ಜೋತು ಬಿದ್ದ ವಿದ್ಯುತ್‌ ತಂತಿ

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಸೋರಿಕೆ ತಡೆಗಟ್ಟುವ ತಂತಿಗಳು ನಿರುಪಯುಕ್ತ

Team Udayavani, Nov 29, 2019, 2:40 PM IST

29-November-16

„ಭೀಮಣ್ಣ ಬಿ. ವಡವಟ್‌

ಸೈದಾಪುರ: ವಿದ್ಯುತ್‌ ಅವಶ್ಯಕತೆ ಇರುವಷ್ಟೇ ಅಪಾಯ ಕೂಡ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಸಮರ್ಪಕ ವಿದ್ಯುತ್‌ ಪೂರೈಕೆ ಮಾಡುವ ಜತೆಗೆ ಸುರಕ್ಷತೆಗೆ ಒತ್ತು ನೀಡಬೇಕಾದ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಜನರು ಜೀವ ಕೈಯಲ್ಲಿ ಹಿಡಿದು ಕಾಲ ಕಳೆಯುತ್ತಿರುವ ಸನ್ನಿವೇಶ ಗ್ರಾಮದಲ್ಲಿ ಎದುರಾಗಿದೆ.

ಪಟ್ಟಣದಲ್ಲಿನ ಪೊಲೀಸ್‌ ಕಾಲೋನಿ ಹಾಗೂ ತಾಯಿ ಕಾಲೋನಿ ಸೇರಿದಂತೆ ಇತರ ಪ್ರದೇಶಗಳಲ್ಲಿ ವಿದ್ಯುತ್‌ ತಂತಿಗಳು ಜೋತು ಬಿದ್ದಿವೆ. ಅಲ್ಲದೇ ಪೊಲೀಸ್‌ ವಸತಿ ಗೃಹಗಳಿಗೆ ಹತ್ತಿರದಲ್ಲಿಯೇ ತಂತಿಗಳಿವೆ. ಜೆಸ್ಕಾಂ ಅಧಿಕಾರಿಗಳು ಮಾತ್ರ ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂಬಂತೆ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣದಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ದಶಕಗಳ ಹಿಂದಿನ ಶಿಥಿಲ ವಿದ್ಯುತ್‌ ಕಂಬ ಹಾಗೂ ತಂತಿ ಬದಲಿಸಬೇಕು ಎಂಬುದು ಸಾರ್ವಜನಿಕರ ಒತ್ತಾಸೆಯಾಗಿದೆ. ಆದರೆ ಜೆಸ್ಕಾಂ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಜನರ ಸಮಸ್ಯೆಗಳಿಗೆ ಯಾವ ರೀತಿ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ವಿದ್ಯುತ್‌ ಉಳಿತಾಯದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾದ ಗ್ರಾಪಂನಿಂದಲೇ ವಿದ್ಯುತ್‌ ಪೋಲಾಗುತ್ತಿದೆ ಎಂಬುದಕ್ಕೆ ಸೈದಾಪುರ ಪಟ್ಟಣದಲ್ಲಿ ದಿನವಿಡಿ ಉರಿಯುವ ಬೀದಿ ದೀಪಗಳೇ ಉತ್ತಮ ಉದಾಹರಣೆಯಾಗಿವೆ. ಇಲ್ಲಿನ ವಿದ್ಯುತ್‌ ಕಂಬಗಳಿಗೆ ಹಾಕಲಾದ ಬಲ್ಬ್ಗಳು ಕರೆಂಟ್‌ ಬಂದ ಕೂಡಲೇ ಬೆಳಗಿ ಮತ್ತೆ ಕರೆಂಟ್‌ ಹೋದಾಗಲೇ ಆರುತ್ತವೆ. ವಿದ್ಯುತ್‌ ಬಲ್ಬ್ ಗಳನ್ನು ನಿಯಂತ್ರಿಸಲು ಜೆಸ್ಕಾಂ ಅಧಿಕಾರಿಗಳು ಹಾಗೂ ಗ್ರಾಪಂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಪರಿಣಾಮ ಅನಾವಶ್ಯಕವಾಗಿ ವಿದ್ಯುತ್‌ ಪೋಲಾಗುತ್ತಿದೆ.

ವಿದ್ಯುತ್‌ ಸೋರಿಕೆ ತಡೆಗಟ್ಟುವ ತಂತಿಗಳು ನಿರುಪಯುಕ್ತವಾಗಿವೆ. ವಿದ್ಯುತ್‌ ಸೋರಿಕೆ ಮತ್ತು ಅಪಘಾತ ತಡೆಗಟ್ಟಲು ಪಟ್ಟಣದ ಅನೇಕ ಕಡೆ ನೂತನ ತಂತಿ ಹಾಕಲಾಗಿದೆ. ಆದರೆ ಹಾಕಿರುವ ಗುತ್ತಿಗೆದಾರರ ಕಳಪೆ ಕಾರ್ಯ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವುಗಳು ನಿರುಪಯುಕ್ತವಾಗಿದೆ.ಸೈದಾಪುರದಲ್ಲಿ ವಿದ್ಯುತ್‌ ತಂತಿಗಳು ಜೋತು ಬಿದ್ದಿವೆ.

ಸ್ವಲ್ಪ ಗಾಳಿ ಬೀಸಿದರೂ ಬೆಂಕಿ ಕಾಣಿಸಿಕೊಳ್ಳುತ್ತದೆ. ಅದರಲ್ಲಿಯೂ ಪೊಲೀಸ್‌ ಕಾಲೋನಿಯಲ್ಲಿರುವ ತಂತಿಗಳು ಅನೇಕ ಬಾರಿ ಕಡಿದು ಬಿದ್ದಿವೆ. ಇದರ ಬಗ್ಗೆ ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಇನ್ನೂ ಕೂಡ ಬಗೆಹರಿಸಿಲ್ಲ. ಇನ್ನು ಮುಂದಾದರು ಜೋತು ಬಿದ್ದಿರುವ ತಂತಿಗಳನ್ನು ಬಿಗಿಗೊಳಿಸಬೇಕು.
ಭೀಮಣ್ಣ ಮಡಿವಾಳಕರ್‌
ಸ್ಥಳೀಯ ನಿವಾಸಿ

ಸೈದಾಪುರ ಪೊಲೀಸ್‌ ಕಾಲೋನಿಗೆ ಜೆಸ್ಕಾಂ ಸಿಬ್ಬಂದಿ ಕಳುಹಿಸಿ ಅಲ್ಲಿರುವ ಸಮಸ್ಯೆ ಪರಿಹರಿಸಲು ಸೂಚಿಸುತ್ತೇನೆ. ಸಮಯಕ್ಕೆ ತಕ್ಕಂತೆ ಬೀದಿ ದೀಪಗಳನ್ನು ನಿಯಂತ್ರಿಸುವುದು ಗ್ರಾಪಂ ಜವಾಬ್ದಾರಿ. ಆದರೂ ಈ ಬಗ್ಗೆ ಗ್ರಾಪಂ ಅಧ್ಯಕ್ಷರು ಮತ್ತು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುತ್ತೇನೆ.
ವಿಶ್ವನಾಥರೆಡ್ಡಿ
ಜೆಸ್ಕಾಂ ಎಇಇ ಯಾದಗಿರಿ

ಟಾಪ್ ನ್ಯೂಸ್

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.