ರೋಗಿಗಳಿಗೆ ಎಕ್ಸ್ರೇ ಸೌಲಭ್ಯ ಸಿಗ್ತಿಲ್ಲ

ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಯ ಎಕ್ಸ್ರೇ ಮಿಷನ್‌ ಹಾಳಾಗಿದ್ಧರಿಂದ ತೊಂದರೆ

Team Udayavani, Nov 28, 2019, 2:46 PM IST

28-November-12

„ಎಸ್‌. ರಾಜಶೇಖರ
ಮೊಳಕಾಲ್ಮೂರು:
ಆರೋಗ್ಯ ಮತ್ತು ಕುಟುಂಬಕಲ್ಯಾಣಂ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರ ಸ್ವಕ್ಷೇತ್ರದ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಎಕ್ಸ್‌ರೇ ಸೌಲಭ್ಯ ದೊರೆಯುತ್ತಿಲ್ಲ. ಇದರಿಂದ ರೋಗಿಗಳು ಪರದಾಡುವಂತಾಗಿದೆ.

ಪಟ್ಟಣದಲ್ಲಿರುವ ನೂರು ಹಾಸಿಗೆಗಳ ಆಸ್ಪತ್ರೆ, ವೈದ್ಯರ ಕೊರತೆ ಬೆನ್ನಲ್ಲೇ ಎಕ್ಸ್ ರೇ ಸೌಲಭ್ಯದಿಂದಲೂ ವಂಚಿತವಾಗಿದೆ. ಇದುವರೆಗೆ ಹಳೆಯ ಎಕ್ಸ್‌ರೇ ಮಿಷನ್‌ನಿಂದ ಕೀಲು, ಮೂಳೆ ರೋಗಿಗಳಿಗೆ ಎಕ್ಸ್‌ರೇ ತೆಗೆಯಲಾಗುತ್ತಿತ್ತು. ಆಸ್ಪತ್ರೆಗೆ ಡಿಜಿಟಲ್‌ ಎಕ್ಸ್ರೇ ಮಿಷನ್‌ ಅಳವಡಿಸಲು ಹಳೆಯ ಮಿಷನ್‌ ಸ್ಥಳಾಂತರಿಸುವಾಗ ಹಳೆಯ ಎಕ್ಸ್‌ರೇ ಮಿಷನ್‌ ಕೆಟ್ಟು ಹೋಗಿದೆ. ಮೂರು ತಿಂಗಳಿನಿಂದ ಎಕ್ಸ್‌ರೇ ಸೌಲಭ್ಯವಿಲ್ಲದ ಕಾರಣ ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರ ತೆತ್ತು ಎಕ್ಸ್‌ರೇ ಮಾಡಿಸಿಕೊಳ್ಳಬೇಕಾದ ಸ್ಥಿತಿ ನಿಮಾಣವಾಗಿದೆ.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಸಹಾಯಕ ಮುಖ್ಯ ಅಧೀಕ್ಷಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿಗಳು ಹಳೆಯ ಎಕ್ಸ್‌ರೇ ಮಿಷನ್‌ ದುರಸ್ತಿ ಮಾಡಿಸಲು ಗಮನ ನೀಡುತ್ತಿಲ್ಲ. ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಸಬೂಬು ಹೇಳುತ್ತಾ ಕಾಲಹರಣ ಮಾಡಲಾಗುತ್ತಿದೆ ಎಂಬುದು ಸಾರ್ವಜನಿಕರ ಆರೋಪ.

ಆಸ್ಪತ್ರೆಗೆ ನಿಯೋಜನೆಗೊಂಡ ಎಲುಬು, ಕೀಲು ಮತ್ತು ಮೂಳೆ ತಜ್ಞರು ನಿಗಧಿಪಡಿಸಿದ ದಿನಗಳಲ್ಲಿ ಸೇವೆಗೆ ಬಾರದೆ ತಮಗೆ ಇಷ್ಟ ಬಂದ ದಿನಗಳಂದು ಮಾತ್ರ ಬಂದು ಮಧ್ಯಾಹ್ನಕ್ಕೆ ಹೋಗಿರುವ ನಿದರ್ಶನಗಳಿವೆ. ಸಮಸ್ಯೆಗಳ ಸುಳಿಯಲ್ಲಿರುವ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆಗೆ ಮೇಜರ್‌ ಸರ್ಜರಿ ಆಗಬೇಕು. ಆಗ ಮಾತ್ರ ಈ ಭಾಗದ ಬಡವರಿಗೆ ಉತ್ತಮ ಚಿಕಿತ್ಸೆ ದೊರೆಯುಬಹುದು.

ತಾಲೂಕು ಕೇಂದ್ರದಲ್ಲಿನ ಪಟ್ಟಣದ ನೂರು ಹಾಸಿಗೆಗಳ ಸರ್ಕಾರಿ ಆಸ್ಪತ್ರೆಯಲ್ಲಿ ಎಕ್ಸ್‌ರೇ ಮಿಷನ್‌ ಕೆಟ್ಟು ಹೋಗಿ ಮೂರು ತಿಂಗಳಾಗಿವದೆ. ಸಂಬಂಧಪಟ್ಟ ಅ ಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ. ಆದ್ದರಿಂದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಈ ಬಗ್ಗೆ ಗಂಭೀರ ಚಿಂತನೆ ನಡೆಸಿ ಸರ್ಕಾರಿ ಆಸ್ಪತ್ರೆಗೆ ಮೂಲ ಸೌಲಭ್ಯ ಕಲ್ಪಿಸಬೇಕು. .ರಾಮಾಂಜನೇಯ,
ಆರೋಗ್ಯ ಸೇವಾ ಸಮಿತಿ ಸದಸ್ಯ,
ಮೊಳಕಾಲ್ಮೂರು.

ನಿಯಮಾನುಸಾರ ಕೆಲವೇ ದಿನಗಳಲ್ಲಿ ಡಿಜಿಟಲ್‌ ಎಕ್ಸ್‌ರೇ ಮಿಷನ್‌ ಅಳವಡಿಸಲಾಗುವುದು. 22 ವರ್ಷಗಳಷ್ಟು ಹಳೆಯದಾದ ಎಕ್ಸ್‌ರೇ ಮಿಷನ್‌ ದುರಸ್ತಿಗೆ ಸಲಕರಣೆಗಳು ದೊರೆಯದ ಕಾರಣ ಪರ್ಯಾಯವಾಗಿ ಬೇರೆ ಆಸ್ಪತ್ರೆಯಲ್ಲಿರುವ ಹಳೆಯ ಎಕ್ಸ್‌ರೇ ಮಿಷನ್‌ ತರಲಾಗಿದೆ.
. ಡಾ| ಸಿ.ಎಲ್‌. ಫಾಲಾಕ್ಷ , ಜಿಲ್ಲಾ ಆರೋಗ್ಯ ಮತ್ತು
ಕುಟುಂಬ ಕಲ್ಯಾಣಾಧಿಕಾರಿ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.