ಕರಾವಳಿ ದೇವಸ್ಥಾನಗಳಲ್ಲಿ ಲಕ್ಷ ದೀಪೋತ್ಸವ

 ಕಾರ್ತಿಕ ಮಾಸದಲ್ಲಿ ದೇಗುಲಗಳ ಚೆಲುವು ಇಮ್ಮಡಿಗೊಳಿಸುವ ಉತ್ಸವ

Team Udayavani, Nov 26, 2019, 5:21 AM IST

2111PKT1

ವಿಶೇಷ ವರದಿ-ಸುಬ್ರಹ್ಮಣ್ಯ: ಕಾರ್ತಿಕ ಮಾಸದಲ್ಲಿ ದೀಪಗಳ ಶೋಭೆಯೊಂದಿಗೆ ಮನೆ ಮನಗಳನ್ನು ಬೆಳಗಿಸುವ ಲಕ್ಷ ದೀಪೋತ್ಸವ ಕರಾವಳಿ ದೇಗುಲಗಳಲ್ಲಿ ಹೆಚ್ಚಿನ ಮಹತ್ವವನ್ನು ಪಡೆದಿದೆ. ಇಲ್ಲಿನ ಹಿಂದೂ ದೇಗುಲಗಳಲ್ಲಿ ಲಕ್ಷ ದೀಪೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ.

ಸಾಲು ಹಣತೆಗಳ ಹಬ್ಬ ಲಕ್ಷ ದೀಪೋತ್ಸವ ಕಾರ್ತಿಕ ಮಾಸದಲ್ಲಿ ನಡೆಯುತ್ತದೆ. ಈ ದಿನಗಳಲ್ಲಿ ಶ್ರದ್ಧಾ ಕೇಂದ್ರಗಳು ಬೆಳಕಿನಿಂದ ಶೋಭಿಸುತ್ತವೆ. ಪ್ರಮುಖವಾಗಿ ಧರ್ಮಸ್ಥಳ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಉಡುಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನ, ಕುಂದಾಪುರದ ಕುಂದೇಶ್ವರ ದೇವಸ್ಥಾನ, ಕಾರ್ಕಳ ಶ್ರೀ ಲಕ್ಷ್ಮೀ ವೆಂಕಟರಮಣ, ಶ್ರೀ ಅನಂತಶಯನ ದೇವಸ್ಥಾನ ಇಲ್ಲಿ ನಡೆಯುವ ಲಕ್ಷದೀಪೋತ್ಸವಗಳು ಪ್ರಸಿದ್ಧಿ ಪಡೆದಿವೆ. ಇನ್ನು ಅನೇಕ ದೇವಸ್ಥಾನಗಳಲ್ಲಿ ಲಕ್ಷ ದೀಪೋತ್ಸವವು ಸಂಭ್ರಮ ಸಡಗರದಿಂದ ನಡೆಯುತ್ತವೆ. ದೀಪಾವಳಿಯಿಂದ ತೊಡಗಿ ಆಚರಿಸಲ್ಪಡುವ ಬೆಳಕಿನ ಹಬ್ಬ ಲಕ್ಷದೀಪೋàತ್ಸವದ ವೇಳೆಗೆ ಮತ್ತಷ್ಟೂ ರಂಗು ತುಂಬಿಕೊಳ್ಳುತ್ತದೆ.

ಕಾರ್ತಿಕ ಮಾಸದಲ್ಲಿ ವಿಶೇಷವಾಗಿ ತುಳಸಿ ಪೂಜೆ ನಡೆಯುತ್ತದೆ. ಹೊಸ ನೆಲ್ಲಿಕಾಯಿ, ತುಳಸಿ ಗಿಡ ಸೇರಿಸಿ ಶ್ರೀಕೃಷ್ಣ ಪ್ರತಿಮೆಗೆ ಪೂಜಿಸುವ ಕ್ರಮವೂ ಕೆಲವೆಡೆ ಇದೆ. ಕಾರ್ತಿಕ ಮಾಸದ ಹುಣ್ಣಿಮೆ-ಅಮಾವಾಸ್ಯೆಯಂದು ದೀಪೋತ್ಸವ ನಡೆಸಲಾಗುತ್ತದೆ. ದೇಗುಲಗಳ ಪರಿಸರದಲ್ಲಿ ದೀಪಗಳ ಮಾಲೆಯನ್ನು ತೂಗಿಸಿಟ್ಟು ಬೆಳಗಳಾಗುತ್ತದೆ.

ಚೆಲುವು ಇಮ್ಮಡಿ
ಕುಕ್ಕೆಯಲ್ಲಿ ಲಕ್ಷ ದೀಪೋತ್ಸವ ವೇಳೆ ಕೆಲವು ಹಣತೆ ದೀಪಗಳನ್ನು ಮಾತ್ರ ಹಚ್ಚಲಾಗುತ್ತಿತ್ತು. ನಿಕಟಪೂರ್ವ ಆಡಳಿತ ಮಂಡಳಿ ಲಕ್ಷ ದೀಪೋàತ್ಸವಕ್ಕೆ ಹೆಚ್ಚು ಮನ್ನಣೆ ಇರಿಸಿತ್ತು. ಬಳಿಕ ಸಾರ್ವಜನಿಕ ಭಕ್ತರ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚುವುದನ್ನು ರೂಢಿಸಿಕೊಂಡಿದೆ. ಲಕ್ಷ ದೀಪೋತ್ಸವದಂದು ಜಗಮಗಿಸುವ ವಿದ್ಯುದ್ದೀಪಾಲಂಕಾರ ಕ್ಷೇತ್ರದ ಚೆಲುವನ್ನು ಇಮ್ಮಡಿಗೊಳಿಸುತ್ತದೆ.

