ಹಾಲು ಕರೆಯುವ ಯಂತ್ರ ಖರೀದಿಗೆ ಸಬ್ಸಿಡಿ

ಇಲಾಖೆಯಿಂದ ಪ್ರಸ್ತಾವನೆ

Team Udayavani, Nov 27, 2019, 4:29 AM IST

as-15

ಸಾಂದರ್ಭಿಕ ಚಿತ್ರ

ಬಂಟ್ವಾಳ: ಹೈನುಗಾರಿಕೆ ಬೆಂಬಲಿಸುವ ನಿಟ್ಟಿನಲ್ಲಿ ಸರಕಾರ ಪಶು ಸಂಗೋಪನ ಇಲಾಖೆಯಿಂದ ವಿವಿಧ ಸೌಲಭ್ಯ ನೀಡುತ್ತಿದ್ದು, ಆದರೆ ಇಲಾಖೆ ಈ ತನಕ ಹೈನುಗಾರರಿಗೆ ಹಾಲು ಕರೆಯುವ ಯಂತ್ರ ಖರೀದಿಗೆ ಸಬ್ಸಿಡಿ ನೀಡಿಲ್ಲ. ಆದರೆ ಇದೀಗ ಬಂಟ್ವಾಳ ಪಶುಸಂಗೋಪನೆ ಇಲಾಖೆಯಿಂದ ಸಬ್ಸಿಡಿ ನೀಡುವ ಕುರಿತು ಪ್ರಸ್ತಾವನೆ ಹೋಗಿದ್ದು, ಸರಕಾರದಿಂದ ಸಕಾರಾತ್ಮಕ ಸ್ಪಂದನೆಯೂ ದೊರಕಿದೆ.

ಹೈನುಗಾರರಿಂದ ಹಾಲು ಖರೀದಿ ಕಾರ್ಯವನ್ನು ಕೆಎಂಎಫ್‌ ನಿರ್ವಹಿಸುತ್ತಿದ್ದು, ಹೀಗಾಗಿ ಕೆಎಂಎಫ್‌ನಿಂದಲೇ ಯಂತ್ರಕ್ಕೆ ಸಬ್ಸಿಡಿ ನೀಡಲಾಗುತ್ತಿದೆ. ಹಾಲು ಕರೆಯಲು ಸಾಧ್ಯವಾಗುತ್ತಿಲ್ಲ ಎಂದು ಸಣ್ಣ ಹೈನುಗಾರರಿಂದ ಯಂತ್ರಕ್ಕೆ ಬೇಡಿಕೆ ಬರುತ್ತಿರುವುದರಿಂದ ಪಶುಸಂಗೋಪನೆ ಇಲಾಖೆಯಿಂದ ಸಹಾಯಕ ನಿರ್ದೇಶಕರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಅದಕ್ಕೆ ಪೂರಕ ಸ್ಪಂದನೆ ನೀಡಿರುವ ಸರಕಾರದ ಪ್ರಿನ್ಸಿಪಲ್‌ ಸೆಕ್ರೆಟರಿ ಅವರು, ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಲಭ್ಯವಿದ್ದರೆ ಆ ಕುರಿತು ಯೋಚಿಸಲಾಗುತ್ತದೆ. ಇಲ್ಲದೇ ಇದ್ದರೆ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲಾಗುತ್ತದೆ ಎಂದು ಬಂಟ್ವಾಳ ಸಹಾಯಕ ನಿರ್ದೇಶಕರಿಗೆ ಭರವಸೆ ನೀಡಿದ್ದಾರೆ.

ಬಂಟ್ವಾಳ ತಾಲೂಕಿನಲ್ಲಿ ಒಟ್ಟು 7,810 ಹೈನುಗಾರರಿದ್ದು, ಅದರಲ್ಲಿ ಸುಮಾರು 550 ಮಂದಿ ಹಾಲು ಕರೆಯುವ ಯಂತ್ರವನ್ನು ಉಪಯೋಗಿಸುತ್ತಿದ್ದಾರೆ. ಅಂದರೆ ದಿನವೊಂದಕ್ಕೆ ಕನಿಷ್ಠ 25 ಲೀ. ಹಾಲು ಪೂರೈಕೆ ಮಾಡುವ ಹೈನುಗಾರರಿಗೆ ಕೆಎಂಎಫ್‌ನಿಂದ ಸಬ್ಸಿಡಿ ದರದಲ್ಲಿ ಹಾಲು ಕರೆಯುವ ಯಂತ್ರ ನೀಡಲಾಗುತ್ತಿದೆ ಎಂದು ಕೆಎಂಎಫ್‌ ವಿಸ್ತರಣಾಧಿಕಾರಿ ಜಗದೀಶ್‌ ತಿಳಿಸಿದ್ದಾರೆ.

