ಅಕ್ರಮ ಮದ್ಯ ಮಾರಾಟ: ಅಧಿಕಾರಿಗಳ ಜಾಣಕುರುಡು
ಮದ್ಯಕ್ಕೆ ದಾಸರಾದವರ ಕುಟುಂಬ ಬೀದಿಪಾಲು ಮದ್ಯ ಮಾರಾಟಕ್ಕೆ ಕೆಲ ಅಧಿಕಾರಿಗಳ ಪ್ರೋತ್ಸಾಹ
Team Udayavani, Nov 25, 2019, 2:30 PM IST
ಎಚ್.ಕೆ.ಬಿ. ಸ್ವಾಮಿ
ಸೊರಬ: ಪಟ್ಟಣ ಸೇರಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಕ್ರಮ ಕೈಗೊಳ್ಳಬೇಕಾದ ಅಬಕಾರಿ ಇಲಾಖೆಯ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಸಾರ್ವಜನಿಕರಿಂದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಇಲ್ಲಿನ ಕಾನಕೇರಿ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕೃಷಿ ಕಾರ್ಮಿಕರು, ಯುವಕರು ಮದ್ಯದ ಚಟಕ್ಕೆ ದಾಸರಾಗುತ್ತಿದ್ದು, ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಗ್ರಾಮೀಣ ಪ್ರದೇಶದ ಗೂಡಂಗಡಿ, ಕಿರಾಣಿ ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.
ಅಧಿಕಾರಿಗಳಿಂದ ಟಾರ್ಗೆಟ್: 2019ರ ಜುಲೈನಿಂದ ಅಕ್ಟೋಬರ್ ಅಂತ್ಯದವರೆಗೆ
55050 ಬಾಕ್ಸ್ ಮದ್ಯ ಮಾರಾಟದ ಗುರಿಯನ್ನು ವಲಯ ಅಬಕಾರಿ ಇಲಾಖೆ ಹೊಂದಿತ್ತು. ಈ ಪೈಕಿ 51871 ಬಾಕ್ಸ್ ಮದ್ಯ ಮಾರಾಟ ಮಾಡಲಾಗಿದೆ. ಕಳೆದ ಜುಲೈನಲ್ಲಿ ಶೇ. 85, ಆಗಸ್ಟ್ನಲ್ಲಿ ಶೇ. 99, ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಶೇ. 97ರಷ್ಟು ಗುರಿ ತಲುಪಲಾಗಿದೆ. ಮೇಲಧಿ ಕಾರಿಗಳಿಂದ ಪ್ರಶಂಸೆ ಪಡೆಯಲು ಸ್ಥಳೀಯ ಮದ್ಯದ ಅಂಗಡಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.
ಇದರಿಂದ ಮದ್ಯ ಮಾರಾಟಗಾರರು (ಸನ್ನದುದಾರರು) ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುವವರಿಗೆ ಮದ್ಯ ಪೂರೈಕೆ ಮಾಡುತ್ತಿದ್ದು, ಇವರಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಮದ್ಯ ಮಾರಾಟಗಾರರಿಗೆ ಕಿರುಕುಳ: ಮಾಸಿಕವಾಗಿ ಪ್ರತಿ ಮದ್ಯ ಮಾರಾಟ ಮಳಿಗೆದಾರರಿಗೆ ಅಬಕಾರಿ ಇಲಾಖೆಯಿಂದ ಗುರಿ ನೀಡಲಾಗುತ್ತದೆ. ಗುರಿ ತಲುಪದವರು ಅಧಿ ಕಾರಿಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ತಾಲೂಕಿನಲ್ಲಿ ಅಧಿಕೃತವಾಗಿ 16 ಮಂದಿ ಪರವಾನಗಿ ಪಡೆದವರಾಗಿದ್ದಾರೆ. ಸಿಎಲ್2 ಪರವಾನಗಿ ಪಡೆದವರು 9, ಸಿಎಲ್7 ಮತ್ತು ಸಿಎಲ್ 9 ಪರವಾನಗಿ ಪಡೆದವರು ತಲಾ 2 ಮಂದಿ ಹಾಗೂ ಮೂರು ಎಂಎಸ್ಐಎಲ್ನ 3 ಮಾರಾಟ ಮಳಿಗೆಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಕೆಲವರು ಇಲಾಖೆಯ ನಿಯಮಗಳನ್ನು ಸಹ ಗಾಳಿಗೆ ತೂರಿ ಮದ್ಯ ಮಾರಾಟ ಮಾಡುತ್ತಿದ್ದರೂ, ಅಧಿಕಾರಿಗಳು ಇದ್ಯಾವುದರ ಪರಿವೇ ಇಲ್ಲದಂತೆ ವರ್ತಿಸುತ್ತಿದ್ದಾರೆ.
ಕೇಸು ಇಲ್ಲ-ಕಂಪ್ಲೆಂಟು ಇಲ್ಲ: ಜುಲೈನಿಂದ ಸೆಪ್ಟೆಂಬರ್ವರೆಗೆ ಸ್ಥಳೀಯ ಅಬಕಾರಿ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ ಹಲವು ಅನುಮಾನಕ್ಕೆ ಕಾರಣವಾಗುತ್ತದೆ. ಜುಲೈನಲ್ಲಿ ಕೇವಲ 0.090 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ನಲ್ಲಿ 0.240 ಲೀ. ಮದ್ಯ, ಸೆಪ್ಟೆಂಬರ್ನಲ್ಲಿ 0.400 ಲೀ., ಮದ್ಯ ವಶಪಡಿಸಿಕೊಳ್ಳಲಾಗಿದ್ದು, ಇವೆಲ್ಲವೂ ನೆಪ ಮಾತ್ರಕ್ಕೆ ಎನ್ನುವ ಸತ್ಯ ಮೇಲ್ನೋಟಕ್ಕೆ ಗೋಚರಿಸುತ್ತದೆ. ಇತ್ತ ಅಧಿಕಾರಿಗಳು ಮೇಲಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಲು ಒಂದೆಡೆ ಅಕ್ರಮ ಮದ್ಯ ಮಾರಾಟಕ್ಕೆ ಪ್ರೋತ್ಸಾಹ ನೀಡುತ್ತಿದ್ದರೆ, ಮತ್ತೂಂದೆಡೆ ಸಣ್ಣ ಪುಟ್ಟ ಪ್ರಕರಣಗಳನ್ನು ದಾಖಲಿಸುವ ಮೂಲಕ ದಕ್ಷವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರರಾಗಲು ಯತ್ನಿಸುತ್ತಿದ್ದಾರೆ. ಒಟ್ಟಾರೆ ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