ಉಪ ಚುನಾವಣೆ ಬಳಿಕ ಬಿಜೆಪಿ ಸರಕಾರ ಇರುವುದಿಲ್ಲ: ದಿನೇಶ್ ಗುಂಡೂರಾವ್
Team Udayavani, Nov 29, 2019, 8:55 PM IST
ರಾಣೆಬೆನ್ನೂರು: ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರಕಾರವೇ ಇರುವುದಿಲ್ಲ. ಹಾಗಾಗಿ ಆರ್. ಶಂಕರ್ ಸಚಿವರಾಗುವುದು ಕನಸಿನ ಮಾತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕ ಆರ್. ಶಂಕರ್ಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಸುಳ್ಳು ಹೇಳುತ್ತ ಬಿಜೆಪಿಯವರು ಚುನಾವಣೆ ಗಿಮಿಕ್ ಮಾಡುತ್ತಿದ್ದಾರೆ. ಬಿಜೆಪಿ ಸುಳ್ಳುಗಾರರ ಸಂತೆಯಂತಾಗಿದೆ ಎಂದರು.
ಅನರ್ಹ ಶಾಸಕ ಆರ್. ಶಂಕರ್ ಸೋಲುವ ಭಯದಿಂದ ಅವರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ, ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗೆ ಟಿಕೆಟ್ ಕೊಟ್ಟು ಪ್ರಚಾರದಲ್ಲಿ ತೊಡಗಿರುವುದು ನಾಚಿಕೆಗೇಡಿನ ಸಂಗತಿ. ಕ್ಷೇತ್ರದ ಜನರು ತಮಗೆ ಕ್ರಿಮಿನಲ್ ಬೇಕೋ, ಸದಾಚಾರಿ ಬೇಕೋ ಎಂದು ನೀವೇ ತೀರ್ಮಾನಿಸಿ. ಸಿಎಂ ಕುರ್ಚಿ ಆಸೆಗಾಗಿ ಯಡಿಯೂರಪ್ಪ 17 ಶಾಸಕರನ್ನು ತಲಾ 20 ಕೋ.ರೂ. ಗಳಂತೆ ಖರೀದಿಸಿದ್ದಾರೆ. ರಾಜ್ಯ ಪ್ರವಾಹಕ್ಕೆ ಸಿಲುಕಿ ಬಹಳಷ್ಟು ಕುಟುಂಬಗಳು ಬೀದಿ ಪಾಲಾದರೂ ಅವರಿಗೆ ಪರಿಹಾರ ನೀಡದ ಯಡಿಯೂರಪ್ಪ ಚಿತ್ತ ಮುಂಬಯಿನಲ್ಲಿರುವ ಶಾಸಕರತ್ತಲೇ ಇತ್ತು. ರೈತರ ಸಂಕಷ್ಟಕ್ಕೆ ತಿರುಗಿಯೂ ನೋಡಲಿಲ್ಲ. ಮುಂದಿನ ಮೂರೂವರೆ ವರ್ಷಗಳ ಕಾಲ ತಾವೇ ಸಿಎಂ ಆಗಿ ಮುಂದುವರಿಯುವ ಉದ್ದೇಶದಿಂದ ಅತಿ ಹೆಚ್ಚು ಸುತ್ತಾಡಿ ಚುನಾವಣ ಪ್ರಚಾರ ಮಾಡುತ್ತಿದ್ದಾರೆ. ಅವರ ಕನಸು ನನಸಾಗದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು