ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಮುಂಬಯಿಗೆ ಶರಣಾದ ಕರ್ನಾಟಕ


Team Udayavani, Nov 26, 2019, 5:20 AM IST

SURYAKUMAR-YADAV

ಸೂರತ್‌: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಕೂಟದ ಕೊನೆಯ ಸೂಪರ್‌ ಲೀಗ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ 7 ವಿಕೆಟ್‌ಗಳಿಂದ ಮುಂಬಯಿಗೆ ಶರಣಾಗಿದೆ. ಸೂರ್ಯಕುಮಾರ್‌ ಯಾದವ್‌ ಅವರ ಆರ್ಭಟಕ್ಕೆ ಕಡಿವಾಣ ಹಾಕಲು ವಿಫ‌ಲವಾದದ್ದು ಕರ್ನಾಟಕಕ್ಕೆ ಹಿನ್ನಡೆಯಾಗಿ ಪರಿಣಮಿಸಿತು.

“ಬಿ’ ವಿಭಾಗದ ಸೂಪರ್‌ ಲೀಗ್‌ನಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸಿ ಮೆರೆಯುತ್ತಿದ್ದ ಕರ್ನಾಟಕ, ಕೂಟದಲ್ಲಿ ಸತತ 7 ಪಂದ್ಯಗಳನ್ನು ಗೆದ್ದು ಪ್ರಭುತ್ವ ಸಾಧಿಸಿತ್ತು. ಆದರೆ ಸೋಮವಾರದ ಪಂದ್ಯದಲ್ಲಿ ಮುಂಬಯಿ ಎದುರು ಪಾಂಡೆ ಪಡೆಯ ಆಟ ನಡೆಯಲಿಲ್ಲ.

ಕರ್ನಾಟಕ ಸೂಪರ್‌ ಲೀಗ್‌ ಹಂತದ ಎಲ್ಲ 4 ಪಂದ್ಯಗಳನ್ನು ಮುಗಿಸಿದ್ದು, 3 ಗೆಲುವು ಹಾಗೂ ಒಂದು ಸೋಲಿನೊಂದಿಗೆ ಒಟ್ಟು 12 ಅಂಕಗಳೊಂದಿಗೆ ಗುಂಪಿನ ಅಗ್ರಸ್ಥಾನಿಯಾಗಿದೆ. ಈ ಗುಂಪಿನಿಂದ ಅಗ್ರ 2 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದ್ದು, 3 ತಂಡಗಳು ರೇಸ್‌ನಲ್ಲಿವೆ. ಸದ್ಯ ಕರ್ನಾಟಕ ಸುರಕ್ಷಿತವಾಗಿದೆ.

ಮುಂಬಯಿ ಭರ್ಜರಿ ಚೇಸಿಂಗ್‌
ಮೊದಲು ಬ್ಯಾಟಿಂಗ್‌ಗೆ ಇಳಿದ ಕರ್ನಾಟಕ ತಂಡ ಆರಂಭಿಕ ಬ್ಯಾಟ್ಸ್‌ಮನ್‌ ದೇವದತ್ತ ಪಡಿಕ್ಕಲ್‌ (57) ಮತ್ತು ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್‌ ರೋಹನ್‌ ಕದಮ್‌ (71) ಅವರ ಅರ್ಧ ಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 171 ರನ್‌ ಗಳಿಸಿತು. ಈ ಗುರಿ ಬೆನ್ನಟ್ಟಿದ ಮುಂಬಯಿ ತಂಡ ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ ಬ್ಯಾಟಿಂಗ್‌ (ಅಜೇಯ 94 ರನ್‌) ಹಾಗೂ ಆರಂಭಕಾರ ಪೃಥ್ವಿ ಶಾ (30) ಅವರ ದಿಟ್ಟ ಹೋರಾಟ ನೆರವಿನಿಂದ 19 ಓವರ್‌ಗಳಲ್ಲಿ ಮೂರೇ ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿ ವಿಜಯದ ನಗು ಹೊಮ್ಮಿಸಿತು.

ಸೂರ್ಯಕುಮಾರ್‌ ಯಾದವ್‌ 53 ಎಸೆತಗಳಿಂದ 11 ಬೌಂಡರಿ, 4 ಸಿಕ್ಸರ್‌ ನೆರವಿನಿಂದ ಅಜೇಯ 94 ರನ್‌ ಸಿಡಿಸಿದರು. ಇವರೊಂದಿಗೆ ಶಿವಂ ದುಬೆ 22 ರನ್‌ ಮಾಡಿ ಔಟಾಗದೆ ಉಳಿದರು (18 ಎಸೆತ, 2 ಸಿಕ್ಸರ್‌). ಈ ಜೋಡಿಯಿಂದ 4ನೇ ವಿಕೆಟಿಗೆ 8.1 ಓವರ್‌ಗಳಿಂದ 84 ರನ್‌ ಹರಿದು ಬಂತು.

