“ಮನುಕುಲದ ಸೇವೆಗಾಗಿ ಅವತರಿಸಿದ ಯೇಸುಸ್ವಾಮಿ’

ಉಡುಪಿ ಧರ್ಮಪ್ರಾಂತ್ಯ: ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

Team Udayavani, Nov 25, 2019, 5:13 AM IST

UDPI1

ಉಡುಪಿ: ಉಡುಪಿ ಕೆಥೊಲಿಕ್‌ ಧರ್ಮಪ್ರಾಂತದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಮತ್ತು ಕ್ರಿಸ್ತರಾಜರ ಮಹೋತ್ಸವವು ರವಿವಾರ ಕಲ್ಯಾಣಪುರದ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಜರಗಿತು.

ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಅವರು ಪರಮಪ್ರಸಾದ ಮೆರವಣಿಗೆ ಮತ್ತು ಪ್ರಧಾನ ಬಲಿಪೂಜೆಯ ನೇತೃತ್ವ ವಹಿಸಿ ಆಶೀರ್ವಚನ ನೀಡಿದರು.

ಯೇಸು ಸ್ವಾಮಿಯು ತನ್ನ ಸೇವೆಯನ್ನು ಬಯಸಿ ಈ ಜಗತ್ತಿಗೆ ಬಂದುದಲ್ಲ. ಬದಲಾಗಿ ಸೇವೆಯನ್ನು ನೀಡಲು ಬಂದರು. ತನ್ನ ಸೇವಾ ಮನೋಭಾವದೊಂದಿಗೆ ತನ್ನನ್ನು ಶಿಲುಬೆಯಲ್ಲಿ ಸಮರ್ಪಿಸಿಕೊಂಡರು. ಯೇಸು ಸ್ವಾಮಿ ಈ ಭೂಮಿಯಲ್ಲಿ ತನ್ನ ರಾಜ್ಯವನ್ನು ವಿಸ್ತರಿಸಲಿಲ್ಲ. ಬದಲಾಗಿ ನಮ್ಮ ಪಾಪಗಳಿಗೆ ಮುಕ್ತಿ ನೀಡಿದರು. ಅದೇ ಯೇಸು ಸ್ವಾಮಿ ಆಶಿಸಿದ ಶಾಂತಿಯ ರಾಜ್ಯ ಸ್ಥಾಪನೆಗೆ ಪ್ರತಿಯೊಬ್ಬರೂ ಸದಾ ಕಟಿಬದ್ಧರಾಗಿರಬೇಕಾಗಿದೆ ಎಂದರು.

ಪರಮಪ್ರಸಾದವನ್ನು ಸಾಲಂಕೃತ ತೆರೆದ ವಾಹನದಲ್ಲಿ ಮಿಲಾಗ್ರಿಸ್‌ ಕ್ಯಾಥೆಡ್ರಲ್‌ನಿಂದ ಸಂತೆಕಟ್ಟೆ ಮೌಂಟ್‌ ರೋಸರಿ ಚರ್ಚಿನ ತನಕ ಮೆರವಣಿಗೆಯಲ್ಲಿ ನಡೆಸಲಾಯಿತು.ಬಳಿಕ ಅತ್ತೂರು ಸಂತ ಲಾರೆನ್ಸ್‌ ಬೆಸಿಲಿಕಾದ ಸಹಾಯಕ ಧರ್ಮಗುರು ವಂ| ಮೆಲ್ವಿಲ್‌ ರೋಯ್‌ ಲೋಬೋ ಪ್ರವಚನ ನೀಡಿದರು.

ಉಡುಪಿ ಧರ್ಮಪ್ರಾಂತ ವ್ಯಾಪ್ತಿಯ 52 ಚರ್ಚ್‌ಗಳಿಂದ ಸುಮಾರು 2,500ಕ್ಕೂ ಅಧಿಕ ಮಂದಿ ಭಕ್ತರು, 45ಕ್ಕೂ ಅಧಿಕ ಧರ್ಮಗುರುಗಳು, 100ಕ್ಕೂ ಅಧಿಕ ಧರ್ಮಭಗಿನಿಯರು ಭಾಗವಹಿಸಿದ್ದರು.

ಉಡುಪಿ ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊ| ಬ್ಯಾಪಿಸ್ಟ್‌ ಮಿನೇಜಸ್‌, ಕುಲಪತಿ ರೆ| ಸ್ಟಾನಿ ಬಿ. ಲೋಬೊ, ಕಾರ್ಕಳ ವಲಯದ ಪ್ರಧಾನ ಧರ್ಮಗುರು ರೆ| ಜೊಸ್ವಿ ಫೆರ್ನಾಂಡಿಸ್‌, ಉಡುಪಿ ವಲಯ ಪ್ರಧಾನ ಧರ್ಮಗುರು ರೆ| ವಲೇರಿಯನ್‌ ಮೆಂಡೊನ್ಸಾ, ಸಂತೆಕಟ್ಟೆ ಮೌಂಟ್‌ ರೋಸರಿ ಚರ್ಚಿನ ಪ್ರಧಾನ ಧರ್ಮಗುರು ರೆ| ಡಾ| ಲೆಸ್ಲಿ ಡಿ’ಸೋಜಾ, ಮಿಲಾಗ್ರಿಸ್‌ ಕ್ಯಾಥೆಡ್ರಲ್‌ನ ಸಹಾಯಕ ಧರ್ಮಗುರು ರೆ| ಕೆನ್ಯೂಟ್‌ ನೊರೊನ್ಹಾ, ಅತ್ತೂರು ಸಂತ ಲಾರೆನ್ಸ್‌ ಬಾಸಿಲಿಕದ ರೆ| ಜೋರ್ಜ್‌ ಡಿ’ಸೋಜಾ ಉಪಸ್ಥಿತರಿದ್ದರು.

ಉಡುಪಿ ಧರ್ಮಪ್ರಾಂತದ ಸೆನೆಟ್‌ ಸಭೆಯ ಕಾರ್ಯದರ್ಶಿ ವಂ| ಅನಿಲ್‌ ಪ್ರಕಾಶ್‌ ವಂದಿಸಿದರು.

ಬಡ ಕುಟುಂಬಗಳಿಗೆ ನಿವೇಶನ
ಮುಂದಿನ 2020ರ ವರ್ಷದಲ್ಲಿ ವಿಶೇಷ ಯೋಜನೆಯನ್ನು ರೂಪಿಸಲಾಗಿದೆ. ಉಡುಪಿ ಧರ್ಮಪ್ರಾಂತ ವ್ಯಾಪ್ತಿಯಲ್ಲಿ ಬರುವ ಚರ್ಚುಗಳಲ್ಲಿ ನಿವೇಶನ ಇದ್ದು ಸ್ವಂತ ಮನೆ ಕಟ್ಟಿಕೊಳ್ಳಲು ಅಶಕ್ತರಾಗಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ವಿಶೇಷ ಯೋಜನೆ ಒಂದು ವರ್ಷ ನಿರಂತರವಾಗಿ ನಡೆಯಲಿದೆ. ಧರ್ಮಪ್ರಾಂತದ ಸಂತ ವಿನ್ಸೆಂಟ್‌ ಡಿ. ಪಾವ್‌É ಸೊಸೈಟಿ ಇದರ ನೇತೃತ್ವ ವಹಿಸಿದೆ ಎಂದು ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೊ ಹೇಳಿದರು.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.