ನಮ್ಮ ಸಂವಿಧಾನ ಯಾವಾಗಲೂ ಪವಿತ್ರ ಪುಸ್ತಕ ಅಂತ ಪರಿಗಣಿಸ್ತೇವೆ; ಪ್ರಧಾನಿ ಮೋದಿ
Team Udayavani, Nov 26, 2019, 3:54 PM IST
ನವದೆಹಲಿ:ಭಾರತದ ಸಂವಿಧಾನ ಗೌರವ ಮತ್ತು ಭಾರತ, ಭಾರತೀಯರ ಒಗ್ಗಟ್ಟಿನ ನಿಲುವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ನ.26) ಸಂವಿಧಾನ ದಿನಾಚರಣೆ ಹಿನ್ನೆಲೆಯ ಲೋಕಸಭೆಯಲ್ಲಿ ವಿಶೇಷ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಭಾರತದಲ್ಲಿ ಸಂವಿಧಾನ ಅಳವಡಿಸಿಕೊಂಡ 70ನೇ ವರ್ಷಾಚರಣೆ ಸಂಭ್ರಮದಲ್ಲಿದೆ. ಸಂವಿಧಾನದ ಆಶಯದಂತೆ ನಡೆದುಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಅದರಂತೆ ನಾವೀಗ ಜನರ ಹೊಣೆಗಾರಿಕೆ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ಭಾರತದ ಸಂವಿಧಾನ ಜನರ ಕರ್ತವ್ಯ ಮತ್ತು ಹಕ್ಕುಗಳನ್ನು ಪ್ರತಿಪಾದಿಸಿದೆ. ಇದೀಗ ನಾವು ನಮ್ಮ ಸಂವಿಧಾನದ ಕರ್ತವ್ಯವನ್ನು ಹೇಗೆ ಈಡೇರಿಸಬಹುದು ಎಂಬ ಬಗ್ಗೆ ಆಲೋಚಿಸಬೇಕಾಗಿದೆ ಎಂದು ಮೋದಿ ಹೇಳಿದರು. ಅಲ್ಲದೇ ಭಾರತದ ಸಂವಿಧಾನದ ಮೇಲಿನ ವಿಶ್ವಾಸವನ್ನು ನಮ್ಮ ಜನರು ಯಾವತ್ತೂ ಬಿಟ್ಟುಕೊಟ್ಟಿಲ್ಲ ಇದಕ್ಕಾಗಿ ನಾನು 130 ಕೋಟಿ ಭಾರತೀಯರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಭಾರತದ ಸಂವಿಧಾನ ಒಂದು ಪವಿತ್ರ ಪುಸ್ತಕ ಎಂಬುದಾಗಿ ಜನರು ಪರಿಗಣಿಸಿದ್ದಾರೆ. ಜನರಿಗೆ ಬೆಳಕು ತೋರುವ ಮಾರ್ಗದರ್ಶಿಯಾಗಿದೆ. ಯಾರೇ ಆಗಲಿ ಸಂವಿಧಾನದ ಅಡಿಗಲ್ಲನ್ನು ಅಲುಗಾಡಿಸಲು ಯತ್ನಿಸಿದರೂ ಕೂಡಾ ದೇಶದ ಜನತೆ ಸಫಲರಾಗದಂತೆ ಮಾಡಿದ್ದಾರೆ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!
Madhya Pradesh: ಮತ್ತೊಬ್ಬ ಕಾಂಗ್ರೆಸ್ ಎಂಎಲ್ಎ ಬಿಜೆಪಿಗೆ
ನೂಪುರ್ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ
RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ ಕೋಟಿ ರೂ.ಗೆ ಏರಿಕೆ
MUST WATCH
ಹೊಸ ಸೇರ್ಪಡೆ
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್ ಬೇಲಿ!
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