ಕಾಮಗಾರಿ ಅನುಷ್ಠಾನ ಪರಿಶೀಲನೆ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆ

Team Udayavani, Nov 30, 2019, 12:44 PM IST

30-November-9

ಬಳ್ಳಾರಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿ ಸಿದಂತೆ ತಿಂಗಳವಾರು ಆರ್ಥಿಕ ಮತ್ತು ಭೌತಿಕ ಗುರಿ ನಿಗದಿಪಡಿಸಿ ಪರಿಶೀಲಿಸಲಾಗುತ್ತಿದೆ ಎಂದು ಪ್ರಾದೇಶಿಕ ಆಯುಕ್ತ ಸುಭೋದ್‌ ಯಾದವ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ತಿಂಗಳ ಅರ್ಥಿಕ ಹಾಗೂ ಭೌತಿಕ ಗುರಿ ನಿಗದಿಪಡಿಸಿ ಏಜೆನ್ಸಿವಾರು ಕೆಕೆಆರ್‌ಡಿಬಿ ವತಿಯಿಂದಲೇ ನೀಡಲಾಗಿದೆ. ನಿಗದಿಪಡಿಸಿದ ಗುರಿಯನ್ನು ಕಾಮಗಾರಿ ಅನುಷ್ಠಾನ ಮಾಡುವ ಏಜೆನ್ಸಿಗಳು ಕಡ್ಡಾಯವಾಗಿ ಮಾಡುವಂತೆ ಅವರು ಖಡಕ್‌ ಸೂಚನೆ ನೀಡಿದರು.

ಇದಕ್ಕೆ ಸಂಬಂಧಿ ಸಿದಂತೆ ಪ್ರತಿ ತಿಂಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರಗತಿ ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದ ಅವರು ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಪ್ರಗತಿ ಸಾಧಿಸದೇ ಇರುವ ಜಿಲ್ಲೆಗಳ ಜಿಲ್ಲಾಧಿ ಕಾರಿಗಳಿಗೆ ಮತ್ತು ಜಿಪಂ ಸಿಇಒ ಅವರಿಗೆ ನೋಟಿಸ್‌ ಕೂಡ ಬಂದಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.

ಕಾಮಗಾರಿಗಳು ಅನುಷ್ಠಾನಗೊಳಿಸಿ ಬಿಲ್‌ಗ‌ಳನ್ನು ಸಲ್ಲಿಸುವುದು ಮತ್ತು ಪ್ರಗತಿ ಸಾ ಧಿಸುವುದು ಏಜೆನ್ಸಿಗಳ ಕರ್ತವ್ಯ. ಇದ್ಯಾವುದು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಪಂ ಸಿಇಒ ಅವರಿಗೆ ಸಂಬಂ ಧಿಸಿದಲ್ಲ; ಅವರೇಕೇ ನೋಟಿಸ್‌ಗೆ ಉತ್ತರಿಸಬೇಕು ಎಂದು ಪ್ರಶ್ನಿಸಿದರು. ಕಾಮಗಾರಿ ಅನುಷ್ಠಾನಗೊಳಿಸುವಾಗ ಮುಖ್ಯ ಏಜೆನ್ಸಿಗಳಾದ ಲೋಕೋಪಯೋಗಿ, ಪಂಚಾಯತ್‌ರಾಜ್‌ ಎಂಜನಿಯರಿಂಗ್‌, ಕೆಆರ್‌ ಐಡಿಎಲ್‌, ನಿರ್ಮಿತಿ ಕೇಂದ್ರ, ಪಿಎಂಜಿಎಸ್‌ವೈಗಳು ಪ್ರಗತಿಯನ್ನು ಸುಧಾರಿಸಿಕೊಳ್ಳಬೇಕು. ಅಂದಾಗ ಮಾತ್ರ ಗುರಿ ತಲುಪಲು ಮತ್ತು ಸಣ್ಣಪುಟ್ಟ ಏಜೆನ್ಸಿಗಳ ಪ್ರಗತಿ ಸಾಧರಣವಾಗಿದ್ದರೂ ಸಮಸ್ಯೆ ಉದ್ಭವಿಸುವುದಿಲ್ಲ ಎಂದರು.

2019-20ರಲ್ಲಿ ಲೋಕೋಪಯೋಗಿ ಇಲಾಖೆಯ 16 ಕಾಮಗಾರಿಗಳ ಆಡಳಿತಾತ್ಮಕ ಅನುಮೋದನೆ ಕಾರಣ ಬಾಕಿ ಇವೆ, ಅಂದಾಜುಪಟ್ಟಿ ಸಿದ್ದಪಡಿಸುವಲ್ಲಿ ತಡವಾದ ಕಾರಣ ಈ ಸಮಸ್ಯೆಯಾಗಿದೆ ಎಂಬ ಅಂಶವನ್ನು ಲೋಕೋಪಯೋಗಿ ಕಾರ್ಯಪಾಲಕ ಎಂಜನಿಯರ್‌ ಅಬ್ದುಲ್‌ ವಹಾಬ್‌ ಅವರು ಪ್ರಾದೇಶಿಕ ಆಯುಕ್ತರ ಪ್ರಶ್ನೆಗೆ ಉತ್ತರಿಸಿದರು.

ಸಭೆಗೆ ಸಾರ್ವಜನಿಕರನ್ನು ಕರೆಸಿದಾಗ ನೈಜತೆ ಸ್ಪಷ್ಟ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಅಸಮರ್ಪಕ ಉತ್ತರ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ನೈಜ ಸಮಸ್ಯೆಗಳ ಅರಿವಾಗಬೇಕಾದರೇ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಸಾರ್ವಜನಿಕರನ್ನು ಆಹ್ವಾನಿಸಬೇಕು. ಅಂದಾಗಲೇ ನೈಜ ಸಮಸ್ಯೆ ಗೊತ್ತಾಗುವುದು. ಅಧಿಕಾರಿಗಳಲ್ಲಿ ಬದ್ಧತೆ ಕೊರತೆ ಕಾರಣ ಕಾಮಗಾರಿಗಳ ಅನುಷ್ಠಾನ ವಿಷಯದಲ್ಲಿ ನಿಧಾನಗತಿಯಲ್ಲಿ ಸಾಗುತ್ತಿವೆ ಎಂದು ಪ್ರಾದೇಶಿಕ ಆಯುಕ್ತ ಸುಬೋದ್‌ ಯಾದವ್‌ ಅಸಮಾಧಾನ ವ್ಯಕ್ತಪಡಿಸಿದರು.

2016-17ನೇ ಸಾಲಿನ 2017-18ನೇ ಸಾಲಿನ ಕಾಮಗಾರಿಗಳ ಪ್ರಗತಿಯನ್ನು ಸಹ ಅವರು ಪರಿಶೀಲಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌, ಜಿಪಂ ಸಿಇಒ ಕೆ.ನಿತೀಶ್‌, ಪ್ರೊಬೆಷನರಿ ಐಎಎಸ್‌ ಈಶ್ವರ್‌ ಕಾಂಡೂ ಸೇರಿದಂತೆ ವಿವಿಧ ಇಲಾಖೆಗಳ ಅನುಷ್ಠಾನ ಏಜೆನ್ಸಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.