ಈರುಳ್ಳಿ ಬೆಲೆ ಗಗನಕ್ಕೆ, ಕೆ.ಜಿ.ಗೆ 100 ರೂ.


Team Udayavani, Nov 29, 2019, 2:54 PM IST

cb-tdy-1

ಗೌರಿಬಿದನೂರು: ಕಳೆದ 2-3 ತಿಂಗಳುಗಳಿಂದ ಬೆಲೆ ಏರಿಕೆಯಿಂದ ಗ್ರಾಹಕರಿಗೆ ಕಣ್ಣೀರು ತರಿಸಿದ್ದ ಈರುಳ್ಳಿ ಬೆಲೆ ತಹಬದಿಗೆ ಬಂತು ಎನ್ನುವ ಹೊತ್ತಿನಲ್ಲಿಯೇ, ಮತ್ತೆ ಬೆಲೆ ಏರಿಕೆಯಾಗಿದ್ದು, ಗ್ರಾಹಕರಿಗೆ ಮತ್ತು ಹೋಟೆಲ್‌ ಮಾಲೀಕರಿಗೆ ಅಶ್ರುಧಾರೆ ತರಿಸುತ್ತಿದೆ.

ಮತ್ತಷ್ಟು ಏರಿಕೆ ಸಾಧ್ಯತೆ: ತಿಂಗಳ ಹಿಂದೆಯಷ್ಟೇ ಒಂದು ಕೆ.ಜಿ.ಗೆ 40 ರಿಂದ 60ರ ಆಸುಪಾಸಿನಲ್ಲಿದ್ದ ಬೆಲೆ, ನೆರೆ ಪ್ರವಾಹದಿಂದ ಬೆಳೆ ಹಾನಿಯ ಬೆನ್ನಲ್ಲೇ ದುಪ್ಪಟ್ಟಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಒಂದು ಕೆ.ಜಿ 100ರಿಂದ 120 ರೂ.ವರೆಗೆ ಮಾರಾಟವಾಗುತ್ತಿದೆ. ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ಏರುಗತಿಯಲ್ಲಿ ಸಾಗಲಿದೆ ಎಂಬುದು ವರ್ತಕರ ಅಭಿಪ್ರಾಯ.

ಬೆಲೆ ನಿರಂತರವಾಗಿ ಏರುಗತಿ: ಚಿಲ್ಲರೆ ಮಾರುಕಟ್ಟೆಯಲ್ಲಿ ಕಳಪೆ ದರ್ಜೆಯ ನಿಂಬೆಹ ಣ್ಣಿನ ಗಾತ್ರದ ಈರುಳ್ಳಿ ಯನ್ನು ಕೆ.ಜಿ.ಗೆ 60 ವರೆಗೆ ಬಿಕರಿಯಾಗುತ್ತಿದೆ. ಗಗನಮುಖೀಯಾಗಿದ್ದ ಈರುಳ್ಳಿ ಬೆಲೆ ಕೇಂದ್ರ ಸರ್ಕಾರ ರಫ್ತು ನಿಷೇಧ ಹೇರಿದ ಬಳಿಕ ಸಹಜ ಸ್ಥಿತಿಗೆ ಬಂದು ಗ್ರಾಹಕರಲ್ಲಿ ನೆಮ್ಮದಿಯ ನಿಟ್ಟುಸಿರು ತಂದಿ  ದ್ದರೂ ಈರುಳ್ಳಿ ಹೆಚ್ಚು ಸ್ಟಾಕ್‌ ಇಲ್ಲದಿರುವುದರಿಂದ ಬೆಲೆ ನಿರಂತರ ವಾಗಿ ಏರುತ್ತಿದೆ. ಗೌರಿ ಬಿದನೂರು ಮಾರುಕಟ್ಟೆಗೆ ಮುಖ್ಯವಾಗಿ ಮಹಾರಾಷ್ಟ್ರ, ಸೊಲ್ಲಾಪುರ, ಪುಣೆ ಮಾರುಕಟ್ಟೆಯಿಂದ ಈರುಳ್ಳಿ ಆವಕವಾಗುತ್ತದೆ. ಗೌರಿಬಿದನೂರು ತಾಲೂಕಿನಲ್ಲಿ ಈರುಳ್ಳಿಯನ್ನು ಪ್ರಮುಖ ವಾಣಿಜ್ಯ ಬೆಳೆಯಾಗಿ ಬೆಳೆಯುವುದಿಲ್ಲ. ಹೀಗಾಗಿ, ನಗರದ ವರ್ತಕರು ಈರುಳ್ಳಿ ಗಾಗಿ ಹೊರಗಿನ ಮಾರುಕಟ್ಟೆಯನ್ನು ಎದುರು ನೋಡಬೇಕಾದ ಸ್ಥಿತಿ ಇದೆ.

