ಕಣ್ಣಿ ತರಕಾರಿ ಮಾರುಕಟ್ಟೆ ಅಭಿವೃದ್ಧಿಗೆ ಪ್ರಸ್ತಾವನೆ


Team Udayavani, Nov 26, 2019, 11:07 AM IST

gb-tdy-3

ಕಲಬುರಗಿ: ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕೇಂದ್ರ ಬಸ್‌ ನಿಲ್ದಾಣ ಬಳಿಯ ಕಣ್ಣಿ ತರಕಾರಿ ಮಾರುಕಟ್ಟೆ ಅಭಿವೃದ್ಧಿಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಸಹಯೋಗದಲ್ಲಿ ಅಭಿವೃದ್ಧಿಪಡಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಸೋಮವಾರ ನಡೆದ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ (ಕುಡಾ) ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಬಿ. ಶರತ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಣ್ಣಿ ತರಕಾರಿ ಮಾರುಕಟ್ಟೆಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಹಭಾಗಿತ್ವ ವಹಿಸುವ ಕುರಿತಾಗಿ ಎಪಿಎಂಸಿ ಒಪ್ಪಂದ ಪತ್ರ ಕಳುಹಿಸಿರುವುದರಿಂದ ಈಗ ಸರ್ಕಾರಕ್ಕೆ ಕುಡಾ-ಎಪಿಎಂಸಿ ಕರಾರುಗಳ ಒಪ್ಪಂದದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಅಭಿವೃದ್ಧಿಗೆ ಗ್ರೀನ್‌ ಸಿಗ್ನಲ್‌ ಪಡೆಯಲು ಒಮ್ಮತದ ನಿರ್ಣಯ ಕೈಗೊಳ್ಳಲಾಯಿತು. ಅದೇ ರೀತಿ ಎಂಎಸ್‌ಕೆ ಮಿಲ್‌ನ ಕುಡಾ ಬಡಾವಣೆಯಲ್ಲಿ 54 ಕೋ.ರೂ ವೆಚ್ಚದ ಬೃಹತ್‌ ವಾಣಿಜ್ಯ ಮಳಿಗೆಯು ಪಿಪಿಯು ಆಧಾರದ ಮೇಲೆ ನಿರ್ಮಿಸಲು ಇಂಡೋಕ್‌ ಕಂಪನಿ ಮುಂದೆ ಬಂದಿರುವುದರಿಂದ ಆದಷ್ಟು ಬೇಗನೇ ಒಪ್ಪಂದ ಕಾರ್ಯ ಪೂರ್ಣಗೊಳಿಸಿ ಕಾಮಗಾರಿ ಶುರು ಮಾಡಲು ಸಹ ಸಭೆಯಲ್ಲಿ ಒಮ್ಮತಕ್ಕೆ ಬರಲಾಯಿತು.

ಕೋಟನೂರ ಡಿ ಬಡಾವಣೆಯ ಹಣವನ್ನು ಬೇರೆಯದಕ್ಕೆ ಬಳಸಬೇಡಿ. ರೈತರು ಪರಿಹಾರ ಕೋರಿ ನ್ಯಾಯಾಲಯಕ್ಕೆ ಮೋರೆ ಹೋಗಿದ್ದರಿಂದ ಯಾವುದೇ ಸಂದರ್ಭದಲ್ಲಿ ಆದೇಶ ಬರಬಹುದು. ಹೀಗಾಗಿ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಮಾರಾಟವಾಗಿರುವ ನಿವೇಶನ ಹಣ ಮೀಸಲಿಡಿ ಬೇರೆಯದಕ್ಕೆ ಬಳಸಬೇಡಿ ಎಂದು ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ ಹೇಳಿದರು.

ಧರಿಯಾಪುರ-ಕೋಟನೂರ ಕುಡಾ ಬಡಾವಣೆಯಲ್ಲಿ ಅರ್ಧಕ್ಕೆ ನಿಂತಿರುವ ರಾಜೀವ್‌ ಗಾಂಧಿ ಥೀಮ್‌ ಪಾರ್ಕ್‌ ಕುರಿತಾಗಿ ಸಭೆಯಲ್ಲಿ ಚರ್ಚೆಗೆ ಬಂತು. ಕಾಮಗಾರಿ ಉಸ್ತುವಾರಿ ಕೆಕೆಆರ್‌ಡಿಬಿಯೇ ವಹಿಸಿಕೊಂಡಿದೆ. ಕಾಮಗಾರಿಗೆ ಅನುದಾನ ಕೊರತೆಯಿಂದ ಅರ್ಧಕ್ಕೆ ನಿಂತಿದೆ ಎಂದು ಅಧಿಕಾರಿಗಳು ಸಮಜಾಯಿಷಿ ನೀಡಿದರು. ಮುಂದಿನ ಸಭೆಗೆ ಸಮಗ್ರ ಮಾಹಿತಿ ತರಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್‌, ಖನೀಜಾ ಫಾತೀಮಾ, ತಿಪ್ಪಣ್ಣಪ್ಪ ಕಮಕನೂರ, ಇಕ್ಬಾಲ್‌ ಅಹ್ಮದ ಸರಡಗಿ, ಕುಡಾ ಆಯುಕ್ತ ಎಂ. ರಾಚಪ್ಪ ಹಾಗೂ ಅಧಿಕಾರಿಗಳು ಹಾಜರಿದ್ದರು. ಕುಸನೂರ ಕುಡಾ ಬಡಾವಣೆಗೆ ಭೂಮಿ ನೀಡಿರುವ ರೈತರಿಗೆ ಪರಿಹಾರ ನೀಡುವ ಹಾಗೂ ಬಡಾವಣೆಗೆ ಕುಡಾ ಕಳುಹಿಸಿರುವ 117 ಕೋ. ರೂ ಪ್ರಸ್ತಾವನೆ ಬದಲು ಕೇವಲ 95 ಕೋ. ರೂ ಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಕುಡಾ ಯಾವ ನಿಟ್ಟಿನಲ್ಲಿ ಹೆಜ್ಜೆ ಇಡಬೇಕೆಂಬುದೇ ಗೊತ್ತಾಗುತ್ತಿಲ್ಲ ಎಂದು ಕುಡಾ ಅಧಿಕಾರಿಗಳು ಸಭೆ ಗಮನಕ್ಕೆ ತಂದರು.