ಆರ್ಥಿಕ ವರ್ಷದ ಅರ್ಧದಲ್ಲಿ ಪ್ರಸ್ತಾವನೆ
ಬಂಟ್ವಾಳ ಪಶುಸಂಗೋಪನ ಇಲಾಖೆ ಆರ್ಥಿಕ ವರ್ಷದ ಅರ್ಧ ಭಾಗದಲ್ಲಿ ಹಾಲು ಕರೆಯುವ ಯಂತ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವು ದರಿಂದ ಈ ಬಾರಿಯ ಬಜೆಟ್‌ನಲ್ಲಿ ಅದು ಕಷ್ಟಸಾಧ್ಯ. ಆದರೆ ಮುಂದಿನ ಬಾರಿಯ ಬಜೆಟ್‌ನಲ್ಲಿ ಅದಕ್ಕೆ ಅನುದಾನ ಹೊಂದಾಣಿಕೆ ಮಾಡಿಕೊಂಡು ಬಜೆಟ್‌ನಲ್ಲೇ ಸೇರಿಸಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಇಲಾಖೆಯ ಪ್ರಕಾರ ಸಾಮಾನ್ಯವಾಗಿ ಹಾಲು ಕರೆಯುವ ಯಂತ್ರಕ್ಕೆ 70 ಸಾವಿರ ರೂ.ವರೆಗೆ ತಗಲುತ್ತದೆ. ಆದರೆ ಪುತ್ತೂರಿನವರೊಬ್ಬರು ತಯಾರಿಸುವ ಯಂತ್ರವು 30 ಸಾವಿರ ರೂ.ಗೆ ಲಭ್ಯವಾಗಲಿದ್ದು, ಅದು ಸಣ್ಣ ಹೈನುಗಾರರಿಗೂ ಅನುಕೂಲವಾಗಲಿದೆ. ಹೀಗಾಗಿ ಸರಕಾರ ಸಬ್ಸಿಡಿಗೆ ಅವಕಾಶ ನೀಡಿದ್ದಲ್ಲಿ ಸಣ್ಣ ಹೈನುಗಾರರು ಹಾಲು ಕರೆಯುವ ಯಂತ್ರ ಖರೀದಿಸಬಹುದಾಗಿದೆ ಎಂದು ಇಲಾಖೆ ಹೇಳುತ್ತಿದೆ.

ಬಜೆಟ್‌ನಲ್ಲಿ ಸೇರಿಸುವ ಭರವಸೆ
ಸಣ್ಣ ಹೈನುಗಾರರಿಂದ ಹಾಲು ಕರೆಯುವ ಯಂತ್ರಕ್ಕೆ ಬೇಡಿಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಸರಕಾರದ ಕಾರ್ಯದರ್ಶಿಗಳಿಂದ ಸಕಾರಾತ್ಮಕ ಸ್ಪಂದನೆ ದೊರಕಿದ್ದು, ಈ ಬಾರಿ ಸಾಧ್ಯವಾಗದಿದ್ದರೆ ಮುಂದಿನ ಬಜೆಟ್‌ನಲ್ಲಿ ಸೇರಿಸುವ ಕುರಿತು ಭರವಸೆ ನೀಡಿದ್ದಾರೆ. ಈ ಹಿಂದೆ ಇಲಾಖೆಯು ಹಾಲು ಕರೆಯುವ ಯಂತ್ರಕ್ಕೆ ಸಬ್ಸಿಡಿ ನೀಡುತ್ತಿರಲಿಲ್ಲ.
 - ಡಾ| ಹೆನ್ರಿ, ಸ. ನಿರ್ದೇಶಕರು, ಪಶುಸಂಗೋಪನ , ಇಲಾಖೆ, ಬಂಟ್ವಾಳ

- ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.