ಸಿದ್ದು ಮೇಲೆ “ಕೈ’ ಶಾಸಕರಿಗೇ ವಿಶ್ವಾಸವಿಲ್ಲ


Team Udayavani, Nov 26, 2019, 3:07 AM IST

siddu-mele

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಒತ್ತಡ ಹೇರಿ, ಬ್ಲಾಕ್‌ಮೇಲ್‌ ಮಾಡಿ ಸಿದ್ದರಾಮಯ್ಯ, ವಿಧಾನಸಭೆ ಪ್ರತಿಪಕ್ಷ ನಾಯಕರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷ ನಾಯಕನ ಆಯ್ಕೆಗೆ ರಹಸ್ಯ ಮತದಾನ ನಡೆದರೆ ಸಿದ್ದರಾಮಯ್ಯಗೆ ಶಾಸಕರು ಮತ ಹಾಕುವುದಿಲ್ಲ. ಬೇಕಾದರೆ ಶಾಸಕರಿಂದ ರಹಸ್ಯ ಮತದಾನ ನಡೆಯಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸೋಮ ವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಶಾಸಕರೇ ಸಿದ್ದರಾಮಯ್ಯರನ್ನು ನಾಯಕ ಎಂದು ಒಪ್ಪಿಕೊಂಡಿಲ್ಲ. ಹೀಗಾಗಿ ಅವರು ಏಕಾಂಗಿ ಯಾಗಿ ಪ್ರಚಾರ ಮಾಡುತ್ತಿದ್ದಾರೆ. ಏಕೋಪಾ ಧ್ಯಾಯ ಶಾಲೆ ಮುಖ್ಯೋಪಾಧ್ಯಾಯರಂತಿದ್ದು, ಯಾವ ನಾಯಕರು ಅವರೊಂದಿಗಿಲ್ಲ. ಸರ್ಕಾರದ ಪತನಕ್ಕೆ ಕಾರಣರಾದ ಅವರು, ಕಾಂಗ್ರೆಸ್‌ನ ಪತನ ಕ್ಕೂ ಕಾರಣರಾಗಲಿದ್ದಾರೆ ಎಂದು ಹೇಳಿದರು.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಮೂರನೇ ಸ್ಥಾನದಲ್ಲಿದ್ದ ಜೆಡಿಎಸ್‌ ಮೂರನೇ ಬಾರಿಗೆ ಸರ್ಕಾರ ರಚಿಸಿತು. ಮೂರನೇ ಬಾರಿಯೂ ಆಡಳಿತ ನಡೆಸುವಲ್ಲಿ ಜೆಡಿಎಸ್‌ ವಿಫ‌ಲವಾಯಿತು. ಮೈತ್ರಿ ಸರ್ಕಾರ ಉಳಿಸಲು ಈಗಲ್ಟನ್‌ ರೆಸಾರ್ಟ್‌ನಲ್ಲಿ ಇದೇ ಭೈರತಿ ಬಸವರಾಜು, ಎಸ್‌.ಸೋಮಶೇಖರ್‌, ಎಂಟಿಬಿ ನಾಗರಾಜ್‌ ರಕ್ಷಕರಾಗಿದ್ದು.

ಆದರೆ ಅಧಿಕಾರ ಸಿಕ್ಕಾಗ ಕುಟುಂಬಕ್ಕೆ ಸೀಮಿತವಾಗುವ ಜೆಡಿಎಸ್‌ ನಡೆಯಿಂದ ಬೇಸರಗೊಂಡು ರಾಜೀನಾಮೆ ನೀಡಿದರು. ಆದರೆ ಇದೀಗ ಎಚ್‌ಡಿಕೆ, ಬಿಜೆಪಿ ಅಭ್ಯರ್ಥಿಗಳ ಬಗ್ಗೆ ವಿನಾಕಾರಣ ಆರೋಪಿಸುತ್ತಿದ್ದಾರೆ. ಇನ್ನಾದರೂ ವೈಯಕ್ತಿಕ ಟೀಕೆ-ಟಿಪ್ಪಣಿ ಮಾಡುವುದನ್ನು ಬಿಟ್ಟು ಅವರು ಅಭಿವೃದ್ಧಿ ಕಾರ್ಯ, ಕೊಡುಗೆಗಳ ಆಧಾರದಲ್ಲಿ ಪ್ರಚಾರ ನಡೆಸಲಿ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಸೇರಿದಾಗಿನಿಂದ ತಾವೊಬ್ಬ ಹಿಂದುಳಿದ ವರ್ಗಗಳ ಚಾಂಪಿಯನ್‌ ಎಂಬಂತೆ ವರ್ತಿಸುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತಂದ ಎಚ್‌.ವಿಶ್ವನಾಥ್‌ ಅವರು ಪಕ್ಷ ಬಿಟ್ಟು ಹೋಗುವಂತೆ ಮಾಡಿದರು. ಮತ್ತೂಬ್ಬ ಹಿಂದುಳಿದ ವರ್ಗದ ನಾಯಕ ಎ. ಕೃಷ್ಣಪ್ಪ ಅವರು ಪಕ್ಷ ಬಿಡುವಂತೆ ಮಾಡಿದರು. ಇದೀಗ ವಾಲ್ಮೀಕಿ ಸಮುದಾಯದ ಬಿ.ಶ್ರೀರಾಮುಲುರನ್ನು ಸಿದ್ದರಾಮಯ್ಯ ಟಾರ್ಗೆಟ್‌ ಮಾಡುತ್ತಿದ್ದಾರೆ. ಶ್ರೀರಾಮುಲು ಅವರ ಜನಪ್ರಿಯತೆ ಸಹಿಸದೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದುಳಿದ ವರ್ಗದ ನಾಯಕರು, ಪರಿಶಿಷ್ಟ ಜಾತಿ, ಪಂಗಡದ ನಾಯಕರನ್ನು ಅವಮಾನ ಮಾಡುವುದೇ ಸಿದ್ದರಾಮಯ್ಯ ಜಾಯಮಾನ. ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌, ಬಿ.ಕೆ.ಹರಿಪ್ರಸಾದ್‌, ವೀರಪ್ಪ ಮೊಯಿಲಿ, ಕೆ.ಎಚ್‌.ಮುನಿಯಪ್ಪ, ಎಚ್‌.ಕೆ.ಪಾಟೀಲ್‌ ಎಲ್ಲಿದ್ದಾರೆ. ಸಿದ್ದರಾಮಯ್ಯ ಅವರು ಮತ್ತೆ ಹಿಂದುಳಿದ ವರ್ಗದವರ ದಾರಿ ತಪ್ಪಿಸಲು ನೋಡುತ್ತಿದ್ದು, ಈ ಬಾರಿ ಸಾಧ್ಯವಿಲ್ಲ ಎಂದು ತಿಳಿಸಿದರು. ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎ.ಎಚ್‌.ಆನಂದ್‌, ಸಹ ವಕ್ತಾರ ಅನ್ವರ್‌ಮಾಣಿಪ್ಪಾಡಿ ಉಪಸ್ಥಿತರಿದ್ದರು.

