ಜಿಲ್ಲೆಯಲ್ಲಿ 11,474 ಎಚ್‌ಐವಿ ಸೋಂಕಿತರು


Team Udayavani, Nov 30, 2019, 3:17 PM IST

kopala-tdy-1

ಕೊಪ್ಪಳ: ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಈ ಹಿಂದೆ ರಾಜ್ಯದಲ್ಲಿ ಮುಂಚೂಣಿ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೊಪ್ಪಳ ಜಿಲ್ಲೆಯೂ ಕ್ರಮೇಣ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ 11,474 ಜನರಲ್ಲಿ ಎಚ್‌ಐವಿ ಸೋಂಕಿದ್ದು, ಅವರೆಲ್ಲರೂ ವಿವಿಧ ಹಂತದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಡ್ಸ್‌ ನಿಯಂತ್ರಣ ಘಟಕವೂ ವಿವಿಧ ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.

ಆದರೂ ಗಡಿ ಭಾಗದಲ್ಲಿ ಸ್ವಲ್ಪಪ್ರಮಾಣದಲ್ಲಿ ಹೆಚ್ಚಾಗಿ ಏಡ್ಸ್‌ ಕಾಣಿಸಿಕೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಡಿಯ ಏಡ್ಸ್‌ ತಡೆಗಟ್ಟುವಿಕೆ ಮತ್ತುನಿಯಂತ್ರಣ ಘಟಕವು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಮೊದಲೆಲ್ಲ ಮನೆ ಮನೆಗೆ ತೆರಳಿ ರಕ್ಷ ಪರೀಕ್ಷೆ ನಡೆಸಿ ಸೋಂಕು ಇರುವ ಬಗ್ಗೆ ಪತ್ತೆ ಹಚ್ಚಲಾಗುತ್ತಿತ್ತು. 2002-2019ರ ವರೆಗೂ ಜಿಲ್ಲೆಯಲ್ಲಿ 4,16,513 ಜನರ ರಕ್ಷ ಪರೀಕ್ಷೆ ಮಾಡಲಾಗಿದೆ.

ಇವರಲ್ಲಿ 14,855 ಜನರಲ್ಲಿ ಎಚ್‌ಐವಿ ಇರುವುದು ಪತ್ತೆ ಮಾಡಲಾಗಿದೆ. ಆದರೆ ಇದರಲ್ಲೇ 3381 ಜನರುವಿವಿಧ ಕಾರಣಗಳಿಂದ ನಿಧನರಾಗಿದ್ದಾರೆ. ಕಳೆದ 16 ವರ್ಷದಲ್ಲಿ 2,00,203 ಪುರುಷರ ರಕ್ತಪರೀಕ್ಷೆ ನಡೆಸಿದ್ದು, ಅವರಲ್ಲಿ 7736 ಜನರಿಗೆ ಸೋಂಕಿದ್ದರೆ, 2,15,836 ಮಹಿಳೆಯರ ರಕ್ತ ಪರೀಕ್ಷೆ ನಡೆಸಿದ್ದು, 7,097 ಮಹಿಳೆಯರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಳಗೆ 22 ಜನ ಲೈಂಗಿಕ ಅಲ್ಪಸಂಖ್ಯಾತರಲ್ಲೂ ಸೋಂಕು ಇರುವುದು ಪತ್ತೆಯಾಗಿದೆ.

35-49 ವಯಸ್ಸಿನವರಲ್ಲಿ ಹೆಚ್ಚು: ಜಿಲ್ಲೆಯಲ್ಲಿ 35-49 ವಯಸ್ಸಿನೊಳಗಿನ ಜನರಲ್ಲಿ ಹೆಚ್ಚು ಎಚ್‌ಐವಿ ಸೋಂಕು ಇರುವುದುಬೆಳಕಿಗೆ ಬರುತ್ತಿದೆ. ಬಹುಪಾಲು ಇವರೇ ಅಸುರಕ್ಷಿತ ಲೈಂಗಿಕತೆಯಲ್ಲಿ ತೊಡಗುವುದರಿಂದ ಏಡ್ಸ್‌ ಬರುತ್ತಿದೆ. 2015-16ರಲ್ಲಿ 275 ಜನರಲ್ಲಿ ಕಾಣಿಸಿಕೊಂಡರೆ, 2016-17ರಲ್ಲಿ 281, 2017-18ರಲ್ಲಿ282, 2018-19ರಲ್ಲಿ 235, 2019-2020ರಲ್ಲಿ 110 ಜನರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಇನ್ನೂ ತಾಯಿಯಿಂದ ಮಕ್ಕಳಿಗೆ ಬಂದಿರುವ ಸೋಂಕಿನ ಪೈಕಿ 14 ವರ್ಷದೊಳಗಿನ ಮಕ್ಕಳಲ್ಲಿ ಕಡಿಮೆ ಪ್ರಮಾಣದಲ್ಲಿದ್ದರೆ 15-24 ವರ್ಷದೊಳಗಿನ ಯುವಕರಲ್ಲಿ ಸ್ವಲ್ಪ ಪ್ರಮಾಣವಿದ್ದರೆ, 50 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿದೆ. ಒಟ್ಟಿನಲ್ಲಿ ಜಿಲ್ಲೆಯಲ್ಲಿನ ಈ ಹಿಂದಿನ ಅಂಕಿ- ಅಂಶಗಳನ್ನು ಅವಲೋಕಿಸಿದಾಗ ಏಡ್ಸ್‌ ಸೋಂಕಿತ ರೋಗಿಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವುದು ಸ್ವಲ್ಪ ಸಮಾಧಾನದ ಸಂಗತಿಯಾಗಿದೆ. ಆದರೂ ಇನ್ನೂ ಹೆಚ್ಚಿನ ಮಟ್ಟದ ಜಾಗೃತಿ ಮೂಡಿಸಿದ್ದೇಆದಲ್ಲಿ ಸೋಂಕಿನ ಪ್ರಮಾಣ ಇನ್ನಷ್ಟು ಕಡಿಮೆ ಮಾಡಬಹುದಾಗಿದೆ.

ಗಡಿ ಭಾಗದಲ್ಲಿ ಜಾಗೃತಿಗೆ ಒತ್ತು : ಪ್ರಸ್ತುತ ದಿನದಲ್ಲಿ ಕೊಪ್ಪಳ ಜಿಲ್ಲೆಯ ಜನರು ಗುಳೆ ಹೋಗಿ ದುಡಿಮೆ ಮಾಡಿಕೊಂಡು ಪುನಃಊರುಗಳತ್ತ ಆಗಮಿಸುತ್ತಿದ್ದಾರೆ. ಅಂತವರ ರಕ್ತ ಪರೀಕ್ಷೆಯನ್ನೂ ಮಾಡಲಾಗುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯು ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯ ಗಡಿಭಾಗವಾಗುವುದರಿಂದ ಬಾಗಲಕೋಟೆ ರಾಜ್ಯದಲ್ಲಿಯೇ ಹೆಚ್ಚಿನ ಎಚ್‌ಐವಿ ಸೋಂಕಿತರು ಇರುವ ಜಿಲ್ಲೆಯಾಗಿದೆ. ಹಾಗಾಗಿ ಕುಷ್ಟಗಿ ತಾಲೂಕಿನ ಹನುಮಸಾಗರ, ಹೂಲಗೇರಿ ಭಾಗದಲ್ಲಿ ಪ್ರಸಕ್ತ ವರ್ಷ ಎಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡು ಬಂದಿದೆ. ಈ ಭಾಗದ ಜನರಿಗೆ ಬಾಗಲಕೋಟೆ ಹತ್ತಿರವಾಗುವುದರಿಂದ ಅಲ್ಲಿಗೆ ದುಡಿಮೆ ಮಾಡಲು ತೆರಳುತ್ತಿದ್ದು, ಅಲ್ಲಿಯೇ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಪ್ರಸಕ್ತ ವರ್ಷ ಜಿಲ್ಲಾಮಟ್ಟದ ಏಡ್ಸ್‌ ನಿಯಂತ್ರಣ ಕಾರ್ಯಕ್ರಮವನ್ನು ಕುಷ್ಟಗಿ ತಾಲೂಕು ಕೇಂದ್ರದಲ್ಲಿ ಆಯೋಜನೆಗೆ ರೂಪುರೇಷ ಸಿದ್ಧಗೊಳಿಸಿದೆ.

ಕೊಪ್ಪಳ ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ 34,644 ಜನರ ರಕ್ಷ ತಪಾಸಣೆ ಮಾಡಿದಾಗ 256 ಜನರಲ್ಲಿ ಎಚ್‌ಐವಿ ಸೋಂಕು ಇರುವುದು ಕಂಡು ಬಂದಿದೆ. ಕಳೆದ ಕೆಲವು ವರ್ಷಗಳ ಅಂಕಿ ಅಂಶಗಳಿಗೆಹೋಲಿಸಿದರೆ ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. –ಡಾ| ಮಹೇಶ, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ

 

-ದತ್ತು ಕಮ್ಮಾರ

ಟಾಪ್ ನ್ಯೂಸ್

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.