ಸಾಹಿತ್ಯ, ಕಲೆಯ ಮೆರುಗು
ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಪ್ರಿಯನಾದ ಶಿವನಿಗೆ ಕಾರ್ತಿಕ ಮಾಸದಲ್ಲಿ ಲಕ್ಷ ದೀಪಗಳು ಪ್ರಜ್ವಲಿಸುವ ಹಬ್ಬ ಅತಿ ಪ್ರಿಯವಾದುದು. ಧರ್ಮಸ್ಥಳದಲ್ಲಿ ನಡೆಯುವ ಲಕ್ಷ ದೀಪದ ವೇಳೆ ಬೆಳಕಷ್ಟೆ ಅಲ್ಲ ಸಾಹಿತ್ಯ, ಕಲೆಗಳ ರಸವೇ ಹರಿಯುತ್ತವೆ. ದಿನಕ್ಕೆ ಸೀಮಿತವಾಗದೆ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಉತ್ಸವದಲ್ಲಿ ಸರ್ವ ಧರ್ಮ ಮತ್ತು ಸಾಹಿತ್ಯ ಸಮ್ಮೆಳನಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುತ್ತವೆ. ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ, ಲಲಿತೋದ್ಯಾನ ಉತ್ಸವ, ಕಂಚಿಮಾರು ಕಟ್ಟೆ ಉತ್ಸವ, ಗೌರಿಮಾರು ಕಟ್ಟೆ ಉತ್ಸವ ಹೀಗೆ ಸಾಲು ಉತ್ಸವಗಳು ನಡೆಯುತ್ತವೆ. ಉತ್ಸವದ ಮರುದಿನ ಚಂದ್ರನಾಥ ಸ್ವಾಮಿ ಸಮವಸರಣ ಪೂಜೆ, ಶ್ರೀ ಮಂಜುನಾಥ ದೇವಸ್ಥಾನವನ್ನು ಹೂಗಳಿಂದ ಸಿಂಗರಿಸಲಾಗುತ್ತದೆ. ಹೆಗ್ಗಡೆಯವರ ನಿವಾಸ (ಬೀಡು), ಅನ್ನಛತ್ರ, ರಥಬೀದಿ, ರಾಜಬೀದಿ ಸುತ್ತಲೂ ವಿದ್ಯುದೀಪಗಳಿಂದ ಅಲಂಕರಿಸಲಾಗುತ್ತದೆ. ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಲಕ್ಷ ದೀಪೋತ್ಸವದ ವೇಳೆ ದೇಗುಲದಲ್ಲಿ ಸಾವಿರಾರು ಹಣತೆಗಳನ್ನು ಹಚ್ಚಿ, ದೇಗುಲದ ಮುಂಭಾಗ ರಂಗೋಲಿ ಬಿಡಿಸಿ ದೀಪೋತ್ಸವ ಆಚರಿಸಲಾಗುತ್ತದೆ. ಕೆಲ ದೇವಸ್ಥಾನಗಳಲ್ಲಿ ತುಪ್ಪದಲ್ಲಿ ದೀಪ ಹಚ್ಚುವ ಸಂಪ್ರದಾಯವಿದೆ.

ದೀಪಾಲಂಕಾರ
ನಾಗನ ನೆಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಲು ಸಾಲು ಹಣತೆಗಳ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವರ ಲಕ್ಷ ದೀಪೋತ್ಸವ ಭಕ್ತಿ-ಸಡಗರದಿಂದ ನಡೆಯುತ್ತದೆ. ಪಂಚ ಶಿಖರಗಳನ್ನೊಳಗೊಂಡ ಚಂದ್ರಮಂಡಲದಲ್ಲಿ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ, ರಥಬೀದಿಯಿಂದ ಕಾಶಿಕಟ್ಟೆ ತನಕ ಬೆಳಗುವ ಲಕ್ಷ ಹಣತೆ ದೀಪಗಳ ನಡುವೆ ಶ್ರೀ ದೇವರ ಉತ್ಸವ ನಡೆಯುತ್ತದೆ. ದೇಗುಲದ ಹೊರಾಂಗಣದ ಸುತ್ತ ಹಣತೆಗಳ ಸಾಲಿನ ದೀಪಾಲಂಕಾರದ ಜತೆಗೆ, ಆಕರ್ಷಕ ವಿದ್ಯುತ್ತಿನ ಅಲಂಕಾರದಿಂದ ದೇವಸ್ಥಾನ ವಿಶೇಷವಾಗಿ ಕಂಗೊಳಿಸುತ್ತದೆ.

ಐಶ್ವರ್ಯದ ಧ್ಯೋತಕ
ಕಾರ್ತಿಕ ದೀಪವು ಸುಖ ಸಮೃದ್ಧಿ ಐಶ್ವರ್ಯದ ಧ್ಯೋತಕ. ಇದರ ಅಧಾರದಲ್ಲಿ ಲಕ್ಷ ದೀಪೋತ್ಸವ ಆಚರಿಸಲ್ಪಡುತ್ತಿದೆ. ಸಂಕಷ್ಟಗಳು ದೂರವಾಗಿ ಸುಖ ಸಂತೃಪ್ತಿ ಪ್ರಾಪ್ತಿಯಾಗಲೆಂದು ಪ್ರಾರ್ಥಿಸುವ ದೀಪಗಳ ಹಬ್ಬ ಹಿಂದೂ ಶ್ರದ್ಧಾ ಕೇಂದ್ರಗಳಲ್ಲಿ ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ.
– ವೇ|ಮೂ| ಸುಬ್ರಹ್ಮಣ್ಯ ನರಸಿಂಹ ಭಟ್‌, ಅರ್ಚಕ

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.