ಇಲಿ-ಹೆಗ್ಗಣಗಳಿಗೆ ಆಹಾರವಾಗ್ತಿದೆ ಶುಚಿ


Team Udayavani, Nov 25, 2019, 11:12 AM IST

bk-tdy-3

ಹುನಗುಂದ: ಶಾಲಾ ಹೆಣ್ಣುಮಕ್ಕಳಿಗೆ ಮತ್ತು ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಹಾಗೂ ಗ್ರಾಮೀಣ ಪ್ರದೇಶದ ಕಿಶೋರಿಯರಿಗೆ ಆರೋಗ್ಯ ಇಲಾಖೆ ಮುಖಾಂತರ ಉಚಿತವಾಗಿ ವಿತರಿಸಬೇಕಾದ ಲಕ್ಷಾಂತರ ರೂಪಾಯಿಯ ಶುಚಿ ಸ್ಯಾನಿಟರಿ ನ್ಯಾಪ್ಕಿನ್(ವಿಸ್ಪರ್‌)ಗಳು ಇಲಿ ಹೆಗ್ಗಣಗಳಿಗೆ ಆಹಾರವಾಗಿವೆ.

ತಾಲೂಕು ವೈದ್ಯಾಧಿಕಾರಿ ಹಾಗೂ ಸಂಬಂಧಿಸಿದ ಆರೋಗ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಎಂಟು ತಿಂಗಳಿಂದ ವಿತರಣೆಯಾಗಿಲ್ಲ. ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಧೂಳು ಹಿಡಿದು ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಹೌದು, ಋತುಕಾಲ ಮತ್ತು ಮಾಸಿಕ ಋತುಸ್ರಾವ ಸಂದರ್ಭದಲ್ಲಿ ಮಹಿಳೆಯರು ಮತ್ತು ಹದಿ ಹರೆಯದ ಹೆಣ್ಣು ಮಕ್ಕಳು ಅನುಭವಿಸುತ್ತಿದ್ದ ದೈಹಿಕ ಮತ್ತು ಮಾನಸಿಕ ಅಸುರಕ್ಷತೆ ಸಮಸ್ಯೆ ಮನಗಂಡ ಸರ್ಕಾರ 2017ರಲ್ಲಿ ಶುಚಿ ಯೋಜನೆ ಆರಂಭಿಸಿತ್ತು.

6ನೆಯ ತರಗತಿಯಿಂದ ಕಾಲೇಜು ಮಟ್ಟದವರೆಗಿನ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳ ಮಕ್ಕಳಿಗೆ ಉಚಿತವಾಗಿ ಶುಚಿ ಸ್ಯಾನಿಟರಿ ನ್ಯಾಪ್ಕಿನ್ (ವಿಸ್ಪರ್‌)ಗಳು ವಿತರಿಸಲು ಪ್ರತಿ ವರ್ಷ ಸರ್ಕಾರ ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದೆ. ನ್ಯಾಪ್ಕಿನ್ (ಪ್ಯಾಡ್‌)ಗಳನ್ನು ಆಯಾ ಜಿಲ್ಲಾ ಆಸ್ಪತ್ರೆಯ ಮೂಲಕ ತಾಲೂಕಾ ಆರೋಗ್ಯ ಕೇಂದ್ರಕ್ಕೆ ಸರಬುರಾಜು ಮಾಡುತ್ತಿದ್ದರೂ ಕೂಡಾ ಇಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಬಡ ಮಕ್ಕಳಿಗೆ ಅನುಕೂಲವಾಗಬೇಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಿಸ್ಪರ್‌ ಪಾಕೇಟ್‌ಗಳು ಜೀಡು ಗಟ್ಟಿ ಧೂಳು ಹಿಡಿದು ಮೂಲೆ ಸೇರಿವೆ.

ಒಬ್ಬ ವಿದ್ಯಾರ್ಥಿನಿಗೆ 10 ಪ್ಯಾಕೇಟ್‌ ವಿತರಣೆ ಮಾಡುವ ಯೋಜನೆ-ಶುಚಿ ಯೋಜನೆ ಅಡಿಯಲ್ಲಿ ಒಬ್ಬ ವಿದ್ಯಾರ್ಥಿನಿಗೆ ಒಂದು ವರ್ಷಕ್ಕೆ 10 ಪ್ಯಾಕೇಟ್‌ ನೀಡುವ ಮಹತ್ವದ ಯೋಜನೆ ಇದಾಗಿದ್ದು. ಆಯಾ ಶಾಲಾ ಮಕ್ಕಳ ಸಂಖ್ಯೆ ಆಧರಿಸಿ ಈ ಶುಚಿ ಪ್ಯಾಕೆಟ್‌ ನೀಡುವುದಿದೆ. ಎಂಟು ತಿಂಗಳು ಗತಿಸಿದರೂ ವಿದ್ಯಾರ್ಥಿಗಳ ಕೈ ಸೇರದ ಶುಚಿ ಪ್ಯಾಕೇಟ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ 554 ಶುಚಿ ಸ್ಯಾನಿಟರಿ ನ್ಯಾಪ್ಕಿನ್ (ವಿಸ್ಪರ್‌) ಬಾಕ್ಸ್‌ಗಳು ತಾಲೂಕು ಆಸ್ಪತ್ರೆಗೆ ಬಂದಿದ್ದರೂ ಅವುಗಳನ್ನು ತಾಲೂಕಿನ ವಿವಿಧ ಶಾಲೆಗಳಿಗೆ ವಿತರಣೆ ಮಾಡಿಲ್ಲ. ತಾಲೂಕಿನ ಹಳೆಯ ಆಸ್ಪತ್ರೆಯ ಕಟ್ಟಡ ಒಂದರಲ್ಲಿ ಸಂಗ್ರಹಿಸಿಟ್ಟಿವೆ.

