಿರಿಗೆ ದಾನಪತ್ರ ಮೂಲಕ ರಿಜಿಸ್ಟರ್‌ ಮಾಡಿಸಿದ್ದಾರೆ. ನಂತರ ಅದೇ ವರ್ಷ ಲಕ್ಷ್ಮಮ್ಮ ಹಾಗೂ ಅವರ ಮೂವರು ಸೊಸೆಯಂದಿರು ಸೇರಿಕೊಂಡು ಜಮೀನನ್ನು ಚನ್ನರಾಯಯಪಟ್ಟಣದ ರವಿಕುಮಾರ್‌ ಅವರಿಗೆ ಮಾರಾಟ ಮಾಡಿದ್ದಾರೆ ಎಂದು ದೂರಲಾಗಿದೆ. ಅಕ್ರಮವಾಗಿ ಸರ್ಕಾರದ ದರಖಾಸ್ತು ಜಮೀನನ್ನು ಕಬಳಿಸಿರುವುದಲ್ಲದೆ, ವಿನಾ ಕಾರಣ ನಮಗೆ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರೋಜಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.