ದಾಸ ಸಾಹಿತ್ಯಕ್ಕೆ ಸ್ತ್ರೀಯರ ಬಲ

ಮಹಿಳಾ ದಾಸ ಸಾಹಿತ್ಯ ಕಾರ್ಯಾಗಾರದಲ್ಲಿ ಮಂತ್ರಾಲಯ ಶ್ರೀ ಅಭಿಮತ

Team Udayavani, Nov 29, 2019, 6:32 PM IST

29-November-27

ರಾಯಚೂರು: ದಾಸ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದು ಪುರುಷರೇ ಆದರೂ ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವಲ್ಲಿ ಮಹಿಳೆಯರ ಪಾತ್ರ ಅವಿಸ್ಮರಣೀಯ. ಮಹಿಳೆಯರಿಂದ ದಾಸ ಸಾಹಿತ್ಯ ಮತ್ತಷ್ಟು ಬಲಗೊಂಡಿತು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿಪ್ರಾಯಪಟ್ಟರು.

ಗುಲ್ಬರ್ಗ ವಿಶ್ವವಿದ್ಯಾಲಯದ ದಾಸಸಾಹಿತ್ಯ ಪೀಠ ಹಾಗೂ ಸ್ನಾತಕೋತ್ತರ ಕೇಂದ್ರದ ಸಹಯೋಗದಲ್ಲಿ ಗುರುವಾರ ನಗರದ ಟ್ಯಾಗೋರ್‌ ಶಿಕ್ಷಣ ಸಂಸ್ಥೆಯ ಎಸ್‌ಆರ್‌ಕೆ ಬಿಇಡಿ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಿಳಾ ದಾಸಸಾಹಿತ್ಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಹರಿದಾಸ ಸಾಹಿತಿಗಳು ಕುಲಭೇದ ಎಣಿಸದೆ ಕೀರ್ತನೆಗಳ ಮೂಲಕ ಜನರಲ್ಲಿ ಸಮಾನತೆ ತತ್ವ ಸಾರಿದರು. ಸರಳ ಭಾಷೆಯಲ್ಲಿ ಸುಂದರ ಸಾಹಿತ್ಯ ರಚಿಸಿ ಆ ಮೂಲಕ ಬೋಧಿಸಿದರು. ಜಗನ್ನಾಥ ದಾಸರು ಇಡೀ ವಿಶ್ವಕ್ಕೆ ಹರಿಕತಾಮೃತ ಕೊಡುಗೆ ನೀಡಿದ್ದಾರೆ. ರಾಯಚೂರು ಜಿಲ್ಲೆ ಹರಿದಾಸರ ತವರೂರು ಎನ್ನುವುದು ನಿಜಕ್ಕೂ ವಿಶೇಷ. ಈ ನಾಡಿನಲ್ಲಿ ಅನೇಕಾನೇಕ ದಾಸರು ಆಗಿ ಹೋಗಿದ್ದಾರೆ. ಗೋಪಾಲದಾಸರು, ವಿಜಯದಾಸರು, ಜಗನ್ನಾಥದಾಸರು, ಪ್ರಾಣೇಶದಾಸರು ಸೇರಿದಂತೆ ಅವರ ಶಿಷ್ಯ ಪರಂಪರೆ 164ಕ್ಕೂ ಹೆಚ್ಚು ಹರಿದಾಸರ ಮುಖ್ಯ ಕಾರ್ಯಕ್ಷೇತ್ರ ಇದಾಗಿದೆ ಎಂದು ಶ್ಲಾಘಿಸಿದರು.

ಇದು ಪುರಂದರ ದಾಸರು ಸಂಚರಿಸಿದ ನಾಡು, ಗೋಪಾಲದಾಸರ ಜನ್ಮನೆಲೆಯಾಗಿದೆ. ದಾಸರು ಸಮಾಜದ ಉದ್ಧಾರಕ್ಕೆ ತಮ್ಮ ಬದುಕನ್ನೇ ತ್ಯಾಗ ಮಾಡಿದರು. ಅಂಥ ದಾಸರ ಸ್ಮರಣೆ ಸ್ತುತ್ಯರ್ಹ. ಶ್ರೀಮಠ ಕೂಡ ದಾಸಸಾಹಿತ್ಯ ಉಳಿವಿಗೆ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದೆ. ಇದು ಮುಂದೆಯೂ ಸಾಗಲಿದೆ. ಹರಿದಾಸ ಸಾಹಿತ್ಯ ನಿಂತ ನೀರಾಗಬಾರದು. ಸಾಹಿತ್ಯವು ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ. ವಿಶ್ವದ ಸ್ವತ್ತಾಗಲಿ ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಹರಿದಾಸ ಸಾಹಿತ್ಯ ವಿಭಾಗದ ನಿವೃತ್ತ ಮುಖ್ಯಸ್ಥೆ ಡಾ| ಟಿ.ಎಸ್‌.ನಾಗರತ್ನ ಮಾತನಾಡಿ, ಸುಮಾರು 243 ಮಹಿಳಾ ದಾಸ ಸಾಹಿತಿಗಳನ್ನು ಗುರುತಿಸಲಾಗಿದೆ. ದಾಸ ಸಾಹಿತ್ಯ ಮಹಿಳೆಯರ ಹೊರತಾಗಿಲ್ಲ. ಸಾಹಿತ್ಯದಲ್ಲಿ ಹೆಣ್ಣಿನ ಪಾತ್ರ ದಾಖಲಾಗಿದ್ದು, 12ನೇ ಶತಮಾನದಲ್ಲಿ. ಅದರ ಬಳಿಕ ಸುಮಾರು 18ನೇ ಶತಮಾನದಲ್ಲಿ ದಾಖಲಾಯಿತು. ಆಗ ಚಾಲ್ತಿಯಲ್ಲಿದ್ದ ದಾಸ ಸಾಹಿತ್ಯಕ್ಕೆ ಮಹಿಳೆಯರು ಅಗಾಧ ಕೊಡುಗೆ ನೀಡಿದ್ದಾರೆ ಎಂದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ| ಪರಿಮಳ ಅಂಬೇಕರ್‌ ಅಧ್ಯಕ್ಷತೆ ವಹಿಸಿದ್ದರು. ಗುಲ್ಬರ್ಗ ವಿವಿ ಕುಲಸಚಿವ ಪ್ರೊ| ಸಿ.ಸೋಮಶೇಖರ, ಸಿಂಡಿಕೇಟ್‌ ಸದಸ್ಯ ವಿಜಯ ಭಾಸ್ಕರ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್‌. ಕೆ.ಅಮರೇಶ, ಕಾರ್ಯದರ್ಶಿ ದರೂರು ಬಸವರಾಜ, ಥಾಮಸ್‌, ಗಿರೀಶ ಕನಕವೀಡು, ಬಿ.ಎಸ್‌.ನಾಗರತ್ನ, ಡಾ| ಜಯಲಕ್ಷ್ಮೀ ಮಂಗಳಾಮೂರ್ತಿ ಸೇರಿ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.