ಸದ್ಯ ಅವುಗಳು ಇಲಿ ಹೆಗ್ಗಣಗಳಿಂದ ಹಾಳಾಗಿ ಹೋಗುತ್ತಿದ್ದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಅವುಗಳ ವಿತರಣೆಗಾಗಿ ಗಮನಹರಿಸುತ್ತಿಲ್ಲ. ಸರ್ಕಾರಿ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ತಲುಪಿಸಲು ಸಾವಿರಾರು ರೂಪಾಯಿ ಖರ್ಚಾಗಲಿದೆ. ಈ ವೆಚ್ಚ ಯಾರು ಭರಿಸುವುದು ಎನ್ನುವುದ್ದಕ್ಕೆ ಸ್ಪಷ್ಟ ಸರ್ಕಾರದ ಆದೇಶವಿಲ್ಲದೇ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ನಡುವಿನ ಈ ಮುಸುಕಿನ ಗುದ್ದಾಟದಲ್ಲಿ ಬಡ ಮಕ್ಕಳಿಗೆ ಅನೂಕೂಲವಾಗಬೇಕಿದ್ದ ನ್ಯಾಪ್ಕಿನ್ (ವಿಸ್ಪರ್‌)ಗಳು ವಿತರಣೆ ಮಾತ್ರ ನೆನೆಗುದಿಗೆ ಬಿದ್ದು ಸರ್ಕಾರದ ಲಕ್ಷಾಂತರ ಮೌಲ್ಯದ ವಸ್ತುಗಳು ಹಾಳಾಗಿ ಹೋಗುತ್ತಿದೆ.

ಎರಡು ವರ್ಷಗಳಿಂದ ವಿತರಣೆಯಾಗಿಲ್ಲ: ಈ ಶುಚಿ ಯೋಜನೆ ಆರಂಭವಾಗಿ ಎರಡು ವರ್ಷಗಳು ಗತಿಸಿದರೂ ಇಲ್ಲಿವರೆಗೂ ನಮ್ಮ ಶಾಲೆಗಳಿಗೆ ಅವುಗಳು ವಿತರಣೆಯಾಗಿಲ್ಲ.  ಅವುಗಳು ಹೇಗಿವೆ ಎನ್ನುವುದು ಸಹ ಗೊತ್ತಿಲ್ಲ ಎನ್ನುತ್ತಿದ್ದಾರೆ ತಾಲೂಕಿನ ಬಹುತೇಕ ಶಾಲೆಯ ಮುಖ್ಯೋಪಾಧ್ಯಾರು. ಈ ರೀತಿ ವಿತರಣೆಯಾಗದಿರುವುದು ತಾಲೂಕಿನ ವೈದ್ಯಾಧಿಕಾರಿಗಳು ಮತ್ತು ಫಾರ್ಮಸಿಸ್ಟ್‌ರೇ ನೇರ ಹೊಣೆ ಎನ್ನುತ್ತಿದ್ದಾರೆ ಸಾರ್ವಜನಿಕರು. ಆರೋಗ್ಯ ಇಲಾಖೆಯ ಮೇಲಧಿಕಾರಿಗಳು  ಎಚ್ಚೆತ್ತುಕೊಂಡು ಕಟ್ಟಡದಲ್ಲಿ ಕೊಳೆಯುತ್ತಾ ಬಿದ್ದಿರುವ ಶುಚಿ ಸ್ಯಾನಿಟರಿ ನ್ಯಾಪ್ಕಿನ್ (ವಿಸ್ಪರ್‌)ಗಳನ್ನು ಉಪಯೋಗಿಸುವ ದಿನಾಂಕ ಮುಗಿಯುವ ಮುನ್ನವೇ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ ಮಾಡುವಂತೆ ಕ್ರಮ ಕೈಕೊಳ್ಳಬೇಕಾಗಿದೆ.

 

-ಮಲ್ಲಿಕಾರ್ಜುನ ಬಂಡರಗಲ್ಲ

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.