ಸ್ವಲ್ಪವೇ ಖರೀದಿ: ಪ್ರತಿಯೊಂದು ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಈರುಳ್ಳಿ. ತರಕಾರಿಗಳು ಮುಖ್ಯ. ಇವುಗಳನ್ನು ಬಳಸದೆ ಸ್ವಾದಿಷ್ಟ ಅಡುಗೆ ತಯಾರಿಸಲು ಸಾಧ್ಯವಿಲ್ಲ. ಹೀಗಾಗಿ, ಎಷ್ಟೇ ಬೆಲೆ ಏರಿಕೆಯಾದರೂ ಖರೀದಿಸಲೇ ಬೇಕಾಗುತ್ತದೆ. ಬೆಲೆ ಕಡಿಮೆ ಯಾಗಿದ್ದ ವೇಳೆ ಹೆಚ್ಚು ಕೊಳ್ಳುತ್ತಿದ್ದೆವು. ಈಗ ಸ್ವಲ್ಪ ಪ್ರಮಾಣದಲ್ಲಿ ಖರೀದಿಸುತ್ತೇವೆ ಎಂದು ಗ್ರಾಹಕರು ಹೇಳಿದರೆ, ಹೋಟೆಲ್‌ನವರು ಈರುಳ್ಳಿಯನ್ನು ಹೆಚ್ಚಾಗಿ ಖರೀದಿಸುತ್ತಿಲ್ಲ. ಬದಲಿಗೆ ಕೋಸನ್ನು ಬಳಸುತ್ತಿದ್ದಾರೆ. ಅದೇ ರೀತಿ ಬೋಂಡಾ ಮತ್ತು ಪಕೋಡಾ ಮಾರಾಟ ಮಾಡುವವರೂ ಸಹ ಈರುಳ್ಳಿ ಬೆಲೆ ಹೆಚ್ಚಳವಾಗಿರುವುದರಿಂದ ಮೆಣಸಿನಕಾಯಿ ಬಜ್ಜಿ ಮಾರಾಟ ಮಾಡುತ್ತಿದ್ದು, ಈರುಳ್ಳಿ ಪಕೋಡ ಮಾರಾಟ ಮಾಡುವುದನ್ನೇ ಸ್ಥಗಿತಗೊಳಿಸಿದ್ದಾರೆ.

ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕಡಿಮೆ ಆಯಿತು ಎನ್ನುವಷ್ಟರಲ್ಲಿ ದುಪ್ಪಟ್ಟಾಗಿದೆ. ಜತೆಗೆ ಶುಂಠಿ ಬೆಲೆ ಕೂಡ ವಿಪರೀತವಾಗಿ ಏರಿಕೆಯಾಗಿದೆ. ಹಾಗಂತ ನಾವು ಏಕಾಏಕಿ ಆಹಾರ ಪದಾರ್ಥಗಳು, ಖಾದ್ಯಗಳ ಬೆಲೆ ಏರಿಸಲು ಆಗುವುದಿಲ್ಲ. ಇದರಿಂದ ಹೋಟೆಲ್‌ ಮಾಲೀಕರ ಖರ್ಚು ಹೆಚ್ಚಾಗುತ್ತಿದೆ ಎನ್ನುತ್ತಾರೆ ಹೋಟೆಲ್‌ ಮಾಲೀಕರು .

 

-ವಿ.ಡಿ.ಗಣೇಶ್‌ ಗೌರಿಬಿದನೂರು

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.