ಕಳೆದ ವರ್ಷದ 38 ಕೋಟಿ ರೂ. ಬೆಳೆವಿಮೆ ಬಾಕಿ

ಮುಂಗಾರು 33 ಕೋಟಿ, ಹಿಂಗಾರಿ 5 ಕೋಟಿ ಬಾಕಿ ಬ್ಯಾಂಕ್‌ ಖಾತೆ ಸರಿಯಿಲ್ಲ ಎನ್ನುತ್ತಿದೆ ಇಲಾಖೆ ಯಾರಧ್ದೋ ತಪ್ಪಿಗೆ ರೈತರ ಪರದಾಟ

Team Udayavani, Nov 27, 2019, 3:18 PM IST

27-November-18

„ದತ್ತು ಕಮ್ಮಾರ
ಕೊಪ್ಪಳ:
ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಸಂಬಂಧಿಸಿ ಇನ್ನೂ 38 ಕೋಟಿ ರೂ. ಬೆಳೆವಿಮೆ ಬರುವುದು ಬಾಕಿಯಿದೆ. ಕೃಷಿ ಇಲಾಖೆಯು ರೈತರ ಬ್ಯಾಂಕ್‌ ಖಾತೆಯಲ್ಲಿ ಮಿಸ್ಟೆಕ್‌ ಇವೆ ಎನ್ನುತ್ತಿದೆಯಾದರೂ ಯಾರೋ ಮಾಡಿರುವ ಎಡವಟ್ಟಿನಿಂದ ರೈತರು ವಿಮಾ ಮೊತ್ತಕ್ಕೆ ಪರದಾಡುವಂತಾಗಿದೆ.

ಹೌದು.. ಕೊಪ್ಪಳ ಜಿಲ್ಲೆ ಪದೇ ಪದೆ ಬರಕ್ಕೆ ತುತ್ತಾಗಿದೆ. ಮಳೆಯ ಕೊರತೆಯಿಂದಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಾರಿಯಾಗಿರುವ ಫಸಲ್‌ ಬಿಮಾ ಯೋಜನೆಯಡಿ ರೈತರು ಹೆಚ್ಚಿನ ಮಟ್ಟದಲ್ಲಿ ವಿಮೆ ಪಾವತಿ ಮಾಡಿ ಬರದ ಪರಿಸ್ಥಿತಿಯಲ್ಲಿ ಬೆಳೆ ಕೈ ಕೊಟ್ಟರೆ ವಿಮಾ ಮೊತ್ತವಾದರೂ ಕೈ ಹಿಡಿಯಲಿದೆ ಎಂಬ ಆಶಾಭಾವದಲ್ಲಿದ್ದಾರೆ.

38 ಕೋಟಿ ರೂ. ಬರೋದು ಬಾಕಿ: 2018-19ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ 49,239 ರೈತರು ವಿಮೆ ಕಟ್ಟಿದ್ದಾರೆ. ಇದರಲ್ಲಿ ಇನ್ನೂ 12,660 ರೈತರ 33.15 ಕೋಟಿ ರೂ. ವಿಮೆ ಮೊತ್ತವನ್ನು ಸರ್ಕಾರ ರೈತರ ಖಾತೆಗೆ ಜಮೆ ಮಾಡಿಲ್ಲ. ಇನ್ನೂ ಹಿಂಗಾರು ಹಂಗಾಮಿನಲ್ಲಿ 41,306 ರೈತರು ವಿಮೆ ಪಾವತಿ ಮಾಡಿದ್ದು, ಈ ಪೈಕಿ 2,299 ರೈತರಿಗೆ 5.39 ಕೋಟಿ ರೂ. ಬರುವುದು ಬಾಕಿಯಿದೆ. ಕಳೆದ ಮುಂಗಾರು-ಹಿಂಗಾರು ಸೇರಿ 14,959 ರೈತರಿಗೆ 38. ಕೋಟಿ ರೂ. ವಿಮೆ ಮೊತ್ತ ಬರುವುದು ಬಾಕಿಯಿದೆ.