ರೈತರು ಭೂಮಿ ನೀಡಿ ನಾಲ್ಕೈದು ವರ್ಷಗಳಾಯಿತು. ಆದರೂ ಪರಿಹಾರ ಕೊಡದೇ ಇರುವುದು ರೈತರ ತಾಳ್ಮೆ ಪರೀಕ್ಷಿಸುವಂತಾಗಿದೆ. ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಿ ಎಂದು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಆಗ್ರಹಿಸಿದರು. ಇದಕ್ಕೆ ಬಿ.ಜಿ. ಪಾಟೀಲ್‌ ಧ್ವನಿಗೂಡಿಸಿದರು.

ಆದರೆ ಕುಡಾ ಪ್ರಸ್ತಾವನೆಗಿಂತ 22 ಕೋ. ರೂ ಕಡಿಮೆಗೊಳಿಸಿ ಸಂಪುಟ ಅನುಮೋದನೆ ನೀಡಿರುವದರಿಂದ ಕುಡಾಗೆ ಪರಿಹಾರ ನೀಡಲು ಸಾಧ್ಯವಾಗದಂತಾಗಿದೆ. ಎಲ್ಲವನ್ನು ಅವಲೋಕಿಸಿ 117 ಕೋ.ರೂ ಯೋಜನೆ ರೂಪಿಸಲಾಗಿದೆ. ಆದರೆ 22 ಕೋ.ರೂ. ಕಡಿಮೆಯಾಗಿರುವುದರಿಂದ ಕುಡಾ ನಷ್ಟವೇ ಜಾಸ್ತಿ. ಹೀಗಾಗಿ ಏನು ಹೆಜ್ಜೆ ಇಡಬೇಕೆಂಬುದೇ ಗೊತ್ತಾಗುತ್ತಿಲ್ಲ ಎಂದು ಅಧಿಕಾರಿಗಳು ಸಭೆ ಗಮನಕ್ಕೆ ತಂದರು.

ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಹಣ ಇರದೇ ಇದ್ದರೆ ರೈತರಿಂದ ಭೂಮಿ ಏಕೆ ಪಡೆದಿರಿ. ಈ ಬಡಾವಣೆಯಿಂದ ಕುಡಾಗೆ ನಷ್ಟವಾದರೆ ಮಾಡುವುದು ಹೇಗೆ? ಎಂದು ಖಾರವಾಗಿ ಪ್ರಶ್ನಿಸಿದರಲ್ಲದೇ ರೈತರಿಗೆ ನೇರವಾಗಿ ಪರಿಹಾರ ದೊರಕಬೇಕೆಂದರು. ಇದಕ್ಕೆ ಜಿಲ್ಲಾಧಿಕಾರಿ ಬಿ. ಶರತ್‌ ಅವರು, ಭೂಮಿ ನೀಡಿದ ರೈತರಿಗೆ ನೇರವಾಗಿ ಆರ್‌ಟಿಜಿಎಸ್‌ ಮೂಲಕ ಅವರ ಖಾತೆಗೆ ಪರಿಹಾರ ಪಾವತಿಯಾಗುತ್ತದೆ. ಇಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಎದುರಾಗುವುದಿಲ್ಲ ಎಂದು ವಿವರಣೆ ನೀಡಿದರು. ಒಟ್ಟಾರೆ ಈ ಬಡಾವಣೆ ಜಟಿಲವಾಗಿದೆ. ಹೀಗಾಗಿ ಸಧ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದು ಸಭೆ ಗಮನಕ್ಕೆ ತಂದರು. ಹೀಗಾಗಿ ಯಾವುದೇ ನಿರ್ಧಾರಕ್ಕೆ ಬರದೇ ಮುಂದಿನ ವಿಷಯಗಳತ್ತ ಚರ್ಚೆ ಮುಂದುವರೆಯಿತು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.