ಕಲುಷಿತವಾಗುತ್ತಿದೆ ಹೇಮಾವತಿ ನದಿ


Team Udayavani, Nov 26, 2019, 3:00 AM IST

kalushita

ಹೊಳೆನರಸೀಪುರ: ಪಟ್ಟಣದಲ್ಲಿ ಶೇಖರಣೆಯಾಗುವ ಚರಂಡಿ ನೀರು ಹೇಮಾವತಿ ನದಿಗೆ ಸೇರುತ್ತಿದ್ದು, ನದಿ ಕಲುಷಿತವಾಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಪಟ್ಟಣದ ಚರಂಡಿ ನೀರು ನೇರವಾಗಿ ನದಿ ಸೇರುತ್ತಿದೆ. ಈ ಬಗ್ಗೆ ಸಾರ್ವಜನಿಕರು ಅನೇಕ ಬಾರಿ ಜಿಲ್ಲಾಡಳಿತದ ಗಮನ ಸೆಳೆದಿದ್ದರೂ ಚರಂಡಿ ನೀರು ನದಿಗೆ ಸೇರುವುದನ್ನು ತಡೆಗಟ್ಟುವಲ್ಲಿ ಪುರಸಭೆ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳದೇ ಇರುವುದು ಆತಂಕಕಾರಿ ವಿಷಯವಾಗಿದೆ.

ಸಂಸ್ಕರಣ ಘಟಕವಿದ್ದರೂ ಪ್ರಯೋಜನವಿಲ್ಲ: ಪ್ರಸ್ತುತ ಪಟ್ಟಣದಲ್ಲಿ ಒಳಚರಂಡಿ ಯೋಜನೆ ಕೈಗೊಂಡು ಹತ್ತಾರು ವರ್ಷಗಳೇ ಕಳೆದಿದೆ. ಈ ಒಳಚರಂಡಿ ನೀರನ್ನು ಸಂಸ್ಕರಣೆ ಮಾಡಿ ನದಿಗೆ ಬಿಡಲು ಸಂಸ್ಕರಣೆ ಮಾಡಲು ಚನ್ನರಾಯಪಟ್ಟಣದ ರಸ್ತೆಯಲ್ಲಿ ದೊಡ್ಡದಾದ ಮೂರು ಗುಂಡಿಗಳನ್ನು ತೆರದು ಮೂರು ಹಂತದಲ್ಲಿ ಸಂಸ್ಕರಣೆ ಮಾಡಲು ಪುರಸಭೆ ಮುಂದಾಗಿದೆ. ಆದರೆ ಈ ಸಂಸ್ಕರಣೆ ಗುಂಡಿ ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ಒಳಚರಂಡಿಯಲ್ಲಿ ಬರುವ ಕೊಳಚೆ ನೀರು ಹೇಮಾವತಿ ನದಿಯನ್ನು ಸೇರುತ್ತಿದೆ. ಇದರಿಂದ ಹೇಮಾವತಿ ನದಿಯ ನೀರು ಸೇವಿಸಲೂ ಸಾಧ್ಯವಾಗಷ್ಟು ಮಲಿನವಾಗಿದೆ.

ಅಧಿಕಾರಿಗಳ ನಿರ್ಲಕ್ಷ್ಯ: ಈ ಹಿಂದೆ ಕೊಳಚೆ ನೀರು ನದಿ ಮಡಿಲು ಸೇರುತ್ತಿರುವ ಬಗ್ಗೆ ಅನೇಕ ಬಾರಿ ಮಾಧ್ಯಮಗಳಲ್ಲಿ ವರದಿಯಾಗಿದ್ದರೂ ಜಿಲ್ಲಾಡಳಿತ ಮತ್ತು ಕೊಳಚೆ ನಿಮೂರ್ಲನಾ ಮಂಡಳಿ ಕಠಿಣ ಕ್ರಮ ಕೈಗೊಳ್ಳದೇ ಇದ್ದುದರಿಂದ ನದಿ ಕಲುಷಿತಗೊಂಡು ವಿಷಕಾರಿಯಾಗುತ್ತಿದೆ. ಈ ಹಿಂದೆ ಹೇಮಾವತಿ ನದಿ ನೀರು ಕುಡಿಯಲು ಪನ್ನೀರಿನ ರುಚಿ ಇತ್ತು ಆದರೆ ಇಂದು ನದಿ ನೀರನ್ನು ನೇರವಾಗಿ ಸೇವಿಸಿದರೆ ರೋಗದಿಂದ ಬಳಲುವುದು ಖಚಿತವಾಗಿದೆ.