ಕರ್ನಾಟಕ ಕೆ.ಎಲ್‌. ರಾಹುಲ್‌ ಅವರನ್ನು ಶೂನ್ಯಕ್ಕೆ ಕಳೆದುಕೊಂಡಿತು. ನಾಯಕ ಮನೀಷ್‌ ಪಾಂಡೆ (4), ಕರುಣ್‌ ನಾಯರ್‌ (8) ಕೂಡ ಅಗ್ಗಕ್ಕೆ ಔಟಾದರು. 19 ರನ್ನಿಗೆ 3 ವಿಕೆಟ್‌ ಬಿದ್ದಾಗ ಜತೆಗೂಡಿದ ಪಡಿಕ್ಕಲ್‌-ಕದಮ್‌ 80 ರನ್‌ ಪೇರಿಸಿದರು.

ಸಂಕ್ಷಿಪ್ತ ಸ್ಕೋರ್‌
ಕರ್ನಾಟಕ-20 ಓವರ್‌ಗಳಲ್ಲಿ 6 ವಿಕೆಟಿಗೆ 171 (ಕದಮ್‌ 71, ಪಡಿಕ್ಕಲ್‌ 57, ಠಾಕೂರ್‌ 29ಕ್ಕೆ 2, ದುಬೆ 39ಕ್ಕೆ 2). ಮುಂಬಯಿ-19 ಓವರ್‌ಗಳಲ್ಲಿ 3 ವಿಕೆಟಿಗೆ 174 (ಸೂರ್ಯಕುಮಾರ್‌ ಔಟಾಗದೆ 94, ಶಾ 30, ದುಬೆ ಔಟಾಗದೆ 22).

ಸೆಮಿಫೈನಲ್‌ಗೆ ಪೈಪೋಟಿ
ಸೋಮವಾರದ ಫ‌ಲಿತಾಂಶದ ಬಳಿಕ “ಬಿ’ ವಿಭಾಗದಲ್ಲಿ ಜಾರ್ಖಂಡ್‌ ಹೊರತುಪಡಿಸಿ ಉಳಿದ ತಂಡಗಳು ಸೆಮಿಫೈನಲ್‌ ರೇಸ್‌ನಲ್ಲಿ ಉಳಿದುಕೊಂಡಿರುವ ಚಿತ್ರಣ ಲಭಿಸಿದೆ.
ಕರ್ನಾಟಕದೊಂದಿಗೆ ಪೈಪೋಟಿಯಲ್ಲಿರುವ ತಂಡಗಳೆಂದರೆ ತಮಿಳುನಾಡು (3 ಪಂದ್ಯ, 8 ಅಂಕ) ಮತ್ತು ಮುಂಬಯಿ (3 ಪಂದ್ಯ, 8 ಅಂಕ). ರನ್‌ರೇಟ್‌ನಲ್ಲಿ ಕರ್ನಾಟಕವೇ ಮುಂದಿದೆ (+0.762). ತಮಿಳುನಾಡು (+0.413) ಮತ್ತು ಮುಂಬಯಿ (-0.589) ಅನಂತರದ ಸ್ಥಾನದಲ್ಲಿವೆ. ಮುಂಬಯಿಯನ್ನು ಮಣಿಸಿದ್ದೇ ಆದಲ್ಲಿ ಕರ್ನಾಟಕ ಸೋಮವಾರವೇ ಸೆಮಿಫೈನಲ್‌ಗೆ ಲಗ್ಗೆ ಇರಿಸುತ್ತಿತ್ತು.

ದಿನದ ಇನ್ನೊಂದು ಪಂದ್ಯದಲ್ಲಿ ತಮಿಳುನಾಡು 4 ವಿಕೆಟ್‌ಗಳಿಂದ ಪಂಜಾಬ್‌ಗ ಸೋಲುಣಿಸಿತು. ತಮಿಳುನಾಡು ಬುಧವಾರದ ಕೊನೆಯ ಲೀಗ್‌ ಪಂದ್ಯದಲ್ಲಿ ಜಾರ್ಖಂಡ್‌ ವಿರುದ್ಧ ಆಡಲಿದೆ. ಮುಂಬಯಿ ತಂಡ ಪಂಜಾಬನ್ನು ಎದುರಿಸಲಿದೆ. ಪಂಜಾಬ್‌ 4 ಅಂಕ ಹೊಂದಿದ್ದು, +1.426ರಷ್ಟು ಅತ್ಯುತ್ತಮ ರನ್‌ರೇಟ್‌ ಹೊಂದಿದೆ. ಮುಂಬಯಿ ಎದುರು ಬೃಹತ್‌ ಗೆಲುವು ಸಾಧಿಸಿದರೆ ಪಂಜಾಬ್‌ಗೂ ಅವಕಾಶವಿದೆ. ಆದರೆ ತಮಿಳುನಾಡು ವಿರುದ್ಧ ಜಾರ್ಖಂಡ್‌ ಗೆಲ್ಲಬೇಕು!

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.