“ವಿದ್ಯಾರ್ಥಿ ಜೀವನ ಸದುಪಯೋಗಿಸಿ: ಕಾಶೀ ಶ್ರೀ
ಶ್ರೀ ಭುವನೇಂದ್ರ ಕಾಲೇಜಿನ ವಜ್ರಮಹೋತ್ಸವ
Team Udayavani, Nov 29, 2019, 5:04 AM IST
ಕಾರ್ಕಳ: ವಿದ್ಯಾರ್ಥಿ ಎಂದರೆ ವಿದ್ಯೆಯನ್ನು ಅರ್ಜಿಸುವವನು ಎಂದರ್ಥ. ನಮ್ಮ ಬಾಳ್ವೆಯಲ್ಲಿ ಕಳೆಯುವ ಅತ್ಯಂತ ಸುಂದರ ಹಾಗೂ ಮಹತ್ವದ ದಿನಗಳೆಂದರೆ ಅದು ವಿದ್ಯಾರ್ಥಿ ಜೀವನ. ಹಾಗಾಗಿ ವಿದ್ಯಾರ್ಥಿ ಘಟ್ಟವನ್ನು ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ಸಂಸ್ಥಾನ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ಅವರು ನ. 28ರಂದು ಶ್ರೀ ಭುವನೇಂದ್ರ ಕಾಲೇಜಿನ ವಜ್ರ ಮಹೋತ್ಸವ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.
ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಬಂಧ ಬಹಳ ಅಮೂಲ್ಯವಾದುದು. ವಿದ್ಯಾರ್ಥಿಗಳಿಂದಲೇ ಕಾಲೇಜಿಗೆ ಹೆಸರು, ಕೀರ್ತಿ ಲಭಿಸುವುದು. ಆದರೆ, ಅದರ ಹಿಂದೆ ಅಧ್ಯಾಪಕರ ಪರಿಶ್ರಮವಿದೆ ಎಂದು ಸ್ವಾಮೀಜಿ ನುಡಿದರು.
ಭಕ್ತಿ ಗೌರವ ಭಾವನೆಯಿರಲಿ
ಅಧ್ಯಾಪಕನಾದವರಿಗೆ ವಿದ್ಯಾರ್ಥಿಗಳ ಕುರಿತು ಕಾಳಜಿಯಿರಬೇಕು. ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಭಕ್ತಿ ಗೌರವದಿಂದ ಕಾಣಬೇಕು. ಹೀಗಿದ್ದಲ್ಲಿ ಗುರುಶಿಷ್ಯರ ಸಂಬಂಧ ಉತ್ತಮವಾಗಿರುವುದು ಎಂದು ಸಂಯಮೀಂದ್ರ ತೀರ್ಥ ಸ್ವಾಮೀಜಿ ಹೇಳಿದರು.
ಶಿಕ್ಷಣ ಪದ್ಧತಿಯಲ್ಲಿ ಬದಲಾವಣೆ
ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇಂದಿನ ಶಿಕ್ಷಣ ಅಂಕ ಗಳಿಕೆಗೆ ಮಾತ್ರ ಒತ್ತು ನೀಡುತ್ತಿದೆಯೇ ಹೊರತು ಮೌಲ್ಯ ಹಾಗೂ ಸಂಸ್ಕಾರ ತುಂಬುವಲ್ಲಿ ಎಡವುತ್ತಿದೆ. ಪುಸ್ತಕ ಓದುವುದರ ಬದಲು ಮೊಬೈಲ್ನಲ್ಲಿ ಕಾಲ ಕಳೆಯುವಂತಾಗಿದೆ ಎಂದು ಸಂಯಮೀಂದ್ರ ತೀರ್ಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.
ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಶ್ರೀ ಭುವನೇಂದ್ರ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸಿ.ಎ. ಶಿವಾನಂದ ಪೈ ಸ್ವಾಗತಿಸಿ, ಉಪನ್ಯಾಸಕಿ ವನಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಅನಂತರ ಮಹಾಲಕ್ಷ್ಮೀ ಶೆಣೈ ಅವರ ಬಳಗದಿಂದ ಭಕ್ತಿ ಗಾಯನ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