ಬ್ಯಾಂಕ್‌ ಖಾತೆ ಮಿಸ್ಟೆಕ್‌: ಕಳೆದ ಕೆಲವು ತಿಂಗಳ ಹಿಂದೆಯೇ ವಿಮಾ ಕಂಪನಿಯಿಂದ ಕೃಷಿ ಇಲಾಖೆಗೆ 40 ಕೋಟಿ ರೂ. ಹಸ್ತಾಂತರ ಮಾಡಲಾಗಿದೆ. ಕೃಷಿ ಇಲಾಖೆ ಆಯುಕ್ತರ ಖಾತೆಯಲ್ಲಿ ವಿಮಾ ಮೊತ್ತವು ಕೊಳೆಯುತ್ತಾ ಬಿದ್ದಿದೆ. ರೈತರು ಮಾತ್ರ ಪ್ರತಿ ನಿತ್ಯ ಕೃಷಿ ಇಲಾಖೆಗೆ ಅಲೆದಾಡುವಂತ ಸ್ಥಿತಿ ತಪ್ಪಿಲ್ಲ. ರೈತ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಆದರೂ ಇಲಾಖೆ ಅಧಿಕಾರಿಗಳು ವಿಮಾ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳುತ್ತಿಲ್ಲ.

ಈ ಬಗ್ಗೆ ಅ ಧಿಕಾರಿಗಳನ್ನು ಕೇಳಿದರೆ, ರೈತರ ಖಾತೆಗಳು ಮಿಸ್ಟೆಕ್‌ ಆಗಿವೆ. ಅವುಗಳನ್ನು ಪರಿಶೀಲಿಸಿ ಪುನಃ ರಾಜ್ಯ ಇಲಾಖೆಗೆ ಕಳಿಸಿಕೊಟ್ಟಿದ್ದೇವೆ. ಹಂತ ಹಂತವಾಗಿ ರೈತರ ಖಾತೆಗೆ ನೇರವಾಗಿ ವಿಮೆ ಮೊತ್ತ ಜಮೆಯಾಗಲಿದೆ ಎನ್ನುತ್ತಿದ್ದಾರೆ. ವಿಶೇಷವೆಂದರೆ, 14 ಸಾವಿರ ರೈತರ ಖಾತೆಗಳು ಹೇಗೆ ತಾನೆ ತಪ್ಪಾಗಲು ಸಾಧ್ಯ ಎನ್ನುವ ಪ್ರಶ್ನೆ ಜನರಲ್ಲಿ ಮೂಡಿದೆ. ಇಲ್ಲಿ ಬ್ಯಾಂಕ್‌ ಸಿಬ್ಬಂದಿ ಮಾಡಿದ ಎಡವಟ್ಟೋ? ಕೃಷಿ ಇಲಾಖೆ ಮಾಡಿರುವ ಎಡವಟ್ಟೋ? ಅಥವಾ ರೈತನು ಮಾಡಿದ ಎಡವಟ್ಟೋ ವಿಮಾ ಮೊತ್ತ ಮಾತ್ರೆ ರೈತರ ಕೈ ಸೇರುತ್ತಿಲ್ಲ.

ಕಳೆದ ಸಾಲಿನ ಮುಂಗಾರು-ಹಿಂಗಾರಿನಲ್ಲಿ ಬರಬೇಕಿರುವ ವಿಮೆಯ ಮೊತ್ತವನ್ನು ಕೂಡಲೇ ರೈತರ ಖಾತೆಗೆ ಜಮೆ ಮಾಡಬೇಕು ಎನ್ನುವ ಒತ್ತಾಯ ರೈತರಿಂದ ಕೇಳಿ ಬಂದಿದೆ. ಸಂಬಂಧಿಸಿದ ಅಧಿ ಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕಿದೆ.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.