ಸೇಠ್ ಕೊಲೆ ಯತ್ನಕ್ಕೆ ಸಿದ್ದರಾಮಯ್ಯ ಕಾರಣ-ಆರೋಪ: ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ನಡೆಯಲು ಸಿದ್ದರಾಮಯ್ಯ ಅವರೇ ಕಾರಣ. ಕೆಎಫ್ಡಿ, ಎಸ್‌ಡಿಪಿಐ, ಪಿಎಫ್ಐನ ಕೊಲೆ ಆರೋಪಿಗಳ ಪ್ರಕರಣಗಳನ್ನು ಸಿದ್ದರಾಮಯ್ಯ ಹಿಂಪಡೆದಿದ್ದರು. ಟಿಪ್ಪು ಜಯಂತಿ ಆಚರಿಸಿ ಎಂದು ಮುಸಲ್ಮಾನರು ಕೇಳದಿದ್ದರೂ ಸಂಘರ್ಷ ಸೃಷ್ಟಿಸಲು, ಕೇವಲ ಮತ ಬ್ಯಾಂಕ್‌ ಲಾಭಕ್ಕಾಗಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದರು. ಸಮಾಜದಲ್ಲಿ ಭಯ, ಗೊಂದಲ ಸೃಷ್ಟಿಸುವ ಕೆಎಫ್ಡಿ, ಎಸ್‌ಡಿಪಿಐ, ಪಿಡಿಎಫ್ನಂತಹ ಸಂಘಟನೆಗಳು° ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಶರತ್‌ ಸ್ಪರ್ಧೆ ಹಿಂದೆ ಯಾರ ಕುಮ್ಮಕ್ಕಿದೆ ಗೊತ್ತಿಲ್ಲ-ಸಂಸದೆ: ಬಿ.ಎನ್‌.ಬಚ್ಚೇಗೌಡ ಬಿಜೆಪಿಗೆ ಸೇರಿದಾಗ ಟಿಕೆಟ್‌ ನೀಡಿ ಸಚಿವರನ್ನಾಗಿ ಮಾಡಲಾಗಿತ್ತು. ನಂತರ ಲೋಕಸಭೆಗೆ ಟಿಕೆಟ್‌ ನೀಡಿ ಸಂಸದರನ್ನಾಗಿ ಮಾಡಲಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಶರತ್‌ ಬಚ್ಚೇಗೌಡರಿಗೆ ಪ್ರಮುಖ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಬಚ್ಚೇ ಗೌಡರ ಕುಟುಂಬಕ್ಕೆ ಪಕ್ಷ ಅನ್ಯಾಯ ಮಾಡಿಲ್ಲ. ಹಾಗಿದ್ದರೂ ಯಾರ ಕುಮ್ಮಕ್ಕಿನಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

2014ರಲ್ಲಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಬಚ್ಚೇಗೌಡರನ್ನು ಸೋಲಿಸ ಲೆಂದೇ ಎಚ್‌ಡಿಕೆ ಚುನಾವಣೆಗೆ ಧುಮುಕಿದ್ದರು. ಇದೀಗ ಶರತ್‌ ಬಚ್ಚೇಗೌಡ ಅವರಿಗೆ ಜೆಡಿಎಸ್‌ ಬೆಂಬಲ ಸೂಚಿಸಿದೆ. ಜೆಡಿಎಸ್‌ಗೆ ಅಭ್ಯರ್ಥಿ ಸಿಕ್ಕಿಲ್ಲ ಎಂದು ಬೆಂಬಲ ನೀಡಿದ್ದಾರೋ ಅಥವಾ ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಒಳ ಒಪ್ಪಂದ ನಡೆಯುತ್ತಿದೆಯೋ ಗೊತ್ತಿಲ್ಲ. ಅವರು ಬೆಂಬಲ ನೀಡಿರುವುದು ಉಳಿಸಲೋ, ಮುಗಿಸಲೋ ಎಂಬುದು ಗೊತ್ತಿಲ್ಲ. ಎಲ್ಲ ಬೆಳವಣಿಗೆಯನ್ನೂ ಹೈಕಮಾಂಡ್‌ ಗಮನಿಸುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.