ಕದಳಿ ವನ ಸಮಗ್ರ ಅಭಿವೃದ್ಧಿಗೆ ಪ್ರಯತ್ನ
ತೆಲಂಗಾಣ ಸಚಿವ ತನ್ನೀರು ಹರೀಶರಾವ್ ಭರವಸೆ ಅಕ್ಕಮಹಾದೇವಿ-ಅಲ್ಲಮ ಪ್ರಭು ಐಕ್ಯಸ್ಥಳ ಅಭಿವೃದ್ಧಿಗೆ ಒತ್ತಾಯ
Team Udayavani, Nov 25, 2019, 12:42 PM IST
ಬಸವಕಲ್ಯಾಣ: ಶ್ರೀಶೈಲಂ ಕದಳಿ ವನದಲ್ಲಿರುವ ಕನ್ನಡದ ಪ್ರಥಮ ಕವಯಿತ್ರಿ ಅಕ್ಕಮಹಾದೇವಿ ಹಾಗೂ ಅಲ್ಲಮಪ್ರಭು ಅವರ ಐಕ್ಯಸ್ಥಳವನ್ನು ಅಲ್ಲಿನ ಸರ್ಕಾರ ಅಭಿವೃದ್ಧಿಗೊಳಿಸಬೇಕು ಎಂದು ಅನುಭವ ಮಂಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.
ನಗರದ ಅನುಭವ ಮಂಟಪದ ಪರಿಸರದಲ್ಲಿ ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪದಿಂದ ಹಮ್ಮಿಕೊಂಡ 40ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದ ಎರಡನೇ ದಿನವಾದ ರವಿವಾರ ನಡೆದ ವಚನ ಕಲ್ಯಾಣ-ತಾತ್ವಿಕ ಗೋಷ್ಠಿ-3, ಗ್ರಂಥ ಲೋಕಾರ್ಪಣೆ ಮತ್ತು ಡಾ| ಎಂ.ಎಂ. ಕಲಬುರಗಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತೆಲಂಗಾಣದಲ್ಲಿ ಈಗಾಗಲೇ ಅನುಭವ ಮಂಟಪ ನಿರ್ಮಾಣಕ್ಕಾಗಿ ಎರಡು ಭೂಮಿ ಮಂಜೂರು ಮಾಡಿ 10 ಕೋಟಿ ರೂ. ನೀಡಲಾಗಿದೆ ಮತ್ತು ವಿಶ್ವಗುರು ಬಸವಣ್ಣನವರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಸಂತೋಷ ಸಂಗತಿ ಎಂದರು.
ಬಡವರು-ರೈತರ ಪರ ಕೆಲಸ: ತೆಲಂಗಾಣದ ಹಣಕಾಸು ಸಚಿವ ತನ್ನೀರು ಹರೀಶರಾವ್ ಮಾತನಾಡಿ, ಅನುಭವ ಮಂಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಅಕ್ಕಮಹಾದೇವಿ ಐಕ್ಯಸ್ಥಳ ಅಭಿವೃದ್ಧಿ ಸೇರಿದಂತೆ ವಿವಿಧ ಬೇಡಿಕೆ ನಮ್ಮ ಮುಂದೆ ಇಟ್ಟಿದ್ದಾರೆ. ಅವುಗಳನ್ನು ಮುಖ್ಯಮಂತ್ರಿ ಚಂದ್ರಶೇಖರರಾವ್ ಅವರ ಗಮನಕ್ಕೆ ತಂದು ಶೀಘ್ರ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಜಹೀರಾಬಾದ್ ಸಂಸದ ಬಿ.ಬಿ. ಪಾಟೀಲ್ ಮಾತನಾಡಿ, ವರ್ಷದೊಳಗೆ ತೆಲಂಗಾಣದಲ್ಲಿ ಮಂಜೂರಾದ ಭೂಮಿಯಲ್ಲಿ ಅನುಭವ ಮಂಟಪ ನಿರ್ಮಿಸಲಾಗುವುದು ಎಂದು ಹೇಳಿದರು.
ಜಾ.ಲಿ.ಮ. ಬೀದರ್ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ ಪ್ರಾಸ್ತಾವಿಕ ಮಾತನಾಡಿ, ಸೂಕ್ಷ್ಮವಾದ ಸಂಪೂರ್ಣ ವಿಚಾರ ಮಂಡನೆ ಮಾಡುವುದೇ ತಾತ್ವಿಕ ಚಿಂತನೆಯಾಗಿದೆ. ಹೀಗಾಗಿ ವಚನ ಇದ್ದರೆ ಮಾತ್ರ ಮತ್ತೆ ಕಲ್ಯಾಣ ಕಟ್ಟಲು ಸಾಧ್ಯವಾಗುತ್ತದೆ ಎಂದರು.
ನುಡಿದಂತೆ ನಡೆದ ಶರಣರು: ಶರಣರೂ ಮನುಷ್ಯರೇ ಆಗಿದ್ದರು. ಆದರೆ ಅವರು ಭಾಷೆ ಪ್ರಮಾಣ ಮತ್ತು ನುಡಿದಂತೆ ನಡೆಯುತ್ತಿದ್ದರು. ಅವರ ಬದುಕಿನಲ್ಲಿ ಅನುಭವಿಸಿರುವುದೇ ವಚನಗಳ ಮೂಲಕ ಮೂಡಿಬಂದಿದೆ. ಆದ್ದರಿಂದ ವಚನಗಳ ಅಡಿಪಾಯ ಹಾಕುವುದು ತುಂಬ ಅವಶ್ಯ. ಆ ನಿಟ್ಟಿನಲ್ಲಿಯೇ ಅನುಭವ ಮಂಟಪ ಉತ್ಸವ ಹಾಗೂ ಬಸವಾದಿ ಶರಣರ ಚಟುವಟಿಕೆ ನಿರಂತರ ಮಾಡುವ ಉದ್ದೇಶ ನಮ್ಮದಾಗಿದೆ ಎಂದರು.
ಅನುಭವ ಮಂಟಪ ಉತ್ಸವ ಸಮಿತಿ ಅಧ್ಯಕ್ಷರಾದ ಹಾಗೂ ಶಾಸಕ ಬಿ.ನಾರಾಯಣರಾವ್ ಮಾತನಾಡಿದರು. ಈ ವೇಳೆ ಮಹಾಲಿಂಗ ಸ್ವಾಮೀಜಿ, ಗುರುಬಸವ ದೇವರು, ಜಹೀರಾಬಾದ್ ಶಾಸಕ ಮಾಣಿಕರಾವ್, ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ, ಜಿಪಂ ಅಧ್ಯಕ್ಷೆ ಗೀತಾ ಪಂಡೀತ ಚಿದ್ರಿ, ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಶಿವರಾಜ ನರಶೆಟ್ಟಿ, ಪ್ರದೀಪ ವಾತಡೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