ನದಿಯಲ್ಲಿ ಈಜಿದರೆ ರೋಗ ಖಚಿತ: ದಶಕದ ಹಿಂದೆ ಪಟ್ಟಣದ ಯುವಕರು ನದಿಗೆ ಈಜಾಡಲು ತೆರಳುತ್ತಿದ್ದರು. ಆದರೆ ಇಂದು ನದಿಯಲ್ಲಿ ಈಜಲು ಹೋದರೆ ಚರ್ಮ ರೋಗಗಗಳು ಬರುವುದು ಖಚಿತವಾಗಿದೆ.

ಪುರಸಭೆ ಮಾಜಿ ಸದಸ್ಯರಿಂದ ಲಿಖಿತ ದೂರು: ಹೇಮಾವತಿ ನದಿಗೆ ಚರಂಡಿ ಹಾಗೂ ಒಳ ಚರಂಡಿ ನೀರು ಸೇರ್ಪಡೆ ಯಾಗುತ್ತಿರುವ ಬಗ್ಗೆ ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ ಮುಖಂಡ ಮುಜಾಹಿದ್‌ಪಾಷಾ ಜಿಲ್ಲಾಧಿಕಾರಿ ಹಾಗೂ ಕೊಳಚೆ ನಿಮೂರ್ಲನಾ ಮಂಡಳಿಗೆ ಲಿಖಿತ ದೂರು ನೀಡಿ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ನದಿ ಸಂಪೂರ್ಣ ವಿಷಕಾರಿಯಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.

ಅಕ್ರಮ ಮರಳು ಮಾಫಿಯಾ: ಅಕ್ರಮ ಮರಳು ತುಂಬುವ ಮಾಫಿಯಾ ನದಿಯಲ್ಲಿದ್ದ ಮರಳನ್ನೆಲ್ಲಾ ಬಗೆದು ತೆಗೆದಿದ್ದರಿಂದ ನದಿಯ ನೀರು ಕಲುಷಿತಗೊಳ್ಳಲು ಕಾರಣವಾಗಿದೆ. ಕೆಲವು ಮಂದಿ ನದಿ ದಡದಲ್ಲಿ ಅನಧಿಕೃತವಾಗಿ ದನಗಳನ್ನು ಕಡಿಯುತ್ತಿರುವುದರಿಂದ ದನಗಳ ರಕ್ತ ನದಿಯ ನೀರು ಸೇರುತ್ತಿದೆ. ಜಿಲ್ಲಾಡಳಿತ ಅಕ್ರಮ ಕಸಾಯಿ ಖಾನೆಗಳ ಮೇಲೆ ಹಲವಾರು ಬಾರಿ ದಾಳಿ ನಡೆಸಿದರೂ ಮತ್ತೆ ಕೆಲ ದಿನಗಳಲ್ಲೇ ಕಸಾಯಿ ಖಾನೆ ಆರಂಭವಾಗುತ್ತಿದೆ.

ಹೇಮಾವತಿ ನದಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದೆ. ಈ ಹಿನ್ನೆಲೆಯಲ್ಲಿ ಪುರಸಭೆಯಿಂದ ನದಿಗೆ ಕೊಳಚೆ ನೀರು ಸೇರುತ್ತಿರುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
-ವಸಂತ, ಪುರಸಭೆ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.