ಹೆಬ್ಬಾಳಕರ ಬಿಜೆಪಿ ಸೇರುವ ಸಾಧ್ಯತೆ: ಸವದಿ
Team Udayavani, Nov 25, 2019, 3:00 AM IST
ಅಥಣಿ: ಬೆಳಗಾವಿ ರಾಜಕಾರಣ ಬದಲಾಗಬೇಕು. ಇದು ರಾಜಕೀಯ ಧೃವೀಕರಣ ಎಂದಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಬಹುಶಃ ಅವರು ಬಿಜೆಪಿಗೆ ಬಂದರೂ ಬರಬಹುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ಸ್ವಗೃಹದಲ್ಲಿ ಮಾತನಾಡಿ, ಎಲ್ಲಾದರೂ ಅವಕಾಶ ಸಿಕ್ಕರೆ ಅವರೊಂದಿಗೆ ಮಾತನಾಡುತ್ತೇನೆ. ಅವರಿಗೂ ಬಿಜೆಪಿ ಬರುವ ಇಚ್ಛೆ ಇದ್ದರೆ ನಾವು ಸ್ವಾಗತಿಸುತ್ತೇವೆ. ಇನ್ನು ಕಾಂಗ್ರೆಸ್ನಲ್ಲಿ ಅನುದಾನಕ್ಕಾಗಿ ಕೈ-ಕಾಲು ಹಿಡಿಯುವ ಸಂಸ್ಕೃತಿ ಇದೆ. ಇದರಿಂದಾಗಿಯೇ 17 ಜನ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದಾರೆ ಎಂದರು.
ಇನ್ನೂ 35 ಜನ ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಖಾಲಿ ಮಾಡುತ್ತೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದು ಸರಿಯಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಉಸಿರುಗಟ್ಟುವ ವಾತಾವರಣ ಇದ್ದಿದ್ದರಿಂದ ಸಾಕಷ್ಟು ಶಾಸಕರು ಕಾಂಗ್ರೆಸ್ ಬಿಟ್ಟು ಬಂದಿದ್ದಾರೆ.
ಇನ್ನೂ ಕೆಲ ಶಾಸಕರು ಹೊರಗೆ ಬಂದರೂ ಬರಬಹುದು. ಅದರಲ್ಲಿ ಆಶ್ಚರ್ಯವೆನಿಲ್ಲ. ಕಾಂಗ್ರೆಸ್ನಲ್ಲಿ ಗುಂಪುಗಾರಿಕೆ ಇದೆ. ಖರ್ಗೆ ಅವರದ್ದು ಒಂದು ಗುಂಪು, ಸಿದ್ದರಾಮಯ್ಯ ಅವರದ್ದು ಮತ್ತೂಂದು, ಪರಮೇಶ್ವರ ಅವರದ್ದು ಇನ್ನೊಂದು. ಹೀಗೆ ಒಬ್ಬೊಬ್ಬರದ್ದು ಒಂದು ಗುಂಪಿನಿಂದಾಗಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