ಮೀಸಲಾತಿ ಒಂದು ವರ್ಗದ ಪ್ರಾಯಶ್ಚಿತ


Team Udayavani, Nov 25, 2019, 3:08 AM IST

misalati

ಬೆಂಗಳೂರು: ಮೀಸಲಾತಿ ಎಂಬುದು ಸಮಾಜದ ಒಂದು ವರ್ಗಕ್ಕೆ ಕೊಟ್ಟ ಕೊಡುಗೆ ಅಲ್ಲ. ಭಾರತದ ಅತಿ ದೊಡ್ಡ ಸಮಾಜ ಶತಮಾನಗಳಿಂದ ಒಂದು ವರ್ಗಕ್ಕೆ ಮಾಡಿದ ಅನ್ಯಾಯಕ್ಕೆ ತಾನು ಮಾಡಿಕೊಳ್ಳುತ್ತಿರುವ ಪ್ರಾಯಶ್ಚಿತ್ತ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅಭಿಪ್ರಾಯಪಟ್ಟರು.

ನವ ಬೆಂಗಳೂರು ಫೌಂಡೇಷನ್‌ ನಗರದ ಆರ್‌.ವಿ. ಟೀಚರ್ಸ್‌ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ “ಭಾರತೀಯ ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ದೊಡ್ಡ ವರ್ಗ ಒಂದರ ಪಟ್ಟಭದ್ರ ಹಿತಾಸಕ್ತಿಯು ಮತ್ತೂಂದು ವರ್ಗವನ್ನು ಸಂಸ್ಕೃತಿ, ಧರ್ಮದ, ಪರಂಪರೆ, ಸಂಪ್ರದಾಯದ ಹೆಸರಿನಲ್ಲಿ ಸಮಾಜದಿಂದ ಸಾವಿರಾರು ವರ್ಷಗಳು ದೂರವಿಟ್ಟು ಅನ್ಯಾಯ ಮಾಡಿತು.

ಸಮಾಜದಿಂದ ದೂರಾದ ವರ್ಗದ ಅನ್ಯಾಯವನ್ನು ಸರಿಪಡಿಸಲು ಸಂವಿಧಾನದ ಮೂಲಕ ಡಾ.ಬಿ.ಆರ್‌.ಅಂಬೇಡ್ಕರ್‌ ಮೀಸಲಾತಿಯನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ, ಮೀಸಲಾತಿಯನ್ನು ನಮ್ಮ ಪೂರ್ವಜರು ಮಾಡಿರುವ ಅನ್ಯಾಯಕ್ಕೆ ಪ್ರಾಯಶ್ಚಿತ ಎಂದು ಅಥೆìçಸಿಕೊಂಡಾಗ ಮಾತ್ರ ಸಂವಿಧಾನ, ಮೀಸಲಾತಿಯು ಬೇಕು ಎಂಬ ಅಂಶಗಳು ತಲೆಯಲ್ಲಿ ಬರುತ್ತವೆ ಎಂದರು.

ಮೊದಲು ಅಂಬೇಡ್ಕರ್‌ ಅವರನ್ನು ಅರ್ಥ ಮಾಡಿಕೊಳ್ಳಬೇಕು. ಇಂದು ಅನೇಕರಿಗೆ ಮೀಸಲಾತಿ ಕುರಿತಂತೆ ಸಾಕಷ್ಟು ಪ್ರಶ್ನೆಗಳಿದ್ದು, ಆ ಪ್ರಶ್ನೆಗಳಿಗೆ ಅಂಬೇಡ್ಕರ್‌ ಜೀವನವೇ ಉತ್ತರವಾಗಿದೆ. ಯಾವ ಕೊರತೆಯ ಕಾರಣಕ್ಕೆ ಮೀಸಲಾತಿಯನ್ನು ತಂದರು ಎಂದು ಅರ್ಥ ಮಾಡಿಕೊಂಡರೆ ಎಲ್ಲಾ ಪ್ರಶ್ನೆಗಳು ಒಂದು ನಿಮಿಷದಲ್ಲಿ ಮುಗಿಯುತ್ತದೆ ಎಂದರು.

ಅಂದಿನ ಕಾಲಕ್ಕೆ ದೇಶದ ದೊಡ್ಡ ವ್ಯವಸ್ಥೆಯಾಗಿದ್ದ ಕಾಂಗ್ರೆಸ್‌ನಲ್ಲಿ ಅಂಬೇಡ್ಕರ್‌ ನೋವುಗಳಿಗೆ ಬೆಲೆ ಸಿಗಲಿಲ್ಲ. ಭಿನ್ನ ವ್ಯವಸ್ಥೆ ರೂಪಿಸಿಕೊಂಡು ಹೋರಾಟ ಮುಂದುವರೆಸಿದರು. ಅವರ ಒಟ್ಟಾರೆ ಹೋರಾಟಕ್ಕೆ ಸಂವಿಧಾನದ ಮೂಲಕ ಗೆಲುವು ಸಿಕ್ಕಿತು. ಆದರೆ, ಇಂದಿಗೂ ಅನೇಕ ರಾಜಕೀಯ ಪಕ್ಷಗಳು ಅಂಬೇಡ್ಕರ್‌ ಅವರನ್ನು ಗುತ್ತಿಗೆ ತೆಗೆದುಕೊಂಡವರಂತೆ ಮಾತನಾಡುತ್ತವೆ. ಇಂತಹ ಶ್ರೇಷ್ಠ ವ್ಯಕ್ತಿಗೆ ಭಾರತರತ್ನ ನೀಡಲು 1999ರ ವಾಜಪೇಯಿ ಸರ್ಕಾರವೇ ಬರಬೇಕಾಯಿತು ಎಂದು ಕುಟುಕಿದರು.

ಮಣಿಪಾಲ್‌ ಗ್ಲೋಬಲ್‌ ಎಜುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಡಾ.ಮೋಹನ್‌ ದಾಸ್‌ ಪೈ ಮಾತನಾಡಿ, ಶಾಸಕರು, ಸಂಸದರು, ಸಚಿವರು ಯಾವುದೇ ಕಾರಣಕ್ಕೂ ಮುಖ್ಯಸ್ಥರಲ್ಲ. ಅವರು ನಮ್ಮಂತ ಸಾರ್ವಜನಿಕರ ಪ್ರತಿನಿಧಿಗಳು ಎಂಬುದನ್ನು ಸಂವಿಧಾನ ತಿಳಿಸಿದೆ ಎಂದು ಸಂವಿಧಾನದ ರೂಪುರೇಷಗಳ ಕುರಿತು ತಿಳಿಸಿದರು.

ಅಸ್ಪೃಶ್ಯತೆಯ ವಿರುದ್ಧ ಸಂಕಲ್ಪ ಮಾಡಿ: ಅಸ್ಪೃಶ್ಯತೆಗೆ ಸಂವಿಧಾನದ ಮೂಲಕ ಕಾನೂನು ಪರಿಹಾರ ಸಿಕ್ಕಿದೆ ಹೊರತು ನಮ್ಮ ಮನಸ್ಸಿನಿಂದ ಹೊಗಿಲ್ಲ. ಜಾತಿ ಹೆಸರಲ್ಲಿ ಜನರನ್ನು ನೋಡದೇ ಸಮಾನತೆಯಿಂದ ಕಾಣುವ ಮೂಲಕ ಅಸ್ಪೃಶ್ಯತೆ ಆಚರಣೆ ಸಮಾಜದಿಂದಲೇ ದೂರ ತಳ್ಳಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕುಟುಂಬ, ಹಿರಿಯರು ಎಂಬ ನೆಪ ಹೇಳದೆ ಅಸ್ಪೃಶ್ಯತೆಯನ್ನು ಆಲೋಚನೆಯಿಂದಲೇ ಕಿತ್ತು ಹಾಕುತ್ತೇವೆ ಎಂಬ ಸಂಕಲ್ಪ ಮಾಡಬೇಕು ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ತಿಳಿಸಿದರು.

ವೇದಿಕೆ ಕಾರ್ಯಕ್ರಮ ಮಧ್ಯೆಯೇ ಧಿಕ್ಕಾರ!: ವೇದಿಕೆ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಸಭಿಕರ ಮಧ್ಯದಿಂದ ಎಂದ ಅಪರಿಚಿತನೊಬ್ಬ “ಸಂವಿಧಾನ ಅತ್ಯಾಚಾರ ಮಾಡಿದವರಿಗೆ ಸಂವಿಧಾನದ ಬಗ್ಗೆ ಮಾತನಾಡುವ ಹಕ್ಕಿಲ್ಲ, ಧಿಕ್ಕಾರ ಧಿಕ್ಕಾರ’ ಎಂದು ಕೂಗಿದನು. ಕೂಡಲೇ ಪೊಲೀಸರ ವಶಕ್ಕೆ ಪಡೆದು ಸಭಾಂಗಣದಿಂದ ಕರೆದೊಯ್ದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.