ಎಸ್‌.ನಾರಾಯಣ್‌ ಪುತ್ರ ಪವನ್‌ ಹೀರೋ

ಮುತ್ತು ರತ್ನ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ

Team Udayavani, Nov 30, 2019, 7:00 AM IST

muthu_ratna

ಹಿರಿಯ ನಿರ್ದೇಶಕ ಎಸ್‌.ನಾರಾಯಣ್‌ ಅವರ ಪುತ್ರ ಪಂಕಜ್‌ ಹೀರೋ ಆಗಿದ್ದು ಗೊತ್ತೇ ಇದೆ. ಅವರ ಮತ್ತೊಬ್ಬ ಪುತ್ರ ಪವನ್‌ ಹೀರೋ ಆಗುತ್ತಿದ್ದಾರೆ ಎಂಬ ಮಾತು ಆಗಾಗ ಓಡಾಡುತ್ತಲೇ ಇತ್ತು. ಆ ಮಾತು ಈಗ ನಿಜವಾಗಿದೆ. ಹೌದು, ಪವನ್‌ ಈಗ ಹೊಸ ಚಿತ್ರಕ್ಕೆ ಹೀರೋ. ಆ ಚಿತ್ರಕ್ಕೆ “ಚಿ.ರಾ. ಮುತ್ತು ಚಿ.ಸೌ.ರತ್ನ’ ಎಂಬ ಹೆಸರಿಡಲಾಗಿದೆ. ಈ “ಮುತ್ತು ರತ್ನ’ದ ಹಿಂದೆ ನಿರ್ದೇಶಕ ಶ್ರೀಕಾಂತ್‌ ಹುಣಸೂರು ನಿಂತಿದ್ದಾರೆ. ಇವರಿಗೆ ಇದು ಮೊದಲ ನಿರ್ದೇಶನದ ಚಿತ್ರ.

ಇದಕ್ಕೂ ಮೊದಲು “ಜೋಗಿ’ ಪ್ರೇಮ್‌ ಜೊತೆ ಕೆಲಸ ಮಾಡಿದ್ದಾರೆ. ಹಲವು ಧಾರಾವಾಹಿಗಳಲ್ಲೂ ಕೆಲಸ ಮಾಡಿದ ಅನುಭವ ಶ್ರೀಕಾಂತ್‌ ಹುಣಸೂರು ಅವರಿಗಿದೆ. ಚಿತ್ರದ ಶೀರ್ಷಿಕೆ ಹೇಳುವಂತೆ, ಇದೊಂದು ಲವ್‌ ಕಮ್‌ ಅರೇಂಜ್‌ ಮ್ಯಾರೇಜ್‌ ಸ್ಟೋರಿಯನ್ನು ಹೇಳುತ್ತದೆ. ಚಿತ್ರದ ಒನ್‌ಲೈನ್‌ ಸ್ಟೋರಿ ಬಗ್ಗೆ ಹೇಳುವ ನಿರ್ದೇಶಕ ಶ್ರೀಕಾಂತ್‌ ಹುಣಸೂರು, “ಇದೊಂದು ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಲವ್‌ಸ್ಟೋರಿ. ಅವಿದ್ಯಾವಂತ ಹುಡುಗನೊಬ್ಬ, ಆ ಊರಿನ ಪಾಳೇಗಾರನ ಮಗಳನ್ನು ಪ್ರೀತಿಸುವ ಕಥೆ ಹೊಂದಿದೆ.

ಗೊತ್ತು ಗುರಿ ಇಲ್ಲದ, ಬದುಕಿನ ಬಗ್ಗೆ ಕಾಳಜಿಯೇ ಇರದ ಹುಡುಗ ಲೈಫ‌ಲ್ಲಿ ಆ ಹುಡುಗಿ ಎಂಟ್ರಿಯಾದಾಗ, ಏನೆಲ್ಲಾ ಅವಘಡಗಳು ನಡೆಯುತ್ತವೆ. ಆಕೆ ಅವನ ಜೊತೆ ಇದ್ದಾಗ, ಹೇಗೆಲ್ಲಾ ಬದಲಾವಣೆಗಳಾಗುತ್ತವೆ ಎಂಬುದು ಚಿತ್ರದ ಕಥೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಶ್ರೀಕಾಂತ್‌. ಪವನ್‌ಗೆ ನಾಯಕಿಯಾಗಿ ಅಂಜನಾ ಕಾಣಿಸಿಕೊಳ್ಳುತ್ತಿದ್ದು, ಇದು ಅವರ ಮೊದಲ ಚಿತ್ರ. ಉಳಿದಂತೆ ಚಿತ್ರದಲ್ಲಿ ಚರಣ್‌ರಾಜ್‌, ನಾಗಾಭರಣ, ಸುಚೇಂದ್ರ ಪ್ರಸಾದ್‌, ರವಿಶಂಕರ್‌ಗೌಡ, ರಾಜೇಶ್‌ ನಟರಂಗ, ಗಿರಿ, ವೀಣಾಸುಂದರ್‌ ಇತರರು ನಟಿಸುತ್ತಿದ್ದಾರೆ’ ಎಂಬುದು ನಿರ್ದೇಶಕರ ಹೇಳಿಕೆ.

ಸುಮಾರು 45 ದಿನಗಳ ಕಾಲ ಕೊಳ್ಳೆಗಾಲ, ಚಾಮರಾಜನಗರ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ದೇವಕಿ ಚಿತ್ರ ನಿರ್ಮಿಸುತ್ತಿದ್ದು, ಇದು ಇವರ ಮೊದಲ ನಿರ್ಮಾಣದ ಚಿತ್ರ. ರಘುನಿಡುವಳ್ಳಿ ಸಂಭಾಷಣೆ ಬರೆದರೆ, ಲೋಕೇಶ್‌ ಸಂಗೀತವಿದೆ. ಚೇತನ್‌ಕುಮಾರ್‌, ಅರಸು ಅಂತಾರೆ, ಸಂತೊಷ್‌ ನಾಯಕ್‌ ಸಾಹಿತ್ಯವಿದೆ. ಕೃಷ್ಣ ಮಂಡ್ಯ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಡಿಸೆಂಬರ್‌ 1 ರಂದು ಚಿತ್ರಕ್ಕೆ ಮುಹೂರ್ತ ನೆರವೇರಲಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